ಕೈ ತುಂಬಾ ಸಿನಿಮಾ, ಸಖತ್‌ ಪಾತ್ರ; ಬಿಝಿಯಾದ್ರು ‘ಹೆಂಗೆ ನಾವೂ’ ರಚನಾ


Team Udayavani, Jun 28, 2022, 2:18 PM IST

rachana inder

“ಲವ್‌ ಮಾಕ್ಟೇಲ್‌’ ಚಿತ್ರದಲ್ಲಿ ಸಖತ್‌ ಎನರ್ಜಿಟಿಕ್‌ ಆಗಿ ಪಟ್‌ ಪಟ್‌ ಅಂತಾ ಮಾತನಾಡುತ್ತಾ, ಪ್ರತಿ ಮಾತಿಗೂ “ಹೆಂಗೆ ನಾವೂ’ ಅಂತಾ ಹೇಳುತ್ತಲೇ ಕೋಟಿ ಕನ್ನಡಿಗರ ಹೃದಯ ಗೆದ್ದೆ ಚೆಲುವೆ ರಚನಾ ಇಂದರ್‌. ಲವ್‌ ಮಾಕ್ಟೇಲ್‌ ಚಿತ್ರದಲ್ಲಿನ ತಮ್ಮ ಅಭಿನಯಕ್ಕೆ ಸಾಕಷ್ಟು ಪ್ರಶಂಸೆಯನ್ನು ಪಡೆದ ರಚನಾ, ಈಗ ಸಖತ್‌ ಬ್ಯುಸಿಯಾಗಿದ್ದಾರೆ. ಒಂದರ ಮೇಲೊಂದು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ರಚನಾ ನಟನೆಯ “ಹರಿಕಥೆಯಲ್ಲ, ಗಿರಿಕಥೆ’ ಇತ್ತೀಚೆಗೆ ಬಿಡುಗಡೆಯಾಗಿದೆ. ಅವರ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಾಮಾನ್ಯವಾಗಿ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿಕೊಡಬೇಕು ಅಂದರೆ ಒಂದು ಬ್ಯಾಗ್ರೌಂಡ್‌ ಅಥವಾ ಮಾಡಲಿಂಗ್‌ ಅನುಭವ ಇರಬೇಕು. ಮಾಡೆಲಿಂಗ್‌ ಕ್ಷೇತ್ರದಲ್ಲಿ ಮಿಂಚಿ ಬಳಿಕ ನಟಿಯಾದವರ ಸಂಖ್ಯೆ ಬಹಳಷ್ಟಿದೆ. ಈ ನಿಟ್ಟಿನಲ್ಲಿ ತಾನು ಮಾಡೆಲಿಂಗ್‌ ಪ್ರವೇಶಿದರೆ ಸಿನಿ ರಂಗಕ್ಕೆ ಪ್ರವೇಶ ಪಡೆಯಬಹುದು ಎಂಬ ಆಸೆ ರಚನಾಗೆ ಅವರಿಗೆ ಇತ್ತಂತೆ. ಬಾಲ್ಯದ ದಿನಗಳಿಂದ ಅಭಿನಯ, ಸಿನಿಮಾ ಕ್ಷೇತ್ರದಲ್ಲಿ ಆಸಕ್ತಿ ಇದ್ದ ರಚನಾಗೆ ಮಾಡೆಲಿಂಗ್‌ ಮೂಲಕ ಸಿನಿರಂಗ ಪ್ರವೇಶಿಸಬಹುದು ಎಂದು ಮೊದಲು ಅದರ ತಯಾರಿ ಆರಂಭಿಸದರಂತೆ. ಮಾಡೆಲ್‌ಗ‌ಳಂತೆ ಫೋಟೋ ಶೂಟ್‌ ಕೂಡಾ ಮಾಡಿಸಿದ್ದರಂತೆ. ಅದರ ಪರಿಣಾಮ ಈಗ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿ, ಬಿಝಿಯಾಗುತ್ತಿದ್ದಾರೆ.

ಇದನ್ನೂ ಓದಿ:‘ತ್ರಿವಿಕ್ರಮ’ನಿಗೆ ಜೈ ಎಂದ ಪ್ರೇಕ್ಷಕ

ಸದ್ಯ ರಚನಾ ನಟಿಸಿರುವ ಎರಡು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರ ಜೊತೆ ತೆರೆ ಹಂಚಿಕೊಳ್ಳುತ್ತಿರುವ ರಚನಾ “ತ್ರಿಬಲ್‌ ರೈಡಿಂಗ್‌’ ಸಿನಿಮಾ ಮೂಲಕ ಲಾಂಗ್‌ ಡ್ರೈವ್‌ ಗೆ ಸಿದ್ಧರಾಗಿದ್ದಾರೆ.

ಇನ್ನು “ಲವ್‌ 360′ ಅನ್ನೋ ಚಿತ್ರದಲ್ಲಿ ಪ್ರೇಕ್ಷಕರಿಗೆ ಪ್ರೀತಿ ಹಂಚಲು ರೆಡಿಯಾಗಿದ್ದಾರೆ. ತಮ್ಮ ಪದವಿ ದಿನಗಳಲ್ಲೇ ನಟನೆಗೆ ಬಂದ ರಚನಾ ಓದನ್ನು ನಿರ್ಲಕ್ಷಿಸದೆ, ಓದಿನ ಕಡೆಗೂ ತಮ್ಮ ಆಸಕ್ತಿಯನ್ನು ಮುಂದುವರಿಸಿದ್ದಾರೆ. ಸಿನಿಮಾ ಕ್ಷೇತ್ರದ ಜೊತೆ ಓದುದನ್ನು ಮುಂದುವರೆಸಿರುವ ರಚನಾ ಈಗ ತಮ್ಮ ಎಂ.ಬಿ.ಎ ಪದವಿಯನ್ನು ಪೂರೈಸುತ್ತಿದ್ದಾರೆ. ಸಾಮಾನ್ಯರಂತೆ ದಿನಂಪ್ರತಿ ಕಾಲೇಜು ಹೋಗುವುದು ಸಾಧ್ಯವಾಗದ ಕಾರಣ ಆನ್‌ ಲೈನ್‌ ಮೂಲಕ ಎಂ.ಬಿ.ಎ ಪದವಿ ತರಬೇತಿಗಳನ್ನು ಪಡೆಯುತ್ತಿದ್ದಾರೆ.

ತಮ್ಮ ಮೊದಲ ಚಿತ್ರಕ್ಕೆ ಸಿಕ್ಕ ಯಶಸ್ಸಿನ ಬಗ್ಗೆ ಮಾತನಾಡುವ ರಚನಾ, ಚಿತ್ರ ಮೊದಲು ಬಿಡುಗಡೆಯಾದಾಗ ಅಷ್ಟು ಜನಪ್ರಿಯವಾಗಿರಲಿಲ್ಲ. ಕೋವಿಡ್‌ ಲಾಕ್‌ಡೌನ್‌ ಕೂಡಾ ಆಗ ಆರಂಭವಾಗಿತ್ತು. ನಂತರ ಓಟಿಟಿ ಯಲ್ಲಿ ಬಿಡುಗಡೆಯಾದಾಗ ಚಿತ್ರಕ್ಕೆ ಒಳ್ಳೆ ಪ್ರತಿಕ್ರಿಯೆ ದೊರೆಯಿತು. ಯಾವಾಗ ಹೆಚ್ಚು ಹೆಚ್ಚು ಜನ ಚಿತ್ರವನ್ನು ವೀಕ್ಷಿಸಿದರೋ ಅಷ್ಟು ಜನ ನನ್ನ ಪಾತ್ರವನ್ನು ಇಷ್ಟ ಪಟ್ಟರು. ಅದರಲ್ಲೂ ಹೆಚ್ಚಾಗಿ ಮಕ್ಕಳು ನನ್ನ ಡೈಲಾಗ್‌, ಅಭಿನಯ ಕಂಡು ಇಷ್ಟಪಟ್ಟರು. ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನ, ಪ್ರೀತಿ ಹರಿದುಬಂತು. ನನಗೆ ಖುಷಿಯನ್ನು ಹೇಗೆ ವ್ಯಕ್ತಪಡಿಸಬೇಕು ಅಂತಲೇ ತಿಳಿಯಲಿಲ್ಲ. ಅಷ್ಟು ಪ್ರೀತಿ ಜನರಿಂದ ಸಿಕ್ಕಿದ್ದು ಅನಿರೀಕ್ಷಿತ. ನಾನು ಎಂದೂ ಕೂಡಾ ಇಷ್ಟೊಂದು ನಿರೀಕ್ಷೆ ಇಟ್ಟುಕೊಂಡಿರಲಿಲ್ಲ.’ ಎನ್ನುತ್ತಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.