![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 26, 2023, 4:46 PM IST
ಕೆಂಡದ ಸೆರಗು ಎನ್ನುವ ಕುಸ್ತಿ ಆಧಾರಿತ ಕಾದಂಬರಿ ಸಿನಿಮಾದಲ್ಲಿ ಬಹುಮುಖ್ಯ ಪಾತ್ರದಲ್ಲಿ ನಟಿಸಿರುವ ಮಾಲಾಶ್ರೀ ಅವರು ಭಾನುವಾರ ತಾವೇ ಡಬ್ಬಿಂಗ್ ಮಾಡಿ ಮುಗಿಸಿದ್ದಾರೆ.
ಮಾಲಾಶ್ರೀ ಅವರು ನಟಿಸಿರುವ ಸಿನಿಮಾಗಳಲ್ಲಿ ಕೆಲವೇ ಕೆಲವು ಸಿನಿಮಾಗಳಿಗೆ ಮಾತ್ರ ತಮ್ಮ ಧ್ವನಿ ಕೊಡುತ್ತಾರೆ. ತುಂಬಾ ವರ್ಷಗಳ ನಂತರ ಕೆಂಡದ ಸೆರಗು ಸಿನಿಮಾಗೆ ಮಾಲಾಶ್ರೀ ಅವರು ಧ್ವನಿ ಕೊಟ್ಟಿದ್ದು ಚಿತ್ರತಂಡಕ್ಕೆ ಮತ್ತೂಂದು ಶಕ್ತಿ ಇದ್ದಂತೆ ಎಂದು ತಿಳಿಸಿದ್ದಾರೆ ನಿರ್ದೇಶಕ ರಾಕಿ ಸೋಮ್ಲಿ ಅವರು.
ಕೆಂಡದ ಸೆರಗು ದೇಸಿಕ ಕುಸ್ತಿ ಕಥೆಯ ಜೊತೆಗೆ ಹೃದಯ ನಾಟುವ ಭಾವನಾತ್ಮಕ ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡುವ ಸಿನಿಮಾ, ಒಂದೊಂದು ಪಾತ್ರವೂ ಸಹ ತುಂಬ ವಿಶೇಷವಾದ ಪಾತ್ರಗಳು. ತಂಡದ ಪ್ರತಿ ಒಬ್ಬರು ಸಹ ಸಿನಿಮಾವನ್ನು ಆರಾಧಿಸುವ ತಂತ್ರಜ್ಞರ ತಂಡ. ನಾನು ತುಂಬಾ ಖುಷಿಯಿಂದ ಸೆಟ್ ನಲ್ಲಿ ಪ್ರೀತಿಯಿಂದ ಕೆಲಸ ಮಾಡಿದ್ದೇನೆ. ತಂಡದ ಪ್ರತಿ ಒಬ್ಬರು ಸಹ ತುಂಬಾನೇ ಶ್ರಮವಹಿಸಿ ಈ ಸಿನಿಮಾದ ಕೆಲಸ ಮಾಡುತ್ತಿದ್ದಾರೆ. ಖಂಡಿತವಾಗಿ ಇದು ಗೆಲ್ಲುವ ಸಿನಿಮಾ, ಈ ವರ್ಷದ ಸಾಲಿನಲ್ಲಿ ನಿಲ್ಲುವ ಸಿನಿಮಾ, ಈ ತಂಡದ ಜೊತೆಗೆ ನಾ ಸದಾ ಇರುತ್ತೇನೆ ಎನ್ನುವುದು ಮಾಲಾಶ್ರೀ ಮಾತು.
ಚಿತ್ರಿಕರಣ ಮುಗಿಸಿ ಪೊಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕೆಂಡದ ಸೆರಗು ಇನ್ನೆರಡು ತಿಂಗಳಲ್ಲಿ ಬಿಡುಗಡೆಗೆ ನೀರಿಕ್ಷೆಯಲ್ಲಿದೆ. ಸಿನಿಮಾದಲ್ಲಿ ಒಟ್ಟು ನಾಲ್ಕು ಫೈಟ, ಆರು ಹಾಡುಗಳಲ್ಲಿದ್ದು ಈಗಾಗಲೇ ಒಂದು ಹಾಡು ಮತ್ತು ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಇನ್ನೂ ಉಳಿದ ತಾರಾಗಣದಲ್ಲಿ ಯಶ್ ಶೆಟ್ಟಿ, ವರ್ಧನ್, ಬಾಲುರಾಜ್ ವಾಡಿ, ಶೋಭಿತ, ಹರೀಶ್ ಅರಸು, ಪ್ರತಿಮಾ, ಮೋಹನ್, ಸಿಂಧನೂರು ಉಮೇಶ್, ಸಿಂಧುಲೋಕನಾಥ್ ಅಭಿನಯಿಸಿದ್ದಾರೆ.
ಈ ಚಿತ್ರಕ್ಕೆ ವಿಪಿನ್ ರಾಜ್ ಅವರ ಛಾಯಾಗ್ರಹಣ, ವೀರೇಶ್ ಕಬ್ಳಿ ಯವರ ಸಂಗೀತ, ಶ್ರೀಮುತ್ತು ಟಾಕೀಸ್ ಅಡಿಯಲ್ಲಿ , ಕೊಟ್ರೇಶ್ ಗೌಡ ಅವರು ಬಂಡವಾಳ ಹೂಡಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.