![Goverment-school](https://www.udayavani.com/wp-content/uploads/2024/07/Goverment-school-415x249.jpg)
ರಗಡ್ Ronny; ಕಿರಣ್ ರಾಜ್ ದೊಡ್ಡ ಕನಸು
Team Udayavani, Jul 8, 2023, 7:07 PM IST
![kiran raj’s ronny movie](https://www.udayavani.com/wp-content/uploads/2023/07/ronny-620x342.jpg)
ಕನ್ನಡ ಚಿತ್ರರಂಗಕ್ಕೆ ಹೊಸದಾಗಿ ಬರುವ ಸಿನಿಮಾ ಪ್ರೇಮಿಗಳ ಕನಸು ಕೂಡಾ ದೊಡ್ಡದಾಗುತ್ತಿದೆ. ಹೊಸದನ್ನು ಕಟ್ಟಿಕೊಡುವ ಹಂಬಲದ ಜೊತೆಗೆ, ಎಲ್ಲರ ಗಮನ ಸೆಳೆಯುವ ಮಟ್ಟಕ್ಕೆ ಸಿನಿಮಾ ಮಾಡಬೇಕು ಎಂಬ ಶ್ರಮ, ಶ್ರದ್ಧೆಯೊಂದಿಗೆ ಕೆಲಸ ಮಾಡುತ್ತಿದ್ದಾರೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ “ರಾನಿ’.
ಕಿರುತೆರೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ಈಗ “ರಾನಿ’ ಮೂಲಕ ಹಿರಿತೆರೆಯಲ್ಲಿ ಅದ್ಧೂರಿಯಾಗಿ ಮಿಂಚಲಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಆ ಚಿತ್ರದ ಟೀಸರ್ ಇದೆ. ಔಟ್ ಅಂಡ್ ಔಟ್ ಆ್ಯಕ್ಷನ್ ಹಿನ್ನೆಲೆಯಲ್ಲಿ ಮೂಡಿಬಂದಿರುವ ಟೀಸರ್ ಅನ್ನು ದೊಡ್ಡ ಮಟ್ಟದಲ್ಲಿ ಕಟ್ಟಿಕೊಡಲಾಗಿದೆ. ಈ ಮೂಲಕ ಸದ್ಯ ಕನ್ನಡ ಚಿತ್ರರಂಗದ ನಿರೀಕ್ಷಿತ ಸಿನಿಮಾಗಳ ಪಟ್ಟಿಗೆ “ರಾನಿ’ ಕೂಡಾ ಸೇರ್ಪಡೆಯಾಗಿದೆ.
ಅಂದಹಾಗೆ, ಇತ್ತೀಚೆಗೆ ಮಾಗಡಿ ರಸ್ತೆಯ ವಿಕ್ಟರಿ ಚಿತ್ರಮಂದಿ ರದಲ್ಲಿ “ರಾನಿ’ ಸಿನಿಮಾದ ಟೀಸರ್ ಬಿಡುಗಡೆ ಸಮಾರಂಭ ಹಾಗೂ ಕಿರಣ್ ರಾಜ್ ಹುಟ್ಟುಹಬ್ಬ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಿರಣ್ ರಾಜ್, “ನಿಮ್ಮೆಲ್ಲರ ಅಭಿಮಾನಕ್ಕೆ ನಾನು ಚಿರಋಣಿ. “ರಾನಿ’ ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆ. ಗುರುತೇಜ್ ಶೆಟ್ಟಿ ವಿಭಿನ್ನ ಕಥೆ ಮಾಡಿದ್ದಾರೆ. ನಿರ್ಮಾಪಕರು ಯಾವುದೇ ಕೊರತೆ ಇಲ್ಲದೆ ನಿರ್ಮಾಣ ಮಾಡಿದ್ದಾರೆ. ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ತುಂಬಾ ಚೆನ್ನಾಗಿದೆ ಎಂದರು.
ನಿರ್ದೇಶಕ ಗುರುತೇಜ್ ಶೆಟ್ಟಿ ಮಾತನಾಡಿ, “ನಾನು ಚಿತ್ರರಂಗದಿಂದ ದೂರ ಉಳಿದಿದ್ದ ಸಮಯದಲ್ಲಿ ಮಿತ್ರ ಗಿರೀಶ್ ಹೆಗಡೆ, ನಿರ್ಮಾಪಕ ಉಮೇಶ್ ಹೆಗಡೆ ಅವರನ್ನು ಪರಿಚಯಿಸಿದರು. ಉಮೇಶ್ ಹೆಗಡೆ ಹಾಗೂ ಚಂದ್ರಕಾಂತ್ ಪೂಜಾರಿ ಅವರು ಈ ಚಿತ್ರದ ಕಥೆ ಕೇಳಿ ನಿರ್ಮಾಣಕ್ಕೆ ಮುಂದಾದರು. ನಾಯಕ ಕಿರಣ್ ರಾಜ್ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಅವರು ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ನಟನೆಗಷ್ಟೇ ಸೀಮಿತವಾಗದೆ, ನನ್ನ ಜೊತೆ ಪ್ರತಿಯೊಂದು ಕೆಲಸದಲ್ಲೂ ಭಾಗಿಯಾಗಿದ್ದಾರೆ. ಮಣಿಕಾಂತ್ ಕದ್ರಿ ಚಿತ್ರಕ್ಕೆ ಸಂಗೀತ ನೀಡಿರುವುದಷ್ಟೇ ಅಲ್ಲದೇ, ಟೀಸರ್ಗೆ ಧ್ವನಿ ಸಹ ನೀಡಿದ್ದಾರೆ. ರಾಘವೇಂದ್ರ ಬಿ ಕೋಲಾರ ಛಾಯಾಗ್ರಹಣ, ಸತೀಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರೀಕರಣ ಮುಕ್ತಾಯವಾಗಿದೆ’ ಎಂದರು
ಟಾಪ್ ನ್ಯೂಸ್
![Goverment-school](https://www.udayavani.com/wp-content/uploads/2024/07/Goverment-school-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್](https://www.udayavani.com/wp-content/uploads/2024/07/15-2-150x90.jpg)
ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್
![“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್](https://www.udayavani.com/wp-content/uploads/2024/07/13-2-150x90.jpg)
“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್
![Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ](https://www.udayavani.com/wp-content/uploads/2024/07/12-3-150x90.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-150x83.jpg)
ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು
![Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ](https://www.udayavani.com/wp-content/uploads/2024/07/9-3-150x90.jpg)
Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.