Murphy: ʼಮರ್ಫಿʼಗೆ ಸಾಥ್ ನೀಡಿದ ನಟಿಮಣಿಯರು
Team Udayavani, Oct 14, 2024, 11:46 AM IST
ಈಗಾಗಲೇ ಹಾಡುಗಳ ಮೂಲಕ ಸದ್ದು ಮಾಡಿರುವ “ಮರ್ಫಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನವರಾತ್ರಿ ಹಬ್ಬದ ಸುಂದರ್ಭದಲ್ಲಿ ಚಿತ್ರತಂಡ ಸ್ಯಾಂಡಲ್ ವುಡ್ನ 9 ನಟಿಯರ ಕೈಯಿಂದ ಟ್ರೇಲರ್ ರಿಲೀಸ್ ಮಾಡಿಸಲಾಯಿತು. ಪ್ರಿಯಾಂಕಾ ಉಪೇಂದ್ರ, ಅಮೃತಾ ಅಯ್ಯಂಗಾರ್, ರಾಗಿಣಿ ದ್ವಿವೇದಿ, ಖುಷಿ ರವಿ, ಮೇಘನಾ ಗಾಂವ್ಕರ್, ಸಪ್ತಮಿ ಗೌಡ, ಧನ್ಯ ರಾಮ್ ಞಕುಮಾರ್, ರೀಶ್ಮಾ ನಾಣಯ್ಯ, ಅಂಕಿತಾ ಅಮರ್ ಭಾಗಿಯಾಗಿದ್ದರು.
ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿದ ನಾಯಕ ಪ್ರಭು ಮುಂಡ್ಕೂರು, ಕೆಲವೊಮ್ಮೆ ನಟರಿಗೆ ಒಂದು ಕಥೆ ಕಾಡುತ್ತಿರುತ್ತದೆ. ಈ ರೀತಿ ಕಥೆ ಮಾಡಬೇಕು ಅನಿಸುತ್ತದೆ. ಮರ್ಫಿ ಕಥೆ ಕೂಡ ನನ್ನ ತುಂಬಾ ಕಾಡಿತ್ತು. ಈ ಚಿತ್ರದ ಟ್ರೇಲರ್ ಲಾಂಚ್ ಮಾಡಿದ್ದೇವೆ. ನಾನು ತುಂಬಾ ಸಿನಿಮಾದಲ್ಲಿ ನಟಿಸಿದ್ದೇನೆ. 9 ನಟಿಯರು ನನ್ನ ಚಿತ್ರಕ್ಕೆ ಸಾಥ್ ಕೊಟ್ಟಿದ್ದಾರೆ. ಮರ್ಫಿ ಜನರಿಗೆ ಸಿನಿಮ್ಯಾಟಿಕ್ ಫೀಲ್ ಕೊಡುತ್ತದೆ, ಇದಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೇವೆ. ಅದ್ಭುತ ಟೆಕ್ನಿಕಲ್ ಟೀಂ ನಮ್ಮ ಚಿತ್ರಕ್ಕಾಗಿ ದುಡಿದಿದೆ ಎಂದರು.
ನಿರ್ದೇಶಕರಾದ ಬಿಎಸ್ಪಿ ವರ್ಮಾ ಮಾತನಾಡಿ, ಅದ್ಭುತ ತಂಡದ ಜೊತೆ ಕೆಲಸ ಮಾಡಿದ ಖುಷಿ ನನ್ನಲ್ಲಿದೆ. ಇದೇ 18ರಂದು ಸಿನಿಮಾ ಬಿಡುಗಡೆಯಾಗುತ್ತಿದೆ ಎಂದರು.
ಪ್ರಭು ಮುಂಡ್ಕೂರ್, ಚಿತ್ರಕಥೆ ಬರೆಯುವುದರ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ. ರೋಶಿನಿ ಪ್ರಕಾಶ್, ಇಳಾ ವೀರಮಲ್ಲ ಜೊತೆಯಲ್ಲಿ ದತ್ತಣ್ಣ, ಅಶ್ವಿನಿ ರಾವ್ ಪಲ್ಲಕ್ಕಿ, ಮಹಾಂತೇಶ್ ಹೀರೇಮಠ, ರಾಮಪ್ರಸಾದ್ ಬಾಣಾವರ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ. ನವೀನ್ ರೆಡ್ಡಿ, ಪ್ರಭು, ವರ್ಮಾ ಸಂಭಾಷಣೆ ಬರೆದಿದ್ದು, ಮಹೇಶ ತೊಗಟ ಸಂಕಲನ, ಆದರ್ಶ ಆರ್. ಕ್ಯಾಮೆರಾ ಹಿಡಿದ್ದಾರೆ. ಸೋಮಣ್ಣ ಟಾಕೀಸ್ ಮತ್ತು ವರ್ಣಸಿಂಧು ಸ್ಟುಡಿಯೋಸ್ ಬ್ಯಾನರ್ನಡಿ ರಾಮ್ ಕೋ ಸೋಮಣ್ಣ ಹಾಗೂ ಬಿಎಸ್ಪಿ ವರ್ಮಾ ಮರ್ಫಿ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಮರ್ಫಿಯಲ್ಲಿ ಏಳು ಹಾಡುಗಳಿದ್ದು, ಅರ್ಜುನ್ ಜನ್ಯ, ರಜತ್ ಹೆಗ್ಡೆ, ಕೀರ್ತನ್ ಹೊಳ್ಳ ಮತ್ತು ಸಿಲ್ವೆಸ್ಟರ್ ಪ್ರದೀಪ್ ಸಂಗೀತ ನಿರ್ದೇಶನ ಮಾಡಿದ್ದು, ಸಿಲ್ವೆಸ್ಟರ್ ಪ್ರದೀಪ್ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ಚಿತ್ರ 18ಕ್ಕೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UI ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ರಿಯಲ್ ಸ್ಟಾರ್ ಉಪೇಂದ್ರ
BBK11: ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಗುಡ್ ಬೈ.. ಫ್ಯಾನ್ಸ್ ಶಾಕ್
Martin Box Office: ಹೇಗಿದೆ ʼಮಾರ್ಟಿನ್ʼ ಹವಾ.. ಎರಡು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?
Yuva: ರೌಡಿಸಂ ಸುತ್ತ ಯುವ ರಾಜಕುಮಾರ್: ಹೊಸ ಚಿತ್ರಕ್ಕೆ 3 ನಿರ್ಮಾಪಕರು
Box office: ಮಾರ್ಟಿನ್ To ಜಿಗ್ರಾ.. ದಸರಾಕ್ಕೆ ರಿಲೀಸ್ ಆದ ಸಿನಿಮಾಗಳು ಗಳಿಸಿದ್ದೆಷ್ಟು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಪಾತಕಿ ಲಾರೆನ್ಸ್ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?
Kinnigoli: ಒಂದೇ ಮಳೆಗೆ ಎದ್ದು ಹೋಯಿತು ಕಾಟಾಚಾರದ ತೇಪೆ!
Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!
Madantyaru; ಗೇರುಕಟ್ಟೆ ಪ್ರೌಢಶಾಲೆಯ 4 ಕಟ್ಟಡ ಶಿಥಿಲ!
Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.