Sandalwood: ‘ಮ್ಯಾಕ್ಸ್ʼ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಕಿಚ್ಚ: “ಟ್ರೇಲರ್ ನನ್ನನ್ನು..”
Team Udayavani, Mar 9, 2024, 12:34 PM IST
ಬೆಂಗಳೂರು: ಕಿಚ್ಚ ಸುದೀಪ್ ಅವರ ʼಮ್ಯಾಕ್ಸ್ʼ ಸಿನಿಮಾ ಅನೌನ್ಸ್ ಆದ ದಿನದಿಂದ ಅಭಿಮಾನಿಗಳ ವಲಯದಲ್ಲಿ ಸಖತ್ ಸದ್ದು ಮಾಡಿದೆ. ಸಿನಿಮಾ ಶೂಟಿಂಗ್ ಹಂತದಲ್ಲೇ ಸೌಂಡ್ ಮಾಡಿದೆ.
ಬಹುಭಾಷೆಯಲ್ಲಿ ʼಮ್ಯಾಕ್ಸ್ʼ ಮೂಡಿಬರುತ್ತಿದೆ. ವಿಜಯ್ ಕಾರ್ತಿಕೇಯನ್ ಅವರ ಚೊಚ್ಚಲ ನಿರ್ದೇಶನದ ಈ ಸಿನಿಮಾದ ಶೂಟಿಂಗ್ ಅಂತಿಮ ಹಂತದಲ್ಲಿದೆ. ʼಬಿಗ್ ಬಾಸ್ʼ ಕಾರ್ಯಕ್ರಮದ ಸಮಯದಲ್ಲೂ ಕಿಚ್ಚ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.
ಸಿನಿಮಾದಲ್ಲಿ ಸುದೀಪ್ ಪೊಲೀಸ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದ್ದು,ಸಿನಿಮಾ ಶೂಟಿಂಗ್ ಬಗ್ಗೆ ಕಿಚ್ಚ ಅಪ್ಡೇಟ್ ವೊಂದನ್ನು ನೀಡಿದ್ದಾರೆ. ʼʼಮ್ಯಾಕ್ಸ್ ಸಿನಿಮಾದ ಕ್ಲೈಮ್ಯಾಕ್ಸ್ ಹಂತದ ಪ್ರಮುಖ ಭಾಗವನ್ನು ಪೂರ್ಣಗೊಳಿಸಲಾಗಿದೆ. ಇದುವರೆಗೆ ಶೂಟ್ ಆಗಿರುವ ದೃಶ್ಯವನ್ನು ನೋಡಿದೆ. ಚಿತ್ರತಂಡ ಪ್ರತಿಯೊಂದು ಭಾಗವನ್ನು ಹೇಗೆ ನಿಭಾಯಿಸಿದೆ ಎನ್ನುವುದನ್ನು ಹೇಳಲು ನನಗೆ ಖುಷಿಯಾಗುತ್ತದೆ. ಚಿತ್ರದ ಸ್ವಲ್ಪ ಭಾಗ ಚಿತ್ರೀಕರಣ ಬಾಕಿ ಇದೆ. ರಫ್ ಕಟ್ ಟ್ರೇಲರ್ ಸಹ ನೋಡಿದೆ ಮತ್ತು ಅದು ನನ್ನನ್ನು ಥ್ರಿಲ್ ಮಾಡಿದೆ” ಎಂದು ಕಿಚ್ಚ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: 51ನೇ ಸಿನಿಮಾದಲ್ಲಿ ʼಕುಬೇರʼನಾಗಿ ಕಾಣಿಸಿಕೊಳ್ಳಲಿದ್ದಾರೆ ಧನುಷ್; ಫಸ್ಟ್ ಲುಕ್ ಔಟ್
ಸಿನಿಮಾದಲ್ಲಿ ಹೈ-ಆಕ್ಟೇನ್ ಸ್ಟಂಟ್ ಸೀಕ್ವೆನ್ಸ್ ಇರಲಿದ್ದು,ಚೇತನ್ ಡಿ ಸೋಜಾ ಸಾಹಸ ನಿರ್ದೇಶನ ಮಾಡಿದ್ದಾರೆ.
ಸಿನಿಮಾದಲ್ಲಿ ವರಲಕ್ಷ್ಮಿ ಶರತ್ಕುಮಾರ್ ,ಸಂಯುಕ್ತಾ ಹೊರ್ನಾಡ್, ಸುಕೃತಾ ವಾಗ್ಲೆ ಮತ್ತು ಅನಿರುದ್ಧ್ ಭಟ್ ಕೂಡ ನಟಿಸಿದ್ದಾರೆ.
Finished a major portion of #Max climax.
Saw the run-through of what’s shot so far, and I’m supaa happy wth how the team has conceived every bit of the film.
A small portion of the film remains to be shot.
Also saw the rough cut if the trailer, and it thrilled me.🤗♥️— Kichcha Sudeepa (@KicchaSudeep) March 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana Polls ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.