![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 22, 2024, 11:54 AM IST
ನಟ ಕೋಮಲ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದು, ಅವುಗಳ ಪೈಕಿ ಒಂದಾಗಿರುವ “ಕುಟೀರ’ ಸಿನಿಮಾ ಇತ್ತೀಚೆಗೆ ಮುಹೂರ್ತವನ್ನು ಆಚರಿಸಿಕೊಂಡು ಚಿತ್ರೀಕರಣಕ್ಕೆ ಹೊರಟಿದೆ. “ಕುಟೀರ’ ಸಿನಿಮಾವನ್ನು ಅನೂಪ್ ಆ್ಯಂಟೋನಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದು, “ಕಂಸಾಳೆ ಫಿಲಂಸ್’ ಬ್ಯಾನರ್ನಲ್ಲಿ ಮಧು ಮರಿಸ್ವಾಮಿ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.
“ಕುಟೀರ’ ಮುಹೂರ್ತದ ಬಳಿಕ ಮಾತನಾಡಿದ ನಾಯಕ ನಟ ಕೋಮಲ್, “ಇದೊಂದು ಹಾರರ್ ಕಾಮಿಡಿ ಶೈಲಿಯ ಸಿನಿಮಾ. “ಕುಟೀರ’ ಎಂದರೆ ಪಾಳು ಬಿದ್ದಿರುವ ಮನೆ. ಆ ಮನೆಯಲ್ಲಿ ನಡೆಯುವ ಚೇಷ್ಟೆಗಳ ಮೇಲೆ ಈ ಸಿನಿಮಾದ ಕಥೆ ನಡೆಯುತ್ತದೆ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಗಿ ಸಿನಿಮಾ ಮಾಡಲು ಒಪ್ಪಿಕೊಂಡೆ. ಈ ಶೈಲಿಯ ಸಿನಿಮಾಗಳು ನನಗೆ ತುಂಬ ಇಷ್ಟ. ಹಾರರ್-ಕಾಮಿಡಿ ಶೈಲಿಯಲ್ಲಿ ನಾನು ಅಭಿನಯಿಸುತ್ತಿರುವ ಐದನೇ ಸಿನಿಮಾ ಇದಾಗಿದ್ದು, ಪ್ರೇಕ್ಷಕರಿಗೂ ಇಷ್ಟವಾಗಲಿದೆ’ ಎಂಬ ಭರವಸೆ ವ್ಯಕ್ತಪಡಿಸಿದರು. ಅಂದಹಾಗೆ, ಈ ಸಿನಿಮಾದಲ್ಲಿ “ಒಂದಲ್ಲ, ಎರಡಲ್ಲ ಬರೋಬ್ಬರಿ ಒಂದು ಡಜನ್ ದೆವ್ವಗಳ ಜೊತೆಗೆ ಕಣ್ಣಾಮುಚ್ಚಾಲೆ ಇದೆ’ ಎನ್ನುತ್ತಾರೆ ಕೋಮಲ್.
“ಸಾಮಾನ್ಯವಾಗಿ ಹಾರರ್ ಸಿನಿಮಾಗಳೆಂದರೆ, ಒಂದು ಮನೆಯಲ್ಲಿ ಕೆಲವರು ಲಾಕ್ ಆಗುತ್ತಾರೆ ಮತ್ತು ಅಲ್ಲಿ ದೆವ್ವದ ಚೇಷ್ಟೆ ಶುರುವಾಗುತ್ತದೆ. ಆದರೆ, ಇಲ್ಲಿ ಡಜನ್ ದೆವ್ವಗಳಿವೆ. ಒಂದು ದೆವ್ವವೇ ಅಷ್ಟು ಕಾಟ ಕೊಟ್ಟರೆ, ಡಜನ್ ದೆವ್ವಗಳು ಏನೆಲ್ಲಾ ಮಾಡಬಹುದು ಯೋಚಿಸಿ. ಇಲ್ಲಿ ಹಾರರ್ ಮತ್ತು ಕಾಮಿಡಿ ಜೊತೆಗೆ ವಿಡಂಬನೆ ಸಹ ಇದೆ. ಹಾಲಿವುಡ್ನಲ್ಲಿ “ಸ್ಕೇರಿ ಮೂವಿ’ ತರಹದ ಹಾರರ್ ಸರಣಿಗಳು ಬಂದಿವೆ. ಇಲ್ಲೂ ಸಹ ಕಥೆ ಯನ್ನು ಪಾರ್ಟ್ ಬೈ ಪಾರ್ಟ್ ಮಾಡಬಹುದು. ಸಿನಿಮಾದಲ್ಲಿ ಗ್ರಾಫಿಕ್ಸ್ ಹೆಚ್ಚಿರುತ್ತದೆ. ಒಂದು ಸೆಟ್ ಹಾಕಿ, ಗ್ರೀನ್ ಮ್ಯಾಟ್ ಹಾಕಿ ಶೂಟಿಂಗ್ ಮಾಡುತ್ತಿದ್ದೇವೆ’ ಎಂಬುದು ಕೋಮಲ್ ಮಾತು.
“ಕುಟೀರ’ ಸಿನಿಮಾದಲ್ಲಿ ಕೋಮಲ್ಗೆ ನಾಯಕಿಯಾಗಿ ಪ್ರಿಯಾಂಕಾ ತಿಮ್ಮೇಶ್ ನಟಿಸುತ್ತಿದ್ದಾರೆ. ಮಿಕ್ಕಂತೆ ಅವಿನಾಶ್, ಯಶ್ ಶೆಟ್ಟಿ, ಕಾಕ್ರೋಚ್ ಸುಧಿ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಸಿನಿಮಾದ ಹಾಡುಗಳಿಗೆ ಬಿ. ಜೆ. ಭರತ್ ಸಂಗೀತ ಸಂಯೋಜಿಸುತ್ತಿದ್ದು, ಅರುಣ್ ಸುರೇಶ್ ಛಾಯಾಗ್ರಹಣ, ಎನ್. ಎಂ. ವಿಶ್ವ ಸಂಕಲನವಿದೆ. ಅಂದಹಾಗೆ, ಇದೇ ಮಾರ್ಚ್ ಎರಡನೇ ವಾರದಿಂದ “ಕುಟೀರ’ ಚಿತ್ರೀಕರಣ ಪ್ರಾರಂಭವಾಗಲಿದ್ದು, ಈ ವರ್ಷಾಂತ್ಯಕ್ಕೆ ಸಿನಿಮಾವನ್ನು ತೆರೆಗೆ ತರುವ ಪ್ಲಾನ್ ಹಾಕಿಕೊಂಡಿದೆ ಚಿತ್ರತಂಡ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.