Roji: ಶೂನ್ಯ ಜೊತೆ ಒರಟ ಹೋರಾಟ
Team Udayavani, Mar 6, 2024, 6:36 PM IST
“ಒರಟ’ ಪ್ರಶಾಂತ್ “ರೋಜಿ’ ತಂಡ ಸೇರಿಕೊಂಡಿದ್ದಾರೆ. ಚಿತ್ರದಲ್ಲಿ ಅವರು “ಸ್ವಾಮಿ ಅಣ್ಣ’ ಎಂಬ ಪಾತ್ರ ಮಾಡುತ್ತಿದ್ದು, ಇತ್ತೀಚೆಗೆ ಅವರ ಪಾತ್ರ ಪರಿಚಯದ ಪೋಸ್ಟರ್ ಬಿಡುಗಡೆಯಾಯಿತು.
ಈ ಚಿತ್ರದಲ್ಲಿ ಲೂಸ್ ಮಾದ ಯೋಗಿ ನಾಯಕರಾಗಿ ನಟಿಸುತ್ತಿದ್ದಾರೆ. ಶೂನ್ಯ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
“ಒರಟ ಪ್ರಶಾಂತ್ ಬಹಳ ದಿನಗಳ ನಂತರ ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸ್ವಾಮಿ ಅಣ್ಣ ಎನ್ನುವುದು ಅವರ ಪಾತ್ರದ ಹೆಸರು. ಚಿತ್ರದಲ್ಲಿ ಇನ್ನೂ ಎರಡು ಪ್ರಮುಖ ಪಾತ್ರಗಳಿವೆ’ ಎನ್ನುವುದು ನಿರ್ದೇಶಕ ಶೂನ್ಯ ಮಾತು.
ಪ್ರಶಾಂತ್ ಅವರಿಗೂ ಈ ಸಿನಿಮಾ ಮೂಲಕ ಕಂಬ್ಯಾಕ್ ಆಗುವ ನಿರೀಕ್ಷೆ ಇದೆ. “ನನಗೆ ಬಹಳ ಅವಕಾಶಗಳು ಬಂದವು. ಆದರೆ, ನಾನು ಒಪ್ಪಿರಲಿಲ್ಲ. ಶೂನ್ಯ ಅವರು ಹೇಳಿದ ಕಥೆ ಹಾಗೂ ನನ್ನ ಪಾತ್ರ ಇಷ್ಟವಾಯಿತು. ಹಾಗಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಯೋಗಿ ಅವರ ಜೊತೆಗೆ ಅಭಿನಯಿಸುವ ಆಸೆಯಿತ್ತು. ಅದು ಈ ಚಿತ್ರದ ಮೂಲಕ ಈಡೇರುತ್ತಿದೆ ಎನ್ನುವುದು ಅವರ ಮಾತು.
”ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಎಲ್ಲಾ ಹಾಡುಗಳು ಕಥೆಗೆ ಪೂರಕವಾಗಿರುತ್ತದೆ. ನಾನು ಇತ್ತೀಚಿಗೆ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಕೊರೋನಾ ನಂತರ ನಾನು ಒಪ್ಪಿಕೊಂಡಿರುವ ಚಿತ್ರ ರೋಜಿ’ ಎಂದರು ಗುರುಕಿರಣ್.
“ರೋಜಿ’ ಚಿತ್ರವನ್ನು ಡಿ.ವೈ.ರಾಜೇಶ್, ಡಿ.ವೈ.ವಿನೋದ್ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಎಸ್.ಕೆ.ರಾವ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.