Gopalakrishna Deshpande; ಸದ್ದು-ಗದ್ದಲವಿಲ್ಲದೆ ಮನಮುಟ್ಟುವ ನಟ


Team Udayavani, Jan 5, 2024, 3:37 PM IST

gopalakrishna deshpande

ಸದ್ಯ ಕನ್ನಡ ಚಿತ್ರರಂಗದಲ್ಲಿ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳು, ಹತ್ತಾರು ವಿಭಿನ್ನ ಪಾತ್ರಗಳ ಮೂಲಕ ಸಿನಿಪ್ರಿಯರ ಗಮನ ಸೆಳೆಯುತ್ತಿರುವ ನಟ ಗೋಪಾಲಕೃಷ್ಣ ದೇಶಪಾಂಡೆ. ಎಂತಹ ಪಾತ್ರವಾದರೂ ಸರಿ, ಆ ಪಾತ್ರಕ್ಕೆ ವಿಶೇಷ ಜೀವ-ಭಾವ ಎರಡನ್ನೂ ತುಂಬಿ ಲೀಲಾಜಾಲವಾಗಿ ಅಭಿನಯಿಸುವ ಗೋಪಾಲಕೃಷ್ಣ ದೇಶಪಾಂಡೆ, ಯಾವುದೇ ಸದ್ದು-ಗದ್ದಲವಿಲ್ಲದೆ ಪ್ರೇಕ್ಷಕರ ಮನಮುಟ್ಟುವ ಅಪರೂಪದ ಕಲಾವಿದ.

ತಾನಾಯಿತು ತನ್ನ ಪಾತ್ರವಾಯಿತು ಎಂದು ಕಲಾ ಕೈಂಕರ್ಯದಲ್ಲಿ ತೊಡಗಿಸಿಕೊಂಡಿರುವ, ಆದಷ್ಟು ಪ್ರಚಾರಗಳಿಂದ ದೂರವೇ ಉಳಿದಿರುವ ಗೋಪಾಲಕೃಷ್ಣ ದೇಶಪಾಂಡೆ ಇಂದಿನ ಬಹುತೇಕ ಯುವ ನಿರ್ದೇಶಕರ ಅಚ್ಚುಮೆಚ್ಚಿನ ಕಲಾವಿದ ಎಂಬುದರಲ್ಲಿ ಎರಡು ಮಾತಿಲ್ಲ. ಇಂಥ ನಟ ಗೋಪಾಲಕೃಷ್ಣ ದೇಶಪಾಂಡೆ ಕೊಂಚ ಸಂಕೋಚದಿಂದಲೇ ತಮ್ಮ ಬಣ್ಣದ ಬದುಕಿನ ಒಂದಷ್ಟು ಸಂಗತಿಗಳ ಬಗ್ಗೆ “ಉದಯವಾಣಿ’ ಜೊತೆ ಮಾತಿಗಿಳಿದರು.

ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಹುನಗುಂದ ಮೂಲದ ಗೋಪಾಲಕೃಷ್ಣ ದೇಶಪಾಂಡೆ ಅವರದ್ದು ಮಧ್ಯಮ ವರ್ಗದ ಕುಟುಂಬ. ತಂದೆ ಒಂದಷ್ಟು ನಾಟಕಗಳನ್ನು ಮಾಡುತ್ತಿದ್ದರೂ, ಗೋಪಾಲಕೃಷ್ಣ ಅವರಿಗೆ ಅವರೇ ಹೇಳುವಂತೆ ಬಾಲ್ಯದಲ್ಲಿ ನಾಟಕ, ಅಭಿನಯದ ಕಡೆಗೆ ಅಷ್ಟಾಗಿ ಆಸಕ್ತಿ ಇರಲಿಲ್ಲ. ಪಿಯುಸಿ ವೇಳೆ ತಂದೆ ನಿಧನರಾಗಿದ್ದು, ಆ ಬಳಿಕ ಬಿ. ಎಸ್ಸಿ ಮಾಡಲು ಮುಂದಾಗುವ ಗೋಪಾಲಕೃಷ್ಣ ದೇಶಪಾಂಡೆಗೆ ಆಗ “ನೀನಾಸಂ’ ಜೊತೆಗೆ ರಂಗಭೂಮಿಯ ನಂಟು ಶುರುವಾಗುತ್ತದೆ. “ಬಿ. ಎಸ್ಸಿ ಮಾಡೋದು ಕಷ್ಟ ಅಂಥ ಗೊತ್ತಾಗುತ್ತಿದ್ದಂತೆ, ನನ್ನ ಗಮನ “ನೀನಾಸಂ’ ಮತ್ತು ರಂಗಭೂಮಿಯ ಕಡೆಗೆ ತಿರುಗಿತು. “ನೀನಾಸಂ’ಗೆ ಸೇರಿಕೊಂಡ ನಾನು ಅಲ್ಲಿ ಸುಮಾರು ಮೂರು ವರ್ಷ ರಂಗ “ತಿರುಗಾಟ’ ಮಾಡಿದೆ. ಇದು ನನಗೆ ಹೊಸ ಅನುಭವಗಳನ್ನು ತಂದುಕೊಟ್ಟಿತು. “ನೀನಾಸಂ’ಗೆ ಹೋದ ಮೇಲೆ ಬದುಕು ಮತ್ತು ಸಮಾಜವನ್ನು ನೋಡುವ ದೃಷ್ಟಿಕೋನ ಬದಲಾಯಿತು. ಅಲ್ಲಿ ಹತ್ತಾರು ನಾಟಕಗಳನ್ನು ಮಾಡಿದೆ. ಅನೇಕ ರಂಗ ಸ್ನೇಹಿತರು ಸಿಕ್ಕರು. ಹೀಗೆ ಅಭಿನಯವೇ ಬದುಕಾಯಿತು’ ಎನ್ನುತ್ತಾರೆ ಗೋಪಾಲಕೃಷ್ಣ ದೇಶಪಾಂಡೆ.

2011-12ರಲ್ಲಿ ಬೆಂಗಳೂರಿಗೆ ಬಂದ ಗೋಪಾಲಕೃಷ್ಣ ದೇಶಪಾಂಡೆ ಮೊದಲು “ಪುಟ್ಟಗೌರಿ ಮದುವೆ’ ಮತ್ತು ಬಿ. ಸುರೇಶ್‌ ಅವರ “ಅಳಿಗುಳಿ ಮನೆ’ ಧಾರಾವಾಹಿ ಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಈ ಎರಡೂ ಧಾರಾವಾಹಿಗಳು ಗೋಪಾಲಕೃಷ್ಣ ಅವರನ್ನು ಪ್ರೇಕ್ಷಕರು ಗುರುತಿಸುವಂತೆ ಮಾಡುವುದರ ಜೊತೆಗೆ ಸಾಕಷ್ಟು ಅವಕಾಶಗಳನ್ನು ತಂದುಕೊಟ್ಟವು. ಅದಾದ ನಂತರ ನಿಧಾನವಾಗಿ “ಸಾಹೇಬ’ ಸಿನಿಮಾದ ಮೂಲಕ ಸಿನಿಮಾರಂಗಕ್ಕೂ ಅಡಿಯಿಟ್ಟ ಗೋಪಾಲಕೃಷ್ಣ ದೇಶಪಾಂಡೆ ತಮ್ಮ ಮೊದಲ ಸಿನಿಮಾದಲ್ಲೇ ಸಿನಿಪ್ರಿಯರ ಮನ-ಗಮನ ಸೆಳೆಯುವಲ್ಲೂ ಯಸ್ವಿಯಾಗುತ್ತಾರೆ. “ಸಾಹೇಬ’ ಸಿನಿಮಾದ ಬಳಿಕ “ತಾಯಿಗೆ ತಕ್ಕ ಮಗ’, “ಅವನೇ ಶ್ರೀಮನ್ನಾರಾಯಣ’ ಹೀಗೆ ಬ್ಯಾಕ್‌ ಟು ಬ್ಯಾಕ್‌ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ಗೋಪಾಲಕೃಷ್ಣ ದೇಶಪಾಂಡೆ, ಈಗ ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಳ್ಳುತ್ತಿದ್ದಾರೆ.

ಜಿ.ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.