
ಕ್ರಾಂತಿ ಮಾಡಲು ರೆಡಿ ಆದ ದರ್ಶನ್
Team Udayavani, Sep 12, 2021, 2:01 PM IST

ದರ್ಶನ್ ಅವರ ಡಿ55 ಸಿನಿಮಾದ ಟೈಟಲ್ ಲಾಂಚ್ ಆಗಿದೆ. ಪಕ್ಕಾ ಮಾಸ್ ಟೈಟಲ್ನೊಂದಿಗೆ ಅಭಿಮಾನಿಗಳ ಕ್ರೇಕ್ ಹೆಚ್ಚಿಸಿದೆ ಚಿತ್ರತಂಡ. ಅಂದಹಾಗೆ, ದರ್ಶನ್ ಅವರ ಹೊಸ ಚಿತ್ರಕ್ಕೆ “ಕ್ರಾಂತಿ’ ಎಂದು ಹೆಸರಿಡಲಾಗಿದೆ.
ಅಂದಹಾಗೆ, ಇದು ಪ್ಯಾನ್ ಇಂಡಿಯಾ ಸಿನಿಮಾ.ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.ಗಣೇಶನ ಹಬ್ಬದ ದಿನ ಈ ಐದು ಭಾಷೆಯ ಟೈಟಲ್ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ.
ಶೀಘ್ರದಲ್ಲಿಯೇ ಚಿತ್ರೀಕರಣ ಆರಂಭವಾಗಲಿದೆ.ಇನ್ನು, ತಮ್ಮ ನೆಚ್ಚಿನ ನಟನ ಟೈಟಲ್ ಪೋಸ್ಟರ್ರಿಲೀಸ್ ಆಗುತ್ತಿದ್ದಂತೆ ಅಭಿಮಾನಿಗಳು ಸಂಭ್ರಮಪಟ್ಟಿದ್ದು, ಪೋಸ್ಟರ್ಗೆ ಪೂಜೆ ಸಲ್ಲಿಸುವ ಮೂಲಕ ಹಬ್ಬಮಾಡಿದ್ದಾರೆ. ಇನ್ನು, ಈ ಚಿತ್ರವನ್ನು ವಿ.ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗುತ್ತಿದ್ದಾರೆ.
ಇದನ್ನೂ ಓದಿ:ರಗಡ್ ಲುಕ್ ನಲ್ಲಿ ಲಂಕಾಸುರ
ಕಳೆದ ಬಾರಿ “ಯಜಮಾನ’ಚಿತ್ರದ ನಿರ್ದೇಶನದಲ್ಲೂ ಹರಿಕೃಷ್ಣ ಅವರು ತೊಡಗಿಕೊಂಡಿದ್ದರು. ಜೊತೆಗೆ ಪಿ.ಕುಮಾರ್ಕೂಡಾ ನಿರ್ದೇಶಕರಾಗಿದ್ದರು. ಈ ಬಾರಿ ವಿ.ಹರಿಕೃಷ್ಣ ಅವರು ದರ್ಶನ್ ಅವರ 55ನೇ ಚಿತ್ರವನ್ನು ನಿರ್ದೇಶಿಸಲು ಅಣಿಯಾಗಿದ್ದಾರೆ. ಈ ಚಿತ್ರವನ್ನು ಮೀಡಿಯಾ ಹೌಸ್ಸ್ಟುಡಿಯೋದಡಿ ಶೈಲಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಿಸುತ್ತಿದ್ದಾರೆ. ಈಗಾಗಲೇ ಇವರುದರ್ಶನ್ ಅವರ “ಯಜಮಾನ’ ಚಿತ್ರವನ್ನು ನಿರ್ಮಿಸಿದ್ದು, ಆ ಚಿತ್ರ ಹಿಟ್ಲಿಸ್ಟ್ ಸೇರಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.