ನುಡಿದಂತೆ ನಡೆದ ರಾಕಿಭಾಯ್ : ಸಿನಿಮಾ ಕಾರ್ಮಿಕರಿಗೆ ಪರಿಹಾರ ತಲುಪಿಸಿದ ಯಶ್
Team Udayavani, Jun 4, 2021, 1:33 PM IST
ಬೆಂಗಳೂರು: ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಯಶ್, ಇದೀಗ ನುಡಿದಂತೆ ನಡೆದಿದ್ದಾರೆ. ಈ ಮೊದಲು ಘೋಷಿಸಿದಂತೆ ಚಿತ್ರರಂಗದ ಕಾರ್ಮಿಕರಿಗೆ ತಲಾ 5 ಸಾವಿರ ರೂಪಾಯಿ ಕೋವಿಡ್ ನೆರವು ನೀಡಿದ್ದಾರೆ.
ರಾಕಿ ಭಾಯ್ ಯಶ್ ಕೋವಿಡ್ ಕಾರಣವಾಗಿ ಕೆಲಸ ಇಲ್ಲದೆ ಮನೆಯಲ್ಲಿ ಕುಳಿತ ಕನ್ನಡ ಸಿನಿಮಾರಂಗ ನಂಬಿಕೊಂಡ ಕಾರ್ಮಿಕರು, ತಂತ್ರಜ್ಞರು, ಅಸಹಾಯಕ ಕಲಾವಿದರಿಗೆ ತಲಾ 5 ಸಾವಿರ ರೂ. ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ಬಹುತೇಕರ ಖಾತೆಗೆ ಹಣ ಜಮಾ ಮಾಡಿದ್ದಾರೆ.
ಮೀಸೆ ಪ್ರಕಾಶ್, ಮಂಜೇಗೌಡ, ಮೈಸೂರು ಶಿವಪ್ರಕಾಶ್ ಸೇರಿದಂತೆ ನೂರಾರು ಕಲಾವಿದರು, ತಂತ್ರಜ್ಞರು ತಮ್ಮ ಖಾತೆಗೆ ಯಶ್ ಅವರಿಂದ ಹಣ ಬಂದಿದೆ ಎನ್ನುವುದನ್ನು ಖಾತ್ರಿ ಮಾಡಿದ್ದಾರೆ. ಯಶ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಕೋವಿಡ್ ಪಿಡುಗು ಕನ್ನಡ ಚಿತ್ರರಂಗವನ್ನು ಬಾಧಿಸುತ್ತಿದೆ. ಕಳೆದ ವರ್ಷದಂತೆ ಈ ವರ್ಷವೂ ಕೂಡ ಸಿನಿಮಾ ಚಟುವಟಿಕೆಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದರಿಂದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಇಂತಹ ಸಂದರ್ಭದಲ್ಲಿ ರಿಯಲ್ ಸ್ಟಾರ್ ಉಪೇಂದ್ರ, ರಾಕಿಂಗ್ ಸ್ಟಾರ್ ಯಶ್, ರವಿಚಂದ್ರನ್ ಅವರ ಪುತ್ರ ವಿ. ಮನೋರಂಜನ್, ಬಿಗ್ ಬಾಸ್ ಖ್ಯಾತಿಯ ಪ್ರಥಮ್, ನಟಿ ಸಂಜನಾ ಗಲ್ರಾನಿ, ಹರ್ಷಿಕಾ ಪೂಣಚ್ಚ, ಇತ್ತೀಚಿಗಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಣಿತಾ ಸುಭಾಷ್ ಸೇರಿದಂತೆ ಸಾಕಷ್ಟು ಜನರು ತಮ್ಮ ಸಿನಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.