![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-415x249.jpg)
ತೆರೆಗೆ ಬರಲು ಸಿದ್ದವಾಯ್ತು ‘ಮೇಡ್ ಇನ್ ಬೆಂಗಳೂರು’
Team Udayavani, Dec 29, 2022, 4:37 PM IST
![made in bengaluru](https://www.udayavani.com/wp-content/uploads/2022/12/made-620x342.jpg)
ಕೋಟ್ಯಾಂತರ ಜನರಿಗೆ ಆಶ್ರಯ ನೀಡಿರುವ ಬೆಂಗಳೂರಿನ ಕುರಿತಾದ ಚಿತ್ರ “ಮೇಡ್ ಇನ್ ಬೆಂಗಳೂರು’ ಇದೇ ಡಿಸೆಂಬರ್ 30 ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಯುವ ಉದ್ಯಮಿ ಸುಹಾಸ್ ಗೋಪಿನಾಥ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಚಿತ್ರತಂಡಕ್ಕೆ ಶುಭ ಕೋರಿದರು.
“ನಿರ್ದೇಶಕ ಪ್ರದೀಪ್ ಶಾಸ್ತ್ರಿ ಸ್ಟಾರ್ಟ್ ಅಪ್ ಹಾಗೂ ಬೆಂಗಳೂರಿನ ಮೇಲಿರುವ ಎಮೋಷನ್ ಕುರಿತಾದ ಈ ಚಿತ್ರದ ಕಥೆ ಹೇಳಿದರು. ನಾವು ಮೂರು ಜನ ಸ್ನೇಹಿತರು ಸೇರಿ ಇಪ್ಪತ್ತೈದು ವರ್ಷಗಳ ಹಿಂದೆ ಒಂದು ಕಂಪನಿ ಆರಂಭಿಸಿ¨ªೆವು. ನನಗೆ ನಾವು ಕಂಪನಿ ಆರಂಭಿಸಿದ ದಿನಗಳು ನೆನಪಾದವು. ಕಥೆ ಇಷ್ಟವಾಗಿ ಸಿನಿಮಾ ಆರಂಭ ಮಾಡಿದ್ದೆವು. ಅನಂತನಾಗ್, ಸಾಯಿಕುಮಾರ್, ಪ್ರಕಾಶ್ ಬೆಳವಾಡಿ ಅವರಂತಹ ಹಿರಿಯ ಕಲಾವಿದರು ಹಾಗೂ ಹೊಸ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ನೋಡಿ ಹಾರೈಸಿ’ ಎಂದರು ನಿರ್ಮಾಪಕರು ಬಾಲಕೃಷ್ಣ ಬಿ.ಎಸ್.
“ಈ ಚಿತ್ರದ ನಿರ್ಮಾಪಕರಿಗೆ ಕಥೆ ಹೇಳಲು ಮೇಲಿಂದ ಮೇಲೆ ಫೋನ್ ಮಾಡುತ್ತಿದ್ದೆ. ಕೊನೆಗೂ ಕಥೆ ಕೇಳಿದ್ದ ಬಾಲಕೃಷ್ಣ ಅವರು ಚಿತ್ರ ನಿರ್ಮಾಣಕ್ಕೆ ಮುಂದಾದರು. ಬೆಂಗಳೂರು ಎಂದರೆ ಎಮೋಷನ್. ಈ ಊರು ಅನೇಕರಿಗೆ ಜೀವನ ನೀಡಿದೆ. ಬೆಂಗಳೂರು ಹಾಗೂ ಸ್ಟಾರ್ಟ್ ಅಪ್ ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ಅನಂತನಾಗ್, ಸಾಯಿಕುಮಾರ್, ಪ್ರಕಾಶ್ ಬೆಳವಾಡಿ ಮುಂತಾದ ಹಿರಿಯ ಕಲಾವಿದರು ಹಾಗೂ ಮಧುಸೂದನ್, ಪುನೀತ್ ಮಾಂಜಾ, ವಂಶೀಧರ್, ಹಿಮಾಂಶಿ ಅವರಂತಹ ಕಿರಿಯ ಕಲಾವಿದರ ತಾರಾಬಳಗ ಈ ಚಿತ್ರದಲ್ಲಿದೆ. ಉತ್ತಮ ತಂತ್ರಜ್ಞರು ಈ ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಹಾಡುಗಳು ಹಾಗೂ ಟ್ರೇಲರ್ ಮೂಲಕ ಈಗಾಗಲೇ ಜನರ ಮನ ಗೆದ್ದಿರುವ ನಮ್ಮ ಚಿತ್ರ ಡಿಸೆಂಬರ್ 30 ರಂದು ತೆರೆಗೆ ಬರಲಿದೆ. ಎಲ್ಲರೂ ನೋಡಿ’ ಎಂದರು ನಿರ್ದೇಶಕ ಪ್ರದೀಪ್ ಕೆ ಶಾಸ್ತ್ರಿ. ನಟ ಪ್ರಕಾಶ್ ಬೆಳವಾಡಿ, ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು.”ನಾನು ಕೂಡ ಮೇಡ್ ಇನ್ ಬೆಂಗಳೂರು. ಆಂಧ್ರದಲ್ಲಿ ನಾನು ಹುಟ್ಟಿದ್ದು, ಆದರೆ ಜೀವನ ನೀಡಿದ್ದು ಬೆಂಗಳೂರು’ ಎಂದ ನಟ ಸಾಯಿಕುಮಾರ್, ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ತಿಳಿಸಿದರು.
ಯುವ ಕಲಾವಿದರಾದ ಮಧುಸೂದನ್ ಗೋವಿಂದ್, ಪುನೀತ್ ಮಾಂಜಾ, ವಂಶೀಧರ್, ಹಿಮಾಂಶಿ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಹಾಡುಗಳ ಬಗ್ಗೆ ಅಶ್ವಿನ್ ಪಿ ಕುಮಾರ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![7-yellapura](https://www.udayavani.com/wp-content/uploads/2024/07/7-yellapura-150x90.jpg)
Yellapura: ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ; ತಪ್ಪಿದ ಅನಾಹುತ
![belagavi](https://www.udayavani.com/wp-content/uploads/2024/07/belagavi-150x90.jpg)
Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
![Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ](https://www.udayavani.com/wp-content/uploads/2024/07/sahitya-150x83.jpg)
Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ
![6-kalburgi](https://www.udayavani.com/wp-content/uploads/2024/07/6-kalburgi-150x90.jpg)
Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.