![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 2, 2021, 1:10 PM IST
ಆರ್.ಚಂದ್ರು ನಿರ್ಮಾಣ, ನಿರ್ದೇಶನದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ’ ಈಗ ಐದನೇ ಹಂತದ ಚಿತ್ರೀಕರಣಕ್ಕೆ ಅಣಿಯಾಗಿದೆ. ಚಿತ್ರದ ಚಿತ್ರೀಕರಣ ಅಕ್ಟೋಬರ್ 4ರಿಂದ ಆರಂಭವಾಗಲಿದೆ.
ಈ ಹಂತದ ಚಿತ್ರೀಕರಣಕ್ಕಾಗಿ ಕೆ.ಜಿ.ಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ಅವರ ನೇತೃತ್ವದಲ್ಲಿ ಸುಮಾರು ಒಂದು ತಿಂಗಳಿನಿಂದ ಮಿನರ್ವ ಮಿಲ್ನಲ್ಲಿ ಸೆಟ್ಗಳನ್ನು ನಿರ್ಮಿಸಲಾಗಿದೆ. ಚಿತ್ರೀಕರಣದಲ್ಲಿ ಉಪೇಂದ್ರ, ಬಾಲಿವುಡ್ ನಟ ನವಾಬ್ ಶಾ ಸೇರಿದಂತೆ ಅನೇಕ ಕಲಾವಿದರು ಭಾಗವಹಿಸಲಿದ್ದಾರೆ.
ಕೊನೆಯ ಹಂತದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯಲಿದೆ. ಚಿತ್ರದಲ್ಲಿ ಸುದೀಪ್ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಅವರ ಗೆಟಪ್ನ ಸ್ಕೆಚ್ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ಕುತೂಹಲ ಹೆಚ್ಚಿಸಿದೆ.
ಇದನ್ನೂ ಓದಿ:‘ಕಾಗೆ ಮೊಟ್ಟೆ’ ಚಿತ್ರವಿಮರ್ಶೆ: ಕಾಗೆ ಗೂಡಲ್ಲೊಂದು ಕೃಷ್ಣನ್ ಲವ್ಸ್ಟೋರಿ
ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಚಿತ್ರಕ್ಕೆ ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೊರ್, ವಿಜಯ್, ಪೀಟರ್ ಹೆನ್ ಸಾಹಸ ನಿರ್ದೇಶನವಿದೆ.
ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಿಚ್ಚ ಸುದೀಪ್, ಕಾಮರಾಜನ್ (ಐ ಮೂವಿ ಖ್ಯಾತಿ), ಜಗಪತಿ ಬಾಬು, ರಾಹುಲ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವಾಬ್ ಶಾ, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್ ಸೇರಿದಂತೆ ಅನೇಕರು ನಟಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.