Jugari Cross: ಸಿನಿಮಾವಾಗಿ ಬರಲಿದೆ ಪೂರ್ಣಚಂದ್ರ ತೇಜಸ್ವಿ ಅವರ ʼಜುಗಾರಿ ಕ್ರಾಸ್‌ʼ ಕಾದಂಬರಿ


Team Udayavani, Sep 8, 2024, 3:12 PM IST

6

ಬೆಂಗಳೂರು: ಕನ್ನಡ ಸಾಹಿತ್ಯ ರಂಗಕ್ಕೆ ʼಮಾಯಾಲೋಕʼ ಪರಿಚಯಿಸಿ ʼಚಿದಂಬರ ರಹಸ್ಯʼವನ್ನಿರಿಸಿದ ʼಮೂಡಿಗೆರೆಯ ಮಾಯಾವಿʼ ಪೂರ್ಣಚಂದ್ರ ತೇಜಸ್ವಿ(Poornachandra Tejaswi) ಅವರು ಇಂದು ಹುಟ್ಟಿದ ದಿನ (ಸೆ.8ರಂದು). ಇಂದು ಅವರು ನಮ್ಮೊಂದಿಗಿಲ್ಲ ಆದರೆ ಅವರು ಹೇಳಿದ ಪರಿಸರದ ಕಥೆ, ಸೃಷ್ಟಿಸಿದ ಪಾತ್ರಗಳು ಕನ್ನಡ ಸಾಹಿತ್ಯವನ್ನು ಇಷ್ಟಪಡುವ ಅನೇಕರ ಮನಸ್ಸಿನಲ್ಲಿ ಜೀವಂತವಾಗಿ ಉಳಿದಿದೆ.

ತೇಜಸ್ವಿ ಹುಟ್ಟುಹಬ್ಬದಂದು ಸ್ಯಾಂಡಲ್‌ ವುಡ್‌ನಲ್ಲಿ(Sandalwood) ಹೊಸ ಸಿನಿಮಾವೊಂದು ಅನೌನ್ಸ್‌ ಆಗಿದೆ. ಅವರ ಜನಪ್ರಿಯ ಕಾದಂಬರಿಗಳಲ್ಲಿ ಒಂದಾಗಿರುವ ʼಜುಗಾರಿ ಕ್ರಾಸ್‌ʼ ಕಥೆಯನ್ನು ಆಧರಿಸಿಕೊಂಡು ಈ ಸಿನಿಮಾ ಮೂಡಿಬರುತ್ತಿದೆ.

ಪ್ರಜ್ವಲ್‌ ದೇವರಾಜ್‌ ಅವರ ‘ಕರಾವಳಿʼ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ ಗುರುದತ್ ಗಾಣಿಗ (Gurudatha Ganiga) ಈ ʼಜುಗಾರಿ ಕ್ರಾಸ್‌ʼ(Jugari Cross) ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ.

ತೇಜಸ್ವಿ ಅವರ ಹುಟ್ಟುಹಬ್ಬಕ್ಕೆ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್  ರಿಲೀಸ್‌ ಆಗಿದ್ದು, ಪುಸ್ತಕವೊಂದರ ಮೇಲೆ ರೈಲೊಂದು ಹೋಗುವ ಲುಕ್‌ ಪೋಸ್ಟರ್‌ ನಲ್ಲಿದೆ. “ದಂತಕತೆಯ ಜನುಮದಿನದ ಸಂಭ್ರಮದಲ್ಲಿ ಲೋಕವೇ ಮೆಚ್ಚಿದ ಅವರ ಶ್ರೇಷ್ಠ ಕೃತಿ ಸಿನಿಮಾವಾಗುವ ಸಮಯ” ನಿರ್ದೇಶಕರು ಬರೆದುಕೊಂಡಿದ್ದಾರೆ.

2025ಕ್ಕೆ ಸಿನಿಮಾ ತೆರೆಗೆ ಬರಲಿದೆ ಎಂದು ಪೋಸ್ಟರ್‌ನಲ್ಲಿ ತಿಳಿಸಲಾಗಿದೆ. ʼಜುಗಾರಿ ಕ್ರಾಸ್‌ʼ ಕಾದಂಬರಿ ಕನ್ನಡ ಸಾಹಿತ್ಯದ ಅತ್ಯುತ್ತಮ ಕಾದಂಬರಿಗಳಲ್ಲಿ ಒಂದು. ವನ್ಯ ಸಂಪತ್ತು, ದರೋಡೆ, ಭೂಗತ ಕೃತ್ಯದ ವಿಚಾರಗಳನ್ನು ಹೇಳುವ ಕಾದಂಬರಿಯಲ್ಲಿ ಒಡಲ ಸಂಪತ್ತು ಹೇಗೆಲ್ಲ ಲೂಟಿ ಆಗುತ್ತದೆನ್ನುವುದನ್ನು ಹೇಳಲಾಗಿದೆ.

ಸದ್ಯ ಫಸ್ಟ್‌ ಲುಕ್‌ ಪೋಸ್ಟರ್‌ ಮಾತ್ರ ರಿಲೀಸ್‌ ಆಗಿದ್ದು, ಕಲಾವಿದರು ಹಾಗೂ ಪಾತ್ರ ವರ್ಗದ ಬಗ್ಗೆ ಯಾವ ಮಾಹಿತಿಯೂ ಹೊರಬಿದ್ದಿಲ್ಲ.

ಸದ್ಯ ಗುರುದತ್‌ ʼಕರಾವಳಿʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು ತೇಜಸ್ವಿ ಅವರ ಕಾದಂಬರಿಯನ್ನು ಆಧರಿಸಿ ಸಿನಿಮಾ ಬರುತ್ತಿರುವುದು ಇದೇ ಮೊದಲಲ್ಲ ಈ ಹಿಂದೆ ʼಕಿರಗೂರಿನ ಗಯ್ಯಾಳಿಗಳುʼ ಎನ್ನುವ  ಸಿನಿಮಾ ಬಂದಿತ್ತು. ಇದನ್ನು ಸುಮನಾ ಕಿತ್ತೂರು ನಿರ್ದೇಶನ ಮಾಡಿದ್ದರು.

ಟಾಪ್ ನ್ಯೂಸ್

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.