![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 3, 2022, 11:46 AM IST
ದೇಶವೇ ಎದುರು ನೀಡುತ್ತಿರುವ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರವು ಇಂಗ್ಲೀಷ್ ಭಾಷೆಯಲ್ಲೂ ತೆರೆಕಾಣುತ್ತಿದೆ. ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ನಿರ್ದೇಶನದ ಚಿತ್ರದ ಒಂದೊಂದೇ ಮಾಹಿತಿ ಹೊರಬರುತ್ತಿದೆ.
ಇದೀಗ ನಿರ್ದೇಶಕ ಅನೂಪ್ ಭಂಡಾರಿ ಹೊಸ ವಿಚಾರವೊಂದನ್ನು ತಿಳಿಸಿದ್ದಾರೆ. ಅದು ವಿಕ್ರಾಂತ್ ರೋಣ ಇಂಗ್ಲೀಷ್ ವರ್ಷನ್ ಡಬ್ಬಿಂಗ್ ಬಗ್ಗೆ. ಈ ಬಗ್ಗೆ ಟ್ವೀಟ್ ಮಾಡಿರುವ ಅನೂಪ್, “ಕಿಚ್ಚ ಸುದೀಪ್ ಸರ್ ಇಂಗ್ಲಿಷ್ ಆವೃತ್ತಿಗೆ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ. ಇಂಗ್ಲೀಷ್ನಲ್ಲಿ ಪೂರ್ಣ ಪ್ರಮಾಣದ ಕಮರ್ಷಿಯಲ್ ಚಲನಚಿತ್ರಕ್ಕೆ ಡಬ್ ಮಾಡಿದ ಕನ್ನಡದ ಮೊದಲ ಸೂಪರ್ಸ್ಟಾರ್ ಮತ್ತು ಭಾರತದ ಕೆಲವೇ ಕೆಲವು ವ್ಯಕ್ತಿಗಳಲ್ಲಿ ಒಬ್ಬರು” ಎಂದು ಬರೆದುಕೊಂಡಿದ್ದಾರೆ.
ಇಂಗ್ಲೀಷ್ ಭಾಷೆಯಲ್ಲಿ ಸುದೀಪ್ ಡೈಲಾಗ್ಸ್ ಕಂಡು ಕಿಚ್ಚನ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ, ಮಧುಸೂದನ್ ರಾವ್, ವಾಸುಕಿ ವೈಭವ್ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ:ಹಾಡಿನಲ್ಲಿ ಎಂಟ್ರಿಕೊಟ್ಟ ಕೌಟಿಲ್ಯ; ಕಿರುತೆರೆ ನಟ ಅರ್ಜುನ್ ರಮೇಶ್ ನಾಯಕ
ಜ್ಯಾಕ್ ಮಂಜು- ಶಾಲಿನಿ ಮಂಜು ನಿರ್ಮಾಣದ, ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ‘ವಿಕ್ರಾಂತ್ ರೋಣ’ ಚಿತ್ರವು 14 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 3D ವರ್ಷನ್ ನಲ್ಲಿರುವ ‘ವಿಕ್ರಾಂತ್ ರೋಣ’ ಸಿನಿಮಾ, 55 ದೇಶಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.
#VikrantRonaInEnglish @KicchaSudeep sir completes dubbing for the English version. First Kannada superstar & one of the few from India to dub for a full fledged commercial movie in English #VikrantRоna pic.twitter.com/xXAvJgAmts
— Anup Bhandari (@anupsbhandari) March 2, 2022
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.