ಟ್ರೈಲರ್‌ನಲ್ಲಿ ಧೂಳೆಬ್ಬಿಸಿದ “ಕೆಜಿಎಫ್’: Watch


Team Udayavani, Nov 9, 2018, 3:17 PM IST

yash.jpg

ದೇಶಾದ್ಯಂತ ಭಾರಿ ಸದ್ದು ಮಾಡಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ “ಕೆಜಿಎಫ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಮಾಸ್ ಅ್ಯಂಡ್ ರಗಡ್ ಲುಕ್‍ನಲ್ಲಿ ಯಶ್ ಮಿಂಚಿದ್ದಾರೆ. ಹೊಂಬಾಳೆ ಪ್ರೊಡಕ್ಷನ್ಸ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ಚಿತ್ರ ಸದ್ಯ ಬಾಲಿವುಡ್ ಸಿನಿಮಾಗಳಿಗೂ ಠಕ್ಕರ್ ಕೊಡೋವರೆಗೆ ಸಿದ್ಧವಾಗಿದೆ.

ಹೌದು! ಕನ್ನಡ, ಹಿಂದಿ, ತೆಲುಗು, ಮಲಯಾಳಂ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ತಯಾರಾಗಿರುವ ಈ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲೇ ಅತೀ ದೊಡ್ಡ ಬಜೆಟ್ ಸಿನಿಮಾ ಆಗಿರುವ “ಕೆಜಿಎಫ್’, ಇದೇ ಡಿಸೆಂಬರ್ 21ರಂದು ಐದು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ. 80ರ ದಶಕದ ಕಾಲಘಟ್ಟದ ಕಥೆಯಲ್ಲಿ ಪಾತ್ರಕ್ಕಾಗಿ ಒಂದೂವರೆ ವರ್ಷ ಗಡ್ಡ, ಕೂದಲು ಬಿಟ್ಟು ರಫ್ ಅಂಡ್ ಟಫ್ ಲುಕ್​ನಲ್ಲಿ ಯಶ್​​​ ಕಾಣಿಸಿಕೊಂಡಿದ್ದಾರೆ.

ಅವರ ಅಭಿನಯ ಕೂಡ ಈ ಚಿತ್ರದಲ್ಲಿ ಸಖತ್ ಡಿಫರೆಂಟ್ ಆಗಿದೆ ಎನ್ನಲಾಗುತ್ತಿದೆ. ಇನ್ನು ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಭುವನ ಗೌಡ ಛಾಯಾಗ್ರಹಣ ಮಾಡಿದ್ದಾರೆ. ಯಶ್ ಎದುರಿಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದು, ಇನ್ನುಳಿದಂತೆ ಅನಂತ್ ನಾಗ್, ಮಾಳವಿಕಾ, ಟಿ.ಎಸ್.ನಾಗಾಭರಣ, ಬಿ,ಸುರೇಶ್, ಅಯ್ಯಪ್ಪ, ನೀನಾಸಂ ಅಶ್ವಥ್, ಅಚ್ಯುತ್ ಕುಮಾರ್, ರಾಮ್, ಅವಿನಾಶ್, ಲಕ್ಕಿ, ಹರೀಶ್ ರಾಯ್ ಸೇರಿದಂತೆ ಹಲವರು ಚಿತ್ರದಲ್ಲಿ ನಟಿಸಿದ್ದಾರೆ. 

ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿ ಕನ್ನಡ ಹಾಗೂ ಮಲಯಾಳಂನಲ್ಲಿ ವಿತರಣೆ ಮಾಡಲಾಗುತ್ತಿದ್ದು, ತಮಿಳಿನಲ್ಲಿ ನಟ ವಿಶಾಲ್ ತಮ್ಮ ವಿಶಾಲ್​ ಫಿಲ್ಮ್ ಫ್ಯಾಕ್ಟರಿ ಮೂಲಕ ವಿತರಿಸಲಿದ್ದಾರೆ. ಹಿಂದಿಯಲ್ಲಿ ಫರ್ಹಾನ್ ಆಖ್ತರ್ ಹಾಗೂ ರಿತೇಶ್ ಸಿಧ್ವಾನಿ ತಮ್ಮ ಎಕ್ಸೆಲ್ ಎಂಟರ್​ಟೈನ್​ ಮೆಂಟ್ ಹಾಗೂ ತೆಲುಗಿನಲ್ಲಿ ಪ್ರಸಿದ್ಧ ವಾರಾಹಿ ಚಲನಚಿತ್ರಂ ಸಂಸ್ಥೆ ಆಂಧ್ರ, ತೆಲಂಗಾಣದಲ್ಲಿ ಬಿಡುಗಡೆಯ ಜವಾಬ್ದಾರಿಯನ್ನು ಹೊತ್ತಿಕೊಂಡಿದೆ. 

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.