ಈ ಪಟ್ಟಣಕ್ಕೆ ಏನಾಯ್ತು?
Team Udayavani, May 1, 2017, 11:16 AM IST
ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಚಂದದ ಟೈಟಲ್ಗಳಿರುವ ಸಿನಿಮಾಗಳು ಬರುತ್ತಿವೆ. “ಉಳಿದವರು ಕಂಡಂತೆ’, “ದಯವಿಟ್ಟು ಗಮನಿಸಿ’, “ಕನ್ನಡಕ್ಕಾಗಿ ಒಂದನ್ನು ಒತ್ತಿ’ ಹೀಗೆ ಹಲವು ಚಂದದ ಟೈಟಲ್ಗಳಿರುವ ಸಿನಿಮಾಗಳು ಬಂದಿವೆ. ಈ ಸಾಲಿಗೆ ಇನ್ನೊಂದು ಸೇರ್ಪಡೆ, “ಈ ಪಟ್ಟಣಕ್ಕೆ ಏನಾಗಿದೆ?’ ಸಹ ಒಂದು. ಚಿತ್ರಮಂದಿರದಲ್ಲಿ ಚಿತ್ರ ಶುರುವಾಗುವ ಮುನ್ನ ಬರುವ ಧೂಮಪಾನ
ನಿಷೇಧದ ಕುರಿತ ಜಾಹೀರಾತಿನಲ್ಲಿ “ಈ ಪಟ್ಟಣಕ್ಕೆ ಏನಾಗಿದೆ?’ ಈ ಸಾಲನ್ನು ಖಂಡಿತಾ ಕೇಳಿರುತ್ತೀರಿ.
ಈಗ ಅದೇ ಸಾಲನ್ನಿಟ್ಟುಕೊಂಡು ಸಿನಿಮಾ ಮಾಡುವುದಕ್ಕೆ ಹೊರಟಿದ್ದಾರೆ ರವಿ ಸುಬ್ಬರಾಜ್. ಅಂದಹಾಗೆ, ಇದು ಧೂಮಪಾನ ನಿಷೇಧದ ಕುರಿತಾದ ಸಿನಿಮಾ ಖಂಡಿತಾ ಇಲ್ಲ. ಬದಲಿಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಕುರಿತಾದ ಚಿತ್ರ ಇದು. ಇತ್ತೀಚಿನ ವರ್ಷಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ಸಾಕಷ್ಟು ಸದ್ದು ಮಾಡುತ್ತಿದೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಡಿವಾಣ ಹಾಕುವುದಕ್ಕೆ ಪ್ರಯತ್ನಪಟ್ಟರೂ ಬೆಟ್ಟಿಂಗ್ ಜಾಲ ದಿನೇದಿನೇ ಬೆಳೆಯುತ್ತಲೇ ಇದೆ. ಅದೆಷ್ಟೋ ಜನ ಹಣ ಹೂಡಿ ಮನೆ ಮಾರಿಕೊಂಡಿದ್ದಾರೆ. ಈ ಕುರಿತು ಕಥೆ ಬರೆದು, ಚಿತ್ರ ನಿರ್ದೇಶಿಸುತ್ತಿದ್ದಾರೆ ರವಿ ಸುಬ್ಬರಾವ್.
ಈ ಚಿತ್ರದಲ್ಲಿ ಬೆಟ್ಟಿಂಗ್ ಹಿಂದೆ ಯಾರಿದ್ದಾರೆ, ಯಾರೆಲ್ಲಾ ಈ ದಂಧೆಯನ್ನು ನಿಯಂತ್ರಿಸುತ್ತಿದ್ದಾರೆ ಎಂಬಂತಹ ಅಂಶಗಳನ್ನು
ಹೇಳಲಾಗಿದೆಯಂತೆ. ಅದಕ್ಕೆ ಸಾಕಷ್ಟು ಅಧ್ಯಯನ ಮಾಡಿ, ದಾಖಲೆ ಹೊಂದಿಸಿ, ಚಿತ್ರಕಥೆಯನ್ನು ಅವರು ಸಿದ್ಧಪಡಿಸಿದ್ದಾರೆ. ಈ ಚಿತ್ರವನ್ನು ಅವರು ಬರೀ ಕಥೆ ಬರೆದು ನಿರ್ದೇಶಿಸುತ್ತಿರುವುದಷ್ಟೇ ಅಲ್ಲ, ನಿರ್ಮಾಣ ಮಾಡುವುದರ ಜೊತೆಗೆ, ಚಿತ್ರದಲ್ಲಿ ಹೀರೋ ಆಗಿಯೂ ನಟಿಸುತ್ತಿದ್ದಾರೆ. ಇನ್ನು ನಾಯಕಿಯರಾಗಿ ಡಿಂಪಿ ಫಾದ್ಯ ಖಾನ್ ಮತ್ತು ಸಂಧ್ಯಾ ಇದ್ದಾರೆ. ರಜಪೂತಿ ಅರುಣ್ ಕುಮಾರ್ ಅವರ ಛಾಯಾಗ್ರಹಣ ಮತ್ತು ಮ್ಯಾರಿಯೋ ಅವರ ಸಂಗೀತವಿರುವ ಈ ಚಿತ್ರ ಮೇ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್ ಗಿಫ್ಟ್ ಮಾಡಿದ ನಿರ್ಮಾಪಕ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?
Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.