Kantara -1: ರಿಷಬ್ ಶೆಟ್ಟಿ ʼಕಾಂತಾರ-1ʼ ಗೆ ಖ್ಯಾತ ಮಾಲಿವುಡ್ ನಟ ಜಯರಾಂ ಎಂಟ್ರಿ?
Team Udayavani, May 30, 2024, 4:11 PM IST
ಬೆಂಗಳೂರು: ರಿಷಬ್ ಶೆಟ್ಟಿ ಅವರ ʼಕಾಂತಾರ ಪ್ರೀಕ್ವೆಲ್ʼ ಅಪ್ಡೇಟ್ ಗಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಪ್ಯಾನ್ ಇಂಡಿಯಾದಲ್ಲಿ ಮೋಡಿ ಮಾಡಿ, ಪರಭಾಷೆಗೆ ಡಬ್ ಆಗಿ ಬಾಕ್ಸ್ ಆಫೀಸ್ನಲ್ಲಿ ʼಕಾಂತಾರʼ ಮ್ಯಾಜಿಕ್ ಮಾಡಿತ್ತು.
20 ಕೋಟಿಯಲ್ಲಿ ನಿರ್ಮಾಣವಾಗಿದ್ದ ʼಕಾಂತಾರʼ 400 ಕೋಟಿ ಗಳಿಕೆ ಕಂಡಿತ್ತು. ಈ ಸಿನಿಮಾದ ಪ್ರೀಕ್ವೆಲ್ ಗೆ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತ್ತು. ಬಹಳ ದೊಡ್ಡಮಟ್ಟದಲ್ಲಿ ʼಕಾಂತಾರ -1ʼ ಮೂಡಿ ಬರಲಿದೆ ಎನ್ನುವ ಮಾತಿಗೆ ತಕ್ಕಂತೆ ಸಿನಿಮಾ ತಂಡ ಚಿತ್ರೀಕರಣಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿದೆ.
ಇದಕ್ಕಾಗಿ ರಿಷಬ್ ತಮ್ಮ ಹುಟ್ಟೂರಿನಲ್ಲೇ ದೊಡ್ಡಮಟ್ಟದ ಸೆಟ್ ಗಳನ್ನು ಹಾಕಿದ್ದಾರೆ ಎನ್ನಲಾಗಿದೆ. ಟೀಸರ್ ತುಣುಕಿನಿಂದ ಗಮನ ಸೆಳೆದಿರುವ ʼಕಾಂತಾರ-1ʼ ನಲ್ಲಿ ರಿಷಬ್ ಹೊರತು ಪಡಿಸಿ ಯಾರೆಲ್ಲ ನಟಿಸಲಿದ್ದಾರೆ ಎನ್ನುವ ಬಗ್ಗೆ ಇದುವರೆಗೆ ಚಿತ್ರತಂಡದಿಂದ ಯಾವ ಅಪ್ಡೇಟ್ ಕೂಡ ಸಿಕ್ಕಿಲ್ಲ.
ಇದನ್ನೂ ಓದಿ: ನಟ ʼಪ್ರಜ್ವಲ್ ದೇವರಾಜ್ ಇನ್ನಿಲ್ಲʼ ಎನ್ನುವ ಪೋಸ್ಟರ್ ವೈರಲ್: ನಿಜಕ್ಕೂ ಆಗಿದ್ದೇನು?
ಕರಾವಳಿ ಭಾಗದ ಕಲಾವಿದರೇ ಹೆಚ್ಚಾಗಿ ಸಿನಿಮಾದಲ್ಲಿರಲಿದ್ದಾರೆ ಎಂದು ರಿಷಬ್ ಈ ಹಿಂದೆ ಹೇಳಿದ್ದು ಬಿಟ್ಟರೆ ಯಾರೆಲ್ಲಾ ಎನ್ನುವುದನ್ನು ಮಾತ್ರ ಗೌಪ್ಯವಾಗಿ ಇಟ್ಟಿದ್ದಾರೆ.
ಇದೀಗ ಲೇಟೆಸ್ಟ್ ಅಪ್ಡೇಟ್ ವೊಂದು ಸ್ಯಾಂಡಲ್ ವುಡ್ ವಲಯದಲ್ಲಿ ಹರಿದಾಡಿದೆ. ʼಕಾಂತಾರ-1ʼ ಖ್ಯಾತ ಬಹುಭಾಷಾ ನಟ ಜಯರಾಂ ನಟಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ.
ಈಗಾಗಲೇ ಶಿವರಾಜ್ ಕುಮಾರ್ ಅವರ ʼಘೋಸ್ಟ್ʼ ಸಿನಿಮಾದಲ್ಲಿ ಖಡಕ್ ಪೊಲೀಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದ ಜಯರಾಂ ಈಗ ಕರಾವಳಿ ದೈವದ ಕಥೆವುಳ್ಳ ʼಕಾಂತಾರ-1ʼ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಆದರೆ ಇದುವರೆಗೆ ಈ ಬಗ್ಗೆ ರಿಷಬ್ ಆಗಲಿ ಅಥವಾ ನಿರ್ಮಾಣ ಸಂಸ್ಥೆ ಹೊಂಬಾಳೆ ಆಗಲಿ ಅಧಿಕೃತವಾಗಿ ಯಾವ ಮಾಹಿತಿಯನ್ನು ನೀಡಿಲ್ಲ.
ಈಗಾಗಲೇ ʼಕಾಂತಾರ-1ʼ ಸಿನಿಮಾದ ಓಟಿಟಿ ರೈಟ್ಸ್ ಅಮೇಜಾನ್ ಪ್ರೈಮ್ ಗೆ 120 ಕೋಟಿ ರೂ.ಗೆ ಸೇಲ್ ಆಗಿದೆ. ಮುಂದಿನ ವರ್ಷದ ಸಿನಿಮಾ ರಿಲೀಸ್ ಆಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ
D Gang, 6106….; ಮುಂದುವರಿದ ಟೈಟಲ್ ಕ್ರೇಜ್
Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್ ಬಿ ಶೆಟ್ಟಿ
ದರ್ಶನ್ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್ – ಸೋನಲ್ ಪ್ರೇಮ್ ಕಹಾನಿ?
ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್ ಸ್ಟಿಕ್ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್
MUST WATCH
ಹೊಸ ಸೇರ್ಪಡೆ
R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು
Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ
Kiran Pahal: ವನಿತೆಯರ 400 ಮೀ.; ಕಿರಣ್ ಪಹಲ್ ಒಲಿಂಪಿಕ್ಸ್ ಗೆ ಅರ್ಹತೆ
MLA Harish Gowda: ನನಗೆ ಯಾರೂ ಹನಿಟ್ರ್ಯಾಪ್ ಮಾಡಲು ಸಾಧ್ಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.