![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 18, 2019, 3:04 AM IST
ನಟ ಕೋಮಲ್ ಅವರ ಸಿನಿಮಾ ಬಿಡುಗಡೆಯಾಗದೇ ದೊಡ್ಡ ಗ್ಯಾಪ್ ಆಗಿತ್ತು. ಅದಕ್ಕೆ ಸರಿಯಾಗಿ ಕೋಮಲ್, ಕಾಮಿಡಿಯಿಂದ ಆ್ಯಕ್ಷನ್ ಹೀರೋ ಆದ “ಕೆಂಪೇಗೌಡ-2′ ಚಿತ್ರ ಕೂಡಾ ತಡವಾಗಿತ್ತು. ಕೋಮಲ್ ಮಾತ್ರ ಈ ಚಿತ್ರ ಬಿಡುಗಡೆಯಾಗುವವರೆಗೆ ಬೇರೆ ಯಾವುದೇ ಸಿನಿಮಾದಲ್ಲಿ ನಟಿಸುವುದಿಲ್ಲ ಎಂದು “ಕೆಂಪೇಗೌಡ-2′ ಚಿತ್ರದ ಮೇಲೆ ನಿರೀಕ್ಷೆ ಇಟ್ಟು ಬಿಡುಗಡೆಗೆ ಎದುರು ನೋಡುತ್ತಿದ್ದರು.
ಈಗ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದ್ದು, ದಿನಾಂಕ ಕೂಡಾ ಅಂತಿಮವಾಗಿದೆ. ಚಿತ್ರ ಆಗಸ್ಟ 09 ರಂದು ವರಮಹಾಲಕ್ಷ್ಮೀ ಹಬ್ಬದ ದಿನ ಬಿಡುಗಡೆಯಾಗುತ್ತಿದೆ. ಹೌದು, ಇತ್ತೀಚೆಗೆ ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ಈ ಮೂಲಕ ಬಿಡುಗಡೆಗೆ ಗ್ರೀನ್ಸಿಗ್ನಲ್ ಸಿಕ್ಕಂತಾಗಿದೆ. ಇಷ್ಟು ವರ್ಷ ಕಾಮಿಡಿ ನಟರಾಗಿ ಯಶಸ್ಸು ಕಂಡಿದ್ದ ಕೋಮಲ್, ಮೊದಲ ಬಾರಿಗೆ ಔಟ್ ಅಂಡ್ ಔಟ್ ಆ್ಯಕ್ಷನ್ ಸಿನಿಮಾದಲ್ಲಿ ನಟಿಸಿದ್ದಾರೆ.
ಈಗಾಗಲೇ ಚಿತ್ರದ ಟ್ರೇಲರ್ ಹಿಟ್ ಆಗಿರುವ ಮೂಲಕ ಚಿತ್ರತಂಡಕ್ಕೆ ಚಿತ್ರದ ಬಗೆಗಿನ ವಿಶ್ವಾಸ ಹೆಚ್ಚಿದೆ. ಈ ಚಿತ್ರದ ಮೂಲಕ ಕೋಮಲ್ಗೆ ಹೊಸ ಇಮೇಜ್ ಸಿಗುವ ನಿರೀಕ್ಷೆ ಕೂಡಾ ಇದೆ. ಚಿತ್ರದ ಹಿಂದಿ ಡಬ್ಬಿಂಗ್ ರೈಟ್ಸ್ ಸೇರಿದಂತೆ ಬೇರೆ ಬೇರೆ ಭಾಷೆಗಳ ಡಬ್ಬಿಂಗ್ ರೈಟ್ಸ್ಗಳಿಗೆ ಬೇಡಿಕೆ ಇದ್ದು, ಆ ಬಗ್ಗೆಯೂ ಚಿತ್ರತಂಡ ಮಾತುಕತೆ ನಡೆಸುತ್ತಿದೆಯಂತೆ.
ಶಂಕರೇಗೌಡ ಈ ಚಿತ್ರದ ನಿರ್ದೇಶಕರು. ಈ ಚಿತ್ರದ ಮತ್ತೂಂದು ವಿಶೇಷವೆಂದರೆ ಕ್ರಿಕೆಟಿಗ ಶ್ರೀಶಾಂತ್ ಕೂಡಾ ಇಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಜೊತೆಗೆ ನಟ ಯೋಗೇಶ್ ಕೂಡಾ ನಟಿಸಿದ್ದಾರೆ. .ನಿರ್ದೇಶಕರೇ ಕಥೆ ಬರೆದಿರುವ ಈ ಚಿತ್ರಕ್ಕೆ ಚಿತ್ರಕಥೆಯನ್ನು ಕೆ.ರಾಜು, ಶ್ರೀನಾಥ್ ಎಂ.ಎಸ್ ಹಾಗೂ ನಂಜುಂಡ ಅವರು ಬರೆದಿದ್ದಾರೆ.
ಚಿತ್ರದಲ್ಲಿ ಕೋಮಲ್, ಶ್ರೀಶಾಂತ್, ಯೋಗಿ, ರಕ್ಷಿಕಾ ಶರ್ಮಾ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಮೋಹನ್ ಛಾಯಾಗ್ರಹಣ, ವರುಣ್ ಉನ್ನಿ ಸಂಗೀತ, ಸಿ.ರವಿಚಂದ್ರ ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಅಂಬು ಅರಿವು, ಥ್ರಿಲ್ಲರ್ ಮಂಜು, ಜಾಲಿ ಬಾಸ್ಟಿನ್ ಅವರ ಸಾಹಸ ಚಿತ್ರಕ್ಕಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.