ಯಾರಾಗುತ್ತಾರೆ ಕೆಂಪೇಗೌಡ-2?


Team Udayavani, Apr 11, 2017, 12:03 PM IST

kempgowda.jpg

ಸುದೀಪ್‌ ನಿರ್ದೇಶಿಸಿ, ನಟಿಸಿರುವ “ಕೆಂಪೇಗೌಡ’ ಚಿತ್ರ ಹಿಟ್‌ ಆಗುತ್ತಿದ್ದಂತೆ, “ಕೆಂಪೇಗೌಡ-2′ ಸಿನಿಮಾ ಬರುತ್ತದೆ ಎಂಬ ಸುದ್ದಿ ಓಡಾಡುತ್ತಲೇ ಇತ್ತು. ಆದರೆ, ಯಾವಾಗ ಸೆಟ್ಟೇರುತ್ತದೆ ಎಂಬ ಬಗ್ಗೆ ಮಾಹಿತಿ ಇರಲಿಲ್ಲ. ಈಗ ಬಹುತೇಕ ಅಂತಿಮವಾಗಿದೆ. ಇದೇ ಶುಕ್ರವಾರದಂದು “ಕೆಂಪೇಗೌಡ-2′ ಚಿತ್ರ ಲಾಂಚ್‌ ಆಗುತ್ತಿದೆ. “ಕೆಂಪೇಗೌಡ’ ಚಿತ್ರ ನಿರ್ಮಿಸಿದ ಶಂಕರೇಗೌಡ ಅವರೇ “ಕೆಂಪೇಗೌಡ-2′ ಚಿತ್ರವನ್ನು ಮಾಡುತ್ತಿದ್ದಾರೆ. 

ಹಾಗಾದರೆ, ಸುದೀಪ್‌ ಅವರೇ “ಕೆಂಪೇಗೌಡ-2’ನಲ್ಲಿ ಮುಂದುವರೆಯುತ್ತಾರಾ ಎಂಬ ಕುತೂಹಲವಂತೂ ಅನೇಕರಿಗಿದೆ. ಆದರೆ, ಚಿತ್ರತಂಡ ಮಾತ್ರ ನಿರ್ದೇಶಕರಿಂದ ಹಿಡಿದು ನಾಯಕ-ನಟರವರೆಗೆ ಎಲ್ಲವನ್ನು ಗೌಪ್ಯವಾಗಿಟ್ಟಿದೆ. ಮೂಲಗಳ ಪ್ರಕಾರ, ಶಂಕರೇಗೌಡ ಅವರು ನಿರ್ಮಿಸುತ್ತಿರುವ “ಕೆಂಪೇಗೌಡ-2′ ಚಿತ್ರದಲ್ಲಿ ಸುದೀಪ್‌ ನಟಿಸುತ್ತಿಲ್ಲ. ಬದಲಾಗಿ ಬೇರೆ ನಾಯಕ ನಟರೊಬ್ಬರು ಪೊಲೀಸ್‌ ಆಗಿ ಅಬ್ಬರಿಸಲಿದ್ದಾರೆಂಬುದು ಗಾಂಧಿನಗರದ ಮಾಹಿತಿ.

ಹಾಗಂತ ಯಾರು ಎಂಬುದನ್ನು ತಿಳಿಯುವ ಕುತೂಹಲಕ್ಕೆ ಇನ್ನೂ ಸ್ವಲ್ಪ ದಿನ ಕಾಯಲೇಬೇಕು. ಒಂದು ದೊಡ್ಡ ಗ್ಯಾಪ್‌ನ ನಂತರ ಮತ್ತೆ ನಿರ್ಮಾಣಕ್ಕೆ ಮರಳಿರುವ ಶಂಕರೇಗೌಡ ಈ ಬಾರಿ ಇನ್ನೊಂದು ಬಿಗ್‌ ಬಜೆಟ್‌ ಸಿನಿಮಾ ನಿರ್ಮಿಸಲು ಯೋಜನೆ ಹಾಕಿಕೊಂಡಿದ್ದಾರೆ. ಬೇಗನೇ ಚಿತ್ರೀಕರಣ ಮುಗಿಸಿ, ಅಷ್ಟೇ ಬೇಗ ಚಿತ್ರ ಬಿಡುಗಡೆ ಮಾಡಲಿದ್ದಾರೆನ್ನಲಾಗಿದೆ. 

ಇದು ಶಂಕರೇಗೌಡ ನಿರ್ಮಾಣದ “ಕೆಂಪೇಗೌಡ-2′ ಸುದ್ದಿಯಾದರೆ, “ಹೆಬ್ಬುಲಿ’ ಬಿಡುಗಡೆಯಾದ ಬೆನ್ನಲ್ಲೇ ಆ ಚಿತ್ರದ ನಿರ್ಮಾಪಕರಲ್ಲೊಬ್ಬರಾದ ಉಮಾಪತಿ “ಕೆಂಪೇಗೌಡ-2′ ಸಿನಿಮಾ ಮಾಡುತ್ತಾರೆಂಬ ಸುದ್ದಿಯಾಗಿತ್ತು. ಅದಕ್ಕೆ ಸರಿಯಾಗಿ ಅವರು ತಮ್ಮ ಟ್ವೀಟರ್‌ನಲ್ಲಿ ಅಭಿಮಾನಿ ಮಾಡಿದ “ಕೆಂಪೇಗೌಡ-2′ ಪೋಸ್ಟರ್‌  ಶೇರ್‌ ಮಾಡಿದ್ದಾರೆ.

ಹಾಗಾದರೆ ಎರಡೆರಡು “ಕೆಂಪೇಗೌಡ-2′ ಬರಲು ಸಾಧ್ಯನಾ ಎಂಬ ಪ್ರಶ್ನೆ, ಗೊಂದಲ ಹುಟ್ಟುತ್ತದೆ. ಆ ಎಲ್ಲಾ ಪ್ರಶ್ನೆ, ಗೊಂದಲಗಳಿಗೆ ಸದ್ಯದಲ್ಲೇ ತೆರೆಬೀಳಲಿದೆ. ಇದರ ಜೊತೆಗೆ ಎಲ್ಲರನ್ನು ಕಾಡುವ ಪ್ರಶ್ನೆ “ಕೆಂಪೇಗೌಡ-2’ನಲ್ಲಿ ಈ ಬಾರಿ ಯಾರು ಘರ್ಜಿಸುತ್ತಾರೆಂಬುದು. ಕೆಲವೇ ದಿನಗಳಲ್ಲಿ ಅದಕ್ಕೂ ಉತ್ತರ ಸಿಗಲಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.