KCCಗೆ ಅದ್ಧೂರಿ ತೆರೆ: ಆರು ತಂಡಗಳ ಭರ್ಜರಿ ಹಣಾಹಣಿ; ಗಣೇಶ್ ತಂಡಕ್ಕೆ ಗೆಲುವು


Team Udayavani, Dec 26, 2023, 8:37 AM IST

KCCಗೆ ಅದ್ಧೂರಿ ತೆರೆ: ಆರು ತಂಡಗಳ ಭರ್ಜರಿ ಹಣಾಹಣಿ; ಗಣೇಶ್ ತಂಡಕ್ಕೆ ಗೆಲುವು

ಮೂರು ದಿನಗಳ ಕಾಲ ನಡೆದ ಕನ್ನಡ ಚಲನಚಿತ್ರ ಕಪ್‌ಗೆ (ಕೆಸಿಸಿ) ಸೋಮವಾರ ಅದ್ಧೂರಿ ತೆರೆಬಿದ್ದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಜಿ.ಪರಮೇಶ್ವರ್‌ ಸೇರಿದಂತೆ ಅನೇಕ ಗಣ್ಯರು ಸಮಾರೋಪ ಸಮಾರಂಭಕ್ಕೆ ಸಾಕ್ಷಿಯಾದರು. ಸದಾ ಸಿನಿಮಾ ಚಿತ್ರೀಕರಣ, ಸಿನಿಮಾ ಡಿಸ್ಕಶನ್‌ ಎಂದು ಬಿಝಿಯಾಗಿರುತ್ತಿದ್ದ ಸಿನಿಮಾ ತಾರೆಯರು ಮೂರು ದಿನಗಳ ಕಾಲ ಅವೆಲ್ಲವನ್ನು ಮರೆತು ಪಕ್ಕಾ ಪ್ರೊಫೆಶನಲ್‌ ಕ್ರಿಕೆಟರ್‌ಗಳ ತರಹ ಆಡಿದ್ದು ವಿಶೇಷವಾಗಿತ್ತು. ಬಿಸಿಲಿನ ಬೇಗೆಯ ನಡುವೆಯೂ ಪ್ರತಿಯೊಬ್ಬ ಆಟಗಾರರ ತಮ್ಮ ತಂಡವನ್ನು ಗೆಲ್ಲಿಸಲು ಪಣತೊಟ್ಟು ಆಡುವ ಮೂಲಕ ತಾವು ತೆರೆಮೇಲೆಯಷ್ಟೇ ಅಲ್ಲ, ಮೈದಾನದಲ್ಲೂ ಹೀರೋಗಳೇ ಎಂಬಂತೆ ಹಾಡಿದರು. ಕೆಸಿಸಿಗೆ ಕ್ರಿಕೆಟರ್‌ಗಳಾದ ಸುರೇಶ್‌ ರೈನಾ, ದಿಶ್ಯಾನ್‌, ರಾಬೀನ್‌ ಉತ್ತಪ್ಪ ಸೇರಿ ಮತ್ತಷ್ಟು ತುಂಬಿದರು

ಅಭಿಮಾನಿಗಳ ಸಂಭ್ರಮ

ಕೆಸಿಸಿಯ ಕೊನೆಯ ದಿನವಾದ ಸೋಮವಾರ ತಮ್ಮ ನೆಚ್ಚಿನ ನಟರನ್ನು ಮೈದಾನದಲ್ಲಿ ನೋಡಲು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಒಬ್ಬೊಬ್ಬ ನಟ ಬ್ಯಾಟ್‌ ಹಿಡಿದು ಮೈದಾನಕ್ಕೆ ಬಂದಾಗಲೂ ಕೇಕೆ, ಶಿಳ್ಳೆ ಮುಗಿಲು ಮುಟ್ಟುತ್ತಿತ್ತು. ಒಟ್ಟು ಆರು ತಂಡಗಳ ನಡುವೆ ನಡೆದ ರೋಚಕ ಪಂದ್ಯದಲ್ಲಿ ಅಂತಿಮ ಹಣಾಹಣಿಗೆ ಗಣೇಶ್‌ ನಾಯಕತ್ವದ ಗಂಗಾ ವಾರಿಯರ್ ಹಾಗೂ ಶಿವಣ್ಣ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ ಬಂದುವು.

ಯಾರ ಮೇಲೆ ಯಾರ್‌ ಗೆದ್ರು

ಮೂರನೇ ದಿನ ಆರಂಭದಲ್ಲಿ ಗಂಗಾ ವಾರಿಯರ್ ಹಾಗೂ ಹೊಯ್ಸಳ ಈಗಲ್ಸ್‌ ನಡುವೆ ನಡೆದ ಪಂದ್ಯದಲ್ಲಿ ಗಂಗಾ ವಾರಿಯರ್ ಗೆಲುವಿನ ನಗೆ ಬೀರಿದರೆ, ಒಡೆಯರ್‌ ಚಾರ್ಜರ್ಸ್‌ ಹಾಗೂ ವಿಜಯ ನಗರ ಪೇಟ್ರಿಯಟ್ಸ್‌ ಪಂದ್ಯದಲಿ ಒಡೆಯರ್‌ ಚಾರ್ಜರ್ಸ್‌ ಗೆದ್ದು ಬೀಗಿತು. ಇನ್ನು ಕದಂಬ ಲಯನ್ಸ್‌ ಹಾಗೂ ರಾಷ್ಟ್ರಕೂಟ ಪ್ಯಾಂಥರ್ ನಡುವಿನ ಪಂದ್ಯಾಟಲ್ಲಿ ಶಿವಣ್ಣ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ ಗೆದ್ದು ಫೈನಲ್‌ ಪ್ರವೇಶಿಸಿತು.

ಭರ್ಜರಿ ಫೈಟ್‌

ಅಂತಿಮ ದಿನವಾದ ಸೋಮವಾರ ಗಂಗಾ ವಾರಿಯರ್, ಹೊಯ್ಸಳ ಈಗಲ್ಸ್‌, ವಿಜಯ ನಗರ ಪೇಟ್ರಿಯಟ್ಸ್‌, ಒಡೆಯರ್‌ ಚಾರ್ಜರ್ಸ್‌, ಕದಂಬ ಲಯನ್ಸ್‌, ರಾಷ್ಟ್ರಕೂಟ ಪ್ಯಾಂಥರ್ ನಡುವೆ ಪಂದ್ಯಗಳು ನಡೆದವು. ಈ ಸೆಣಸಾಟದಲ್ಲಿ ಗಂಗಾ ವಾರಿಯರ್ ಹಾಗೂ ಶಿವಣ್ಣ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ ನಡುವೆ ಅಂತಿಮ ಪಂದ್ಯ ನಡೆಯಿತು.  ಕೊನೆಗೆ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್ ಗೆಲುವಿನ ನಗೆ ಬೀರಿತು

ಮನರಂಜನೆಗೂ ಮೋಸವಿಲ್ಲ

ಸಾಮಾನ್ಯವಾಗಿ ಕ್ರಿಕೆಟ್‌ ಮೈದಾನ ಎಂದರೆ ಅಲ್ಲಿ ಕೇಕೆ, ಶಿಳ್ಳೆಗಳೇ ಕೇಳುತ್ತವೆ. ಆದರೆ, ಕೆಸಿಸಿ ಕಪ್‌ನಲ್ಲಿ ಮಾತ್ರ ಅಭಿಮಾನಿಗಳ ಜೋಶ್‌ ಜೊತೆಗೆ ಮನರಂಜನೆಗೂ ಹೆಚ್ಚಿನ ಒತ್ತು ನೀಡಲಾಗಿತ್ತು. ಕೆಸಿಸಿಯ ಮೂರನೇ ದಿನದ ಪಂದ್ಯದಲ್ಲಿ ಆಲ್‌ ಓಕೆ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ನೂರಾರು ಮಕ್ಕಳು ಕರ್ನಾಟಕ ಸಂಸ್ಕೃತಿಯನ್ನು ಬಿಂಬಿಸುವ ಹಾಡಿಗೆ ಹೆಜ್ಜೆ ಹಾಕಿದರು

ಶಿವಣ್ಣ ಡ್ಯಾನ್ಸ್‌

ಅಭಿಮಾನಿಗಳ ಅಚ್ಚುಮೆಚ್ಚಿನ ನಾಯಕ ಶಿವರಾಜ್‌ಕುಮಾರ್‌ ಮೈದಾನದಲ್ಲಿ ಅತ್ತಿಂದಿತ್ತ ಓಡಾಡುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟುತ್ತಿತ್ತು. ಶಿವಣ್ಣ ಶಿವಣ್ಣ.. ಎಂಬ ಘೋಷಣೆ ಜೋರಾಗಿ ಕೇಳಿಬರುತ್ತಿತ್ತು. ಶಿವಣ್ಣ ಕೂಡಾ ತಮ್ಮ ಅಭಿಮಾನಿಗಳನ್ನು ರಂಜಿಸಲು ಮೈದಾನದಲ್ಲಿ ಒಂದೆರಡು ಸ್ಟೆಪ್‌ ಹಾಕಿ ಗಮನ ಸೆಳೆದರು

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.