![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 17, 2019, 3:01 AM IST
“ಕೆಜಿಎಫ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಬಂದ ಶ್ರೀನಿಧಿ ಶೆಟ್ಟಿ ಈಗ ತಮಿಳು ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ವಿಕ್ರಮ್ ನಾಯಕರಾಗಿರುವ ಹೊಸ ಚಿತ್ರದಲ್ಲಿ ಶ್ರೀನಿಧಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಸುದ್ದಿಯನ್ನು ಶ್ರೀನಿಧಿ ಹಾಗೂ ಚಿತ್ರ ನಿರ್ಮಾಣ ಸಂಸ್ಥೆ ಅಧಿಕೃತಗೊಳಿಸಿದೆ. ವಿಕ್ರಮ್ 58 ಸಿನಿಮಾದಲ್ಲಿ ಶ್ರೀನಿಧಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು, “ಕೆಜಿಎಫ್’ ಚಿತ್ರ ಅನೇಕರಿಗೆ ದೊಡ್ಡ ಅವಕಾಶಗಳ ಬಾಗಿಲನ್ನು ತೆರೆದಿದ್ದು ಸುಳ್ಳಲ್ಲ.
ಅದು ಕಲಾವಿದರಿಂದ ಹಿಡಿದು ತಾಂತ್ರಿಕ ವರ್ಗದವರಿಗೂ ಬೇರೆ ಬೇರೆ ಸಿನಿಮಾಗಳಿಂದ, ಬೇರೆ ಬೇರೆ ಭಾಷೆಗಳಿಂದ ಅವಕಾಶಗಳು ಬರಲಾರಂಭಿಸಿತ್ತು. ಅದರಲ್ಲಿ ನಾಯಕಿ ಶ್ರೀನಿಧಿ ಶೆಟ್ಟಿ ಕೂಡಾ ಒಬ್ಬರು. “ಕೆಜಿಎಫ್’ ಚಿತ್ರದ ಮೂಲಕ ಸಿನಿಮಾ ಲೋಕಕ್ಕೆ ಎಂಟ್ರಿಕೊಟ್ಟ ಶ್ರೀನಿಧಿಗೆ ಆ ಚಿತ್ರದ ನಂತರ ಬೇರೆ ಬೇರೆ ಭಾಷೆಗಳಿಂದ ಅವಕಾಶ ಬಂದಿತ್ತು. ಆದರೆ, ಶ್ರೀನಿಧಿ ಮಾತ್ರ “ಕೆಜಿಎಫ್-2’ನತ್ತ ಗಮನ ಹರಿಸಿದ್ದು,
ಆ ಸಿನಿಮಾ ಮುಗಿಯುವವರೆಗೆ ಬೇರೆ ಸಿನಿಮಾ ಮಾಡುವುದಿಲ್ಲ ಎಂದಿದ್ದ ಶ್ರೀನಿಧಿ ಈಗ, “ಕೆಜಿಎಫ್-2′ ಜೊತೆಗೆ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅಂದಹಾಗೆ, “ಕೆಜಿಎಫ್’ನ ಮೊದಲ ಭಾಗಕ್ಕೆ ಹೋಲಿಸಿದರೆ “ಕೆಜಿಎಫ್-2’ನಲ್ಲಿ ಶ್ರೀನಿಧಿಗೆ ದೊಡ್ಡ ಪಾತ್ರವಿದೆಯಂತೆ. ಆಕೆಯ ಪಾತ್ರ ಚಾಪ್ಟರ್ 2ನ ಅಚ್ಚರಿಯಂತೆ. ಮೊದಲ ಭಾಗ ನೋಡಿದವರು ಏನು ಬೇಸರ ಮಾಡಿಕೊಂಡಿದ್ದರೋ, ಅದಕ್ಕೆಲ್ಲಾ ಉತ್ತರ ಚಾಪ್ಟರ್ 2ನಲ್ಲಿ ಸಿಗಲಿದೆಯಂತೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.