ಕೋವಿಡ್ ವೈರಸ್ ಕಾಟ: 14 ದಿನ ಹೋಮ್ ಕ್ವಾರಂಟೈನ್ ಬಗ್ಗೆ ಶ್ರದ್ಧಾ ಶ್ರೀನಾಥ್ ಹೇಳೋದೇನು..?

14 ದಿನ ಹೋಮ್‌ ಕ್ವಾರಂಟೈನ್ ಮಾಡಿದ್ದಾರೆ' ಎಂದೆಲ್ಲ ಸುದ್ದಿ ಹರಿದಾಡುತ್ತಿತ್ತು.

Team Udayavani, Apr 4, 2020, 7:50 PM IST

ಕೋವಿಡ್ ವೈರಸ್ ಕಾಟ: 14 ದಿನ ಹೋಮ್ ಕ್ವಾರಂಟೈನ್ ಬಗ್ಗೆ ಶ್ರದ್ಧಾ ಶ್ರೀನಾಥ್ ಹೇಳೋದೇನು.

ಬೆಂಗಳೂರು: ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಅಂತ ವಿವಿಧ ಭಾಷೆಯ ಚಿತ್ರರಂಗಗಳಲ್ಲಿ ಬ್ಯುಸಿ ಆಗಿರುವ ನಟಿ ಶ್ರದ್ದಾ ಶ್ರೀನಾಥ್. ಇದರಿಂದಾಗಿ ಶ್ರದ್ದಾ ಬೇರೆ ಬೇರೆ ಕಡೆಗಳಿಗೆ ವಿಮಾನ ಪ್ರಯಾಣ ಮಾಡುತ್ತಿರುತ್ತಾರೆ. ಆದರೆ ಇದನ್ನೇ ಗಮನದಲ್ಲಿಟ್ಟುಕೊಂಡು ಶ್ರದ್ಧಾ ಬಗ್ಗೆ ಇಲ್ಲ ಸಲ್ಲದ ವದಂತಿ, ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರಂತೆ.

ಹೌದು, ಕಳೆದ ಕೆಲ ದಿನಗಳಿಂದ, ‘ಕೋವಿಡ್ ಪೀಡಿತರು ಇದ್ದ ವಿಮಾನದಲ್ಲಿ ಶ್ರದ್ಧಾ ಪ್ರಯಾಣ ಮಾಡಿದ್ದರಿಂದ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ, ಅವರನ್ನು 14 ದಿನ ಹೋಮ್‌ ಕ್ವಾರಂಟೈನ್ ಮಾಡಿದ್ದಾರೆ’ ಎಂದೆಲ್ಲ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇದೆಲ್ಲದಕ್ಕೂ ಶ್ರದ್ದಾ ಶ್ರೀನಾಥ್ ಖಡಕ್ ಆಗಿ ಉತ್ತರ ನೀಡಿದ್ದಾರೆ.

‘ನಾನು ಸಿನಿಮಾ ಕೆಲಸಗಳಿಗೆ ಮಾ. 12 ಮತ್ತು ಮಾ. 15ರಂದು ಹೈದರಾಬಾದ್ ಮತ್ತು ಚೆನ್ನೈಗೆ ತೆರಳಿದ್ದೆ. ಅಂದ ಹಾಗೆ, ನಾನು ಪ್ರಯಾಣ ಮಾಡಿದ ಯಾವುದೇ ವಿಮಾನದಲ್ಲೂ ಕೋವಿಡ್ ಪೀಡಿತರು ಇರಲಿಲ್ಲ. ಅಲ್ಲದೆ, ಕರ್ನಾಟಕದ ಯಾವುದೇ ಆರೋಗ್ಯ ಅಧಿಕಾರಿಗಳು ನಮ್ಮ ಮನೆಗೆ ಬಂದಿಲ್ಲ. ಜೊತೆಗೆ ನನಗೆ ಸೆಲ್ಪ್ ಐಸೋಲೇಷನ್‌ ಮಾಡುವಂತೆ ಅಧಿಕಾರಿಗಳು ಸೂಚಿಸಿಲ್ಲ’ ಎಂದಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಶ್ರದ್ದಾ, ತಮಗೆ ತಾವೇ ಐಸೋಲೇಷನ್‌ ಮಾಡಿಕೊಂಡಿದ್ದಾರೆ.

‘ನನ್ನ ಸಂಬಂಧಿ ವೈದ್ಯರೊಬ್ಬರ ಸಲಹೆ ಮೇರೆಗೆ ನಾನು ಸ್ವಯಂ ಐಸೋಲೇಟ್‌ ಆಗಿದ್ದೆ. ಮುನ್ನೆಚ್ಚರಿಕಾ ದೃಷ್ಟಿಯಿಂದ ಈ ರೀತಿ ಮಾಡಿದೆ. ದೇಶ ವಿದೇಶ ಪ್ರಯಾಣ ಮಾಡುವ ಯಾರೇ ಆಗಲಿ, ಈ ರೀತಿ ಮಾಡುವುದು ಸೂಕ್ತ. ಇದು ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ. ಮಾ. 29ಕ್ಕೆ ನನ್ನ ಐಸೋಲೇಷನ್‌ ಅವಧಿ ಮುಕ್ತಾಯಗೊಂಡಿದ್ದು, ಅಡುಗೆ ಮನೆಯಲ್ಲಿ ಅಮ್ಮನಿಗೆ ಸಹಾಯ ಮಾಡುವುದರಲ್ಲಿ ಬ್ಯುಸಿ ಆಗಿದ್ದೇನೆ. ಎಲ್ಲರೂ ಹುಷಾರಾಗಿರಿ. ವೈರಸ್ ಮತ್ತು ತಪ್ಪು ಮಾಹಿತಿಯನ್ನು ಹರಡದಿರಿ. ಎರಡೂ ಕೂಡ ಅಪಾಯಕಾರಿ’ ಎಂದಿದ್ದಾರೆ ಶ್ರದ್ಧಾ ಶ್ರೀನಾಥ್‌.

ಒಟ್ಟಾರೆ ಕಳೆದ ಕೆಲ ದಿನಗಳಿಂದ ಶ್ರದ್ದಾ ಶ್ರೀನಾಥ್ ಬಗ್ಗೆ ಹರಿದಾಡುತ್ತಿದ್ದ ಎಲ್ಲ ಅಂತೆ ಕಂತೆಗಳಿಗೂ ಇದೀಗ ಸ್ವತಃ ಶ್ರದ್ದಾ ಫುಲ್ ಸ್ಟಾಪ್ ಇಟ್ಟಿದ್ದಾರೆ.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.