ವಿಭಿನ್ನ ಪೋಸ್ಟರ್ ನಲ್ಲಿ ‘ಅಘೋರ’ ಮಿಂಚು: ಈ ವಾರ ತೆರೆಗೆ
Team Udayavani, Mar 1, 2022, 3:02 PM IST
ಈಗಾಗಲೇ ತನ್ನ ಟೈಟಲ್, ಪೋಸ್ಟರ್, ಟೀಸರ್ ಮತ್ತು ಹಾಡುಗಳ ಮೂಲಕ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವ ಬಹುತೇಕ ಹೊಸ ಪ್ರತಿಭೆಗಳ “ಅಘೋರ’ ಈ ವಾರ (ಮಾರ್ಚ್ 4) ತೆರೆಗೆ ಬರುತ್ತಿದೆ. ಕಳೆದ ಕೆಲ ವಾರಗಳಿಂದ ಭರ್ಜರಿಯಾಗಿ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, “ಅಘೋರ’ ಚಿತ್ರವನ್ನು ರಾಜ್ಯಾದ್ಯಂತ ಸುಮಾರು 200ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.
ಇನ್ನು “ಮೋಕ್ಷ ಸಿನಿಮಾಸ್’ ಬ್ಯಾನರ್ನಲ್ಲಿ ಪುನೀತ್ ಗೌಡ ನಿರ್ಮಿಸಿರುವ “ಅಘೋರ’ ಚಿತ್ರಕ್ಕೆ ಎನ್. ಎಸ್ ಪ್ರಮೋದ್ ರಾಜ್ ನಿರ್ದೇಶನವಿದೆ. “ಅಘೋರ’ ಚಿತ್ರದಲ್ಲಿ ಅವಿನಾಶ್, ಪುನೀತ್, ಅಶೋಕ್, ದ್ರವ್ಯಾ ಶೆಟ್ಟಿ, ರಚನಾ ದಶರಥ್ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಹೆಸರೇ ಹೇಳುವಂತೆ, ಇದೊಂದು ಹಾರರ್- ಥ್ರಿಲ್ಲರ್ ಕಥಾಹಂದರದ ಸಿನಿಮಾ. ಅಂದುಕೊಂಡ ರೀತಿಯಲ್ಲಿ, ಅದ್ಧೂರಿ ಮೇಕಿಂಗ್ ಮೂಲಕ ಕಥೆಯನ್ನು ಅಷ್ಟೇ ಅಚ್ಚುಕಟ್ಟಾಗಿ ಸಿನಿಮಾದಲ್ಲಿ ಹೇಳಿದ್ದೇವೆ. ಒಂದು ಮೇಸೆಜ್ ಕೂಡ ಸಿನಿಮಾದಲ್ಲಿದೆ. ನಿರ್ಮಾಪಕ ಪುನೀತ್ ಗೌಡ ಮೇಕಿಂಗ್ ವಿಷಯದಲ್ಲಿ ಎಲ್ಲೂ ರಾಜಿಯಾಗದೇ, ಯಾವುದಕ್ಕೂ ಕೊರತೆಯಾಗದ ರೀತಿಯಲ್ಲಿ ಕಥೆಯನ್ನು ಅದ್ಧೂರಿಯಾಗಿ ತೆರೆಗೆ ತರಲು ಸಾಕಷ್ಟು ಖರ್ಚು ಮಾಡಿದ್ದಾರೆ’ ಎನ್ನುವುದು ನಿರ್ದೇಶಕ ಎನ್. ಎಸ್ ಪ್ರಮೋದ್ ರಾಜ್ ಮಾತು.
ಇದನ್ನೂ ಓದಿ:ವಿರಾಟ್ ಕೊಹ್ಲಿ ಉತ್ತರಾಧಿಕಾರಿಯನ್ನು ಘೋಷಿಸಲು ಆರ್ಸಿಬಿ ಯಾಕೆ ವಿಳಂಬ ಮಾಡುತ್ತಿದೆ?
“ಇತ್ತೀಚಿನ ದಿನಗಳಲ್ಲಿ ಲವ್ ಮತ್ತು ಮಾಸ್ ಕಥಾಹಂದರದ ಸಿನಿಮಾಗಳೇ ಹೆಚ್ಚಾಗಿ ಬಿಡುಗಡೆಯಾಗುತ್ತಿದ್ದು, ಹಾರರ್-ಥ್ರಿಲ್ಲರ್ ಸಿನಿಮಾಗಳ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಇಂಥ ಸಮಯದಲ್ಲಿ “ಅಘೋರ’ ಥಿಯೇಟರ್ ಗೆ ಬರುತ್ತಿದ್ದು, ಪ್ರೇಕ್ಷಕರಿಗೆ “ಅಘೋರ’ ಹೊಸ ಅನುಭವ ಕೊಡುವಂಥ ಸಿನಿಮಾವಾಗಲಿದೆ’ ಎಂದು ವಿಶ್ವಾಸದ ಮಾತುಗಳನ್ನಾಡುತ್ತಾರೆ ನಟ ಕಂ ನಿರ್ಮಾಪಕ ಪುನೀತ್.
“ಅಘೋರ’ ಚಿತ್ರದಲ್ಲಿ ಹಿರಿಯ ನಟ ಅವಿನಾಶ್ ಅಘೋರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಪುನೀತ್, ಅಶೋಕ್, ದ್ರವ್ಯಾ ಶೆಟ್ಟಿ, ರಚನಾ ದಶರಥ್ ಮತ್ತಿತರರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಒಟ್ಟಾರೆ ರಿಲೀಸ್ಗೂ ಮೊದಲೇ ಗಾಂಧಿನಗರದಲ್ಲಿ ಒಂದಷ್ಟು ಸೌಂಡ್ ಮಾಡುತ್ತಿರುವ ಹೊಸಬರ “ಅಘೋರ’ ತೆರೆಮೇಲೆ ಹೇಗಿರಲಿದೆ ಎಂಬ ಕುತೂಹಲಕ್ಕೆ ಈ ವಾರಾಂತ್ಯದಲ್ಲಿ ಉತ್ತರ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.