![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 19, 2018, 11:02 AM IST
“ಹಳ್ಳಿ ಸೊಗಡು’ ಚಿತ್ರ ನಿರ್ದೇಶಿಸಿರುವ ಕಪಿಲ್ ಈಗ ತಮ್ಮ ನಿರ್ದೇಶನದ ಎರಡನೇ ಚಿತ್ರವನ್ನು ಆರಂಭಿಸುತ್ತಿದ್ದಾರೆ. “ಹಸಿವು ಮತ್ತು ಅರಿವು’ ಎಂಬ ಹೆಸರಿನ ಈ ಚಿತ್ರದಲ್ಲಿ ಪ್ರಪಂಚದಲ್ಲಿ ಹಸಿವು ಎನ್ನುವುದು ಎಷ್ಟು ಮಹತ್ತರವಾದುದು. ಬಡವರ ಜೀವನದಲ್ಲಿ ಹಸಿವು ಎಷ್ಟೆಲ್ಲ ಕೆಲಸಗಳನ್ನು ಮಾಡಿಸುತ್ತದೆ. ಹಸಿವಿನ ಮಹತ್ವ ಹಾಗೂ ಅದರ ಅನ್ನದ ಪ್ರಾಮುಖ್ಯತೆ ಬಗ್ಗೆ ಅರಿವನ್ನು ಮೂಡಿಸುವ ಕಥಾಹಂದರ ಈ ಚಿತ್ರದಲ್ಲಿರುತ್ತದೆ.
ಈ ಚಿತ್ರದ ಪರಿಕಲ್ಪನೆಯ ಜೊತೆಗೆ ನಿರ್ದೇಶನವನ್ನು ಕಪಿಲ್ ಅವರೇ ಮಾಡುತ್ತಿದ್ದಾರೆ. ಅಲ್ಲದೆ ಈ ಚಿತ್ರದ ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತಿದ್ದಾರೆ. ಊಟ ಮಾಡುವಾಗ ಅನ್ನವನ್ನು ಅರ್ಧಕ್ಕೆ ಬಿಡಬೇಡಿ, ಅನ್ನವನ್ನು ಬಿಸಾಕಬೇಡಿ, ಅನ್ನಕ್ಕೆ ಬೆಲೆಕೊಡಿ ಎನ್ನುವ ಸಂದೇಶವನ್ನು ಸಾರುವಂಥ ಚಲನಚಿತ್ರ ಇದಾಗಿದೆ. ಮುಂದಿನವಾರ ಈ ಚಿತ್ರದ ಹಾಡುಗಳ ಧ್ವನಿಮುದ್ರಣ ಕಾರ್ಯ ನಡೆಯಲಿದೆ.
ಭಾನು ಪೃಥ್ವಿ 100 ಮಾರ್ಕ್ ಫಿಲಂಸ್ ಲಾಂಛನದಲ್ಲಿ ಶ್ರೀಮತಿ ಶೋಭಾವತಿ ಕಪಿಲ್ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಸಿ.ನಾರಾಯಣ್, ಶ್ರೀನಾಥ್ರಾವ್ ಅವರ ಸಂಗೀತ, ಭುವನೇಶ್ವರಿ ಬಲರಾಮ್ ಅವರ ಸಂಗೀತ, ಬಿ.ಆರ್. ನರಸಿಂಹ ಮೂರ್ತಿ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಬರೆದಿದ್ದಾರೆ. ಉದಯಲೇಖಾ ಅವರ ಸಾಹಿತ್ಯ ಈ ಚಿತ್ರಕ್ಕಿದೆ. ಗುಬ್ಬಿ ನಟರಾಜ್, ಕೃಷ್ಣಮೂರ್ತಿ ತಳಾಲು ಈ ಚಿತ್ರದ ಉಳಿದ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.