ಪೈಲ್ವಾನ್ ಕಿಚ್ಚನಿಗೆ ಬ್ಲೂ ರೂಂನಲ್ಲಿ ಪ್ರಶ್ನೆಗಳ ಸುರಿಮಳೆ!


Team Udayavani, Sep 10, 2019, 9:59 PM IST

Blue-Room-726

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಬಹುನಿರೀಕ್ಷಿತ ಪೈಲ್ವಾನ್ ಚಿತ್ರ ಇದೇ ಗುರುವಾರದಂದು ವಿಶ್ವಾದ್ಯಂತ ತೆರೆಕಾಣುತ್ತಿದೆ. ಚಿತ್ರತಂಡವಂತೂ ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದೆ.

ನಟ ಸುದೀಪ್ ಅವರೂ ಸಹ ತಮ್ಮ ಮಹತ್ವಾಕಾಂಕ್ಷಿ ಚಿತ್ರದ ಕುರಿತಾಗಿ ಸಾಮಾಜಿಕ ಜಾಲತಾಣವೂ ಸೇರಿದಂತೆ ವಿವಿಧ ಕಡೆಗಳಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ಈ ನಡುವೆ ಸಂದರ್ಶನ, ಪ್ರಶ್ನೋತ್ತರ ಸೇರಿದಂತೆ ಸಂವಹನ ಚಟುವಟಿಕೆಗಳಿಗಾಗಿ ರೂಪುಗೊಂಡಿರುವ ಟ್ವಿಟ್ಟರ್ ಬ್ಲೂ ರೂಂನಲ್ಲಿ ಇದೇ ಮೊದಲ ಬಾರಿಗೆ ಸ್ಯಾಂಡಲ್ ವುಡ್ ನಟರೊಬ್ಬರು ಪ್ರವೇಶ ಪಡೆದಿದ್ದು ಅಲ್ಲಿ ಕಿಚ್ಚ ಸುದೀಪ್ ಅವರು #ASKPAILWAAN ಹ್ಯಾಷ್ ಟ್ಯಾಗ್ ನಡಿಯಲ್ಲಿ ಟ್ವಿಟ್ಟರಿಗರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.


ಸುದೀಪ್ ಅವರ ಅಭಿಮಾನಿಗಳು ಮಾತ್ರವಲ್ಲದೇ ಸ್ಯಾಂಡಲ್ ವುಡ್ ತಾರೆಯರೂ ಸಹ ಈ ಚರ್ಚೆಯಲ್ಲಿ ಪಾಲ್ಗೊಂಡು ಕಿಚ್ಚನಿಗೆ ಪ್ರಶ್ನೆಗಳನ್ನು ಕೆಳಿದ್ದಾರೆ. ಇನ್ನು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು, ಪವನ್ ಕಲ್ಯಾಣ್ ಅವರ ಅಭಿಮಾನಿಗಳೂ ಸಹ ಈ ವೇದಿಕೆಯಲ್ಲಿ ಸುದೀಪ್ ಅವರಿಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

‘ನನ್ನಂತಹ ಯುವಕರಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನೀವು ಹೇಗೆ ಸಹಾಯ ಮಾಡುತ್ತೀರಿ’ ಎಂದು ಕೇಳಲಾದ ಪ್ರಶ್ನೆಗೆ ಕಿಚ್ಚ ನೀಡಿದ ಉತ್ತರ ಹೀಗಿತ್ತು – ‘ಕೊಡುವುದರಿಂದ ನಾನು ಬಡವನಾಗುವುದಿಲ್ಲ, ನನಗೆ ಹಸಿವಾಗಿದ್ದ ಸಂದರ್ಭದಲ್ಲಿ ಖಾಲಿಯಾಗಿದ್ದ ತಟ್ಟೆ ನನಗೆ ಬಲುದೊಡ್ಡ ಪಾಠವನ್ನು ಕಲಿಸಿದೆ, ಹಾಗಾಗಿ ಈಗ ನನ್ನ ಬಳಿ ಹಸಿವು ಎಂದು ಬರುವ ಯಾರನ್ನೂ ಸಹ ನಾನು ಹಾಗೆಯೇ ವಾಪಾಸು ಕಳಿಸುವುದಿಲ್ಲ’ ಎಂದು ಬಹಳ ಮಾರ್ಮಿಕವಾಗಿ ಉತ್ತರಿಸಿದ್ದಾರೆ.


ಇನ್ನು ತೆಲುಗು ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ಎಂಬ ಟ್ವಿಟ್ಟರ್ ಅಕೌಂಟ್ ನಲ್ಲಿ ಸುದೀಪ್ ಅವರು ಈ ಹಿಂದೆ ತೆಲುಗು ಚಾನೆಲ್ ಒಂದಕ್ಕೆ ನೀಡಿದ್ದ ಸಂದರ್ಶನದಲ್ಲಿನ ಗಮನ ಸೆಳೆದ ಉತ್ತರ ಒಂದನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಸಂದರ್ಶಕ ಸುದೀಪ್ ಅವರಿಗೆ ಕೇಳುತ್ತಾರೆ, ’22 ವರ್ಷದ ನಿಮ್ಮ ಸಿನಿ ಜರ್ನಿಯಲ್ಲಿ ಹಿಂದಕ್ಕೆ ತಿರುಗಿ ನೋಡಿದಾಗ ನಿಮಗೆ ಏನನ್ನಿಸುತ್ತದೆ’ ಅದಕ್ಕೆ ಸುದೀಪ್ ಅವರು ಕೊಟ್ಟ ಉತ್ತರ ‘ನಾನೆಂದೂ ಹಿಂದೆ ತಿರುಗಿ ನೋಡಿಲ್ಲ ಸರ್, ಯಾಕೆಂದರೆ, ಹಿಂದೆ ತಿರುಗಿ ನೋಡಲು ನಾನೇನೂ ಅಲ್ಲಿ ಮರೆತಿಲ್ಲ!’. ಇದು ಬಹಳ ಸ್ಪೂರ್ತಿದಾಯಕ ಎಂದು ಅಲ್ಲಿ ಬರೆಯಲಾಗಿದೆ. ಇದಕ್ಕೆ ಸುದೀಪ್ ಅವರು ‘ಮಚ್ ಲವ್ ಆಲ್ವೇಸ್’ ಎಂದು ಪ್ರತಿಕ್ರಿಯಿಸಿದ್ದಾರೆ.

ಇನ್ನು ಚೆರಿಲ್ ಆ್ಯನ್ ಕೌಟೋ ಅನ್ನುವವರು ಸುದೀಪ್ ಮತ್ತು ಪೈಲ್ವಾನ್ ಚಿತ್ರತಂಡ ಫೈಟ್ ಸೀನ್ ಶೂಟಿಂಗ್ ಗಾಗಿ ಮುಂಬಯಿಗೆ ಬಂದಿದ್ದಾಗ ಅಲ್ಲಿ ಮಳೆಯಲ್ಲಿ ಸಿಲುಕಿಕೊಂಡ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಅದಕ್ಕೆ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿ ಮುಂಬಯಿಯಲ್ಲಿ ನೀವು ತೋರಿದ ಆದರಾತಿಥ್ಯಗಳಿಗೆ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.