ಶೂಟಿಂಗ್‌ ಶುರುವಾಗೋ ಮುನ್ನವೇ ʼಕಾಂತಾರ-1ʼ ಓಟಿಟಿ ಹಕ್ಕನ್ನು ಖರೀದಿಸಿದ ಅಮೇಜಾನ್ ಪ್ರೈಮ್


Team Udayavani, Mar 20, 2024, 10:40 AM IST

ಶೂಟಿಂಗ್‌ ಶುರುವಾಗೋ ಮುನ್ನವೇ ʼಕಾಂತಾರ-1ʼ ಓಟಿಟಿ ಹಕ್ಕನ್ನು ಖರೀದಿಸಿದ ಅಮೇಜಾನ್ ಪ್ರೈಮ್

ಬೆಂಗಳೂರು: ರಿಷಬ್‌ ಶೆಟ್ಟಿ ಅವರ ʼಕಾಂತಾರ-1ʼ ಅನೌನ್ಸ್‌ ಆದ ದಿನದಿಂದ ಸುದ್ದಿಯಲ್ಲಿದೆ. ಅದಕ್ಕೆ ಕಾರಣ ʼಕಾಂತಾರʼ ಸೃಷ್ಟಿಸಿದ ದಾಖಲೆ ಎಂದರೆ ತಪ್ಪಾಗದು. ಸಿನಿಮಾ ಪ್ರೀಕ್ವೆಲ್‌ ದೊಡ್ಡಮಟ್ಟದಲ್ಲಿ ತೆರೆ ಕಾಣಲಿದೆ. ಈಗಾಗಲೇ ರಿಲೀಸ್‌ ಆಗಿರುವ ಟೀಸರ್‌ ಮತ್ತಷ್ಟು ಹೈಪ್‌ ಹೆಚ್ಚಿಸಿ ಪ್ರೇಕ್ಷಕರನ್ನು ಕುತೂಹಲದಿಂದ ಕಾಯುವಂತೆ ಮಾಡಿದೆ.

ʼಕಾಂತಾರʼ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್‌ ಆಗಿತ್ತು. ಆ ಬಳಿಕ ನಾನಾ ಭಾಷೆಗೆ ಡಬ್‌ ಆಗಿ ಪ್ಯಾನ್‌ ಇಂಡಿಯಾದಲ್ಲಿ ಸಖತ್‌ ಸದ್ದು ಮಾಡಿತ್ತು. ಸಿನಿಮಾದ ಪ್ರೀಕ್ವೆಲ್‌ ತೆರೆಗೆ ತರಲು ರಿಷಬ್‌ ಸಾಕಷ್ಟು ತಯಾರಿ ನಡೆಸಿಕೊಂಡಿದ್ದಾರೆ. ಮುಹೂರ್ತದ ಬಳಿಕ ಚಿತ್ರೀಕರಣದ ಆರಂಭಕ್ಕೆ ಪೂರ್ವ ತಯಾರಿಯನ್ನು ನಡೆಸುವಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.

ಇದೀಗ ಸಿನಿಮಾದ ಚಿತ್ರೀಕರಣ ಆರಂಭಕ್ಕೂ ಮುನ್ನವೇ ಸಿನಿಮಾದ ಓಟಿಟಿ ಖರೀದಿ ಹಕ್ಕನ್ನು ಪ್ರತಿಷ್ಠಿತ ಓಟಿಟಿ ಫ್ಲಾಟ್‌ ಫಾರ್ಮ್‌ ವೊಂದು ಖರೀದಿಸುವ ಮೂಲಕ ʼಕಾಂತಾರ-1ʼ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ.

ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ʼಕಾಂತಾರʼ ಸಿನಿಮಾವನ್ನು ಅಮೇಜಾನ್‌ ಪ್ರೈಮ್‌ ಓಟಿಟಿಗೆ ಖರೀದಿಸಿತ್ತು. ಇದೀಗ ʼಕಾಂತಾರ-1ʼ ಸಿನಿಮಾವನ್ನೂ ಚಿತ್ರೀಕರಣ ಆರಂಭಕ್ಕೂ ಮುನ್ನವೇ ಅಮೇಜಾನ್‌ ಪ್ರೈಮ್‌ ಖರೀದಿಸಿದೆ. ಥಿಯೇಟರ್‌ ನಲ್ಲಿ ರಿಲೀಸ್‌ ಆದ ಒಂದೂವರೆ ಅಥವಾ ಎರಡು ತಿಂಗಳ ಬಳಿಕ ಪ್ರೈಮ್‌ ನಲ್ಲಿ ಸಿನಿಮಾ ಸ್ಟ್ರೀಮ್‌ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ʼಕಾಂತಾರ-1ʼ ಸಿನಿಮಾದ ಓಟಿಟಿ ಹಕ್ಕು ದೊಡ್ಡಮಟ್ಟದ ಮೊತ್ತಕ್ಕೆ ಪ್ರೈಮ್‌ ಖರೀದಿಸಿದೆ ಎನ್ನಲಾಗಿದೆ. ಫೋಸ್ಟರ್‌ ವೊಂದನ್ನು ಹಂಚಿಕೊಂಡು ಅಮೇಜಾನ್‌ ಪ್ರೈಮ್‌ ʼಕಾಂತಾರ-1ʼ ಸಿನಿಮಾ ಥಿಯೇಟರ್‌ ನಲ್ಲಿ ರಿಲೀಸ್‌ ಆದ ಬಳಿಕ ಪ್ರೈಮ್‌ ನಲ್ಲಿ ಸಿಗುತ್ತದೆ ಎಂದು ಹೇಳಿದೆ.

ಮುಂಬೈನಲ್ಲಿ ನಡೆದ ಅಮೇಜಾನ್‌ ಪ್ರೈಮ್‌ ಕಾರ್ಯಕ್ರಮದಲ್ಲಿ ರಿಷಬ್‌ ಶೆಟ್ಟಿ ಅವರು ಭಾಗವಹಿಸಿದ್ದರು. “ನಮ್ಮ ಹಳ್ಳಿಯ ಕಥೆ ಮತ್ತು ಜಾನಪದವನ್ನು ಬಿಗ್‌ ಸ್ಕ್ರೀನ್‌ ನಲ್ಲಿ ತುರುವುದು ನನ್ನ ಕನಸಾಗಿತ್ತು. ಈ ಕನಸನ್ನು ʼಕಾಂತಾರʼ ಮೂಲಕ ನೀವೆಲ್ಲ ಸಾಕಾರಗೊಳಿಸಿದ್ದೀರಿ. ಸಿನಿಮಾದ ಚಿತ್ರೀಕರಣಕ್ಕೆ ನಮ್ಮ ಊರಿನಲ್ಲಿ ದೊಡ್ಡ ಸೆಟ್‌ ನ್ನು ಹಾಕಲಾಗಿದೆ. ಶೀಘ್ರದಲ್ಲಿ ಅಲ್ಲಿ ಚಿತ್ರೀಕರಣ ಆರಂಭಗೊಳ್ಳಲಿದೆ” ಎಂದು ರಿಷಬ್‌ ಹೇಳಿದ್ದಾರೆ.

ಇನ್ನು ಸಿನಿಮಾದ ನಾಯಕಿಯ ಬಗ್ಗೆ ಕುತೂಹಲ ಹೆಚ್ಚಾಗಿದೆ. ಸಾಯಿ ಪಲ್ಲವಿ, ಆಲಿಯಾ ಭಟ್, ಸಪ್ತಮಿಗೌಡ, ರುಕ್ಮಿಣಿ ವಸಂತ್ ಇವರಲ್ಲಿ ಒಬ್ಬರನ್ನು ಆಯ್ಕೆ ಮಾಡಲಿದೆ ಎಂದು ತಿಳಿದು ಬಂದಿದೆ. ಈ ಪೈಕಿ ರುಕ್ಮಿಣಿ ಅವರ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತಿದೆ. ಆದರೆ ಇದು ಇನ್ನಷ್ಟೇ ಅಧಿಕೃತವಾಗಬೇಕಿದೆ.

 

View this post on Instagram

 

A post shared by prime video IN (@primevideoin)

 

ಟಾಪ್ ನ್ಯೂಸ್

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Golden Star Ganesh: ಕ್ಷಮಿಸಿ, ಮುಂದಿನ ಸಲ ಸಿಗೋಣ..

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Sandalwood: ಮಾನ್ವಿತಾ ನಟನೆಯ ‘ಒನ್‌ ಆ್ಯಂಡ್‌ ಹಾಫ್’ ಸಿನಿಮಾ ಹಾಡಿನ ಗ್ಲಿಂಪ್ಸ್ ಬಂತು

Sandalwood: ಮಾನ್ವಿತಾ ನಟನೆಯ ‘ಒನ್‌ ಆ್ಯಂಡ್‌ ಹಾಫ್’ ಸಿನಿಮಾ ಹಾಡಿನ ಗ್ಲಿಂಪ್ಸ್ ಬಂತು

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.