![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 4, 2023, 5:11 PM IST
ಮಾಸ್ಟರ್ ಆನಂದ್ ಅಭಿನಯದಲ್ಲಿ “ನಾ ಕೋಳಿಕ್ಕೆ ರಂಗ’ ಎಂಬ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಇನ್ನು ಈ ಸಿನಿಮಾದ ಟೈಟಲ್ಲೇ ಹೇಳುವಂತೆ, ಇದು ಕೋಳಿ ಹಾಗೂ ರಂಗನ ನಡುವಿನ ಕಥಾಹಂದರದ ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ. “ನಾ ಕೋಳಿಕ್ಕೆ ರಂಗ’ ಸಿನಿಮಾದಲ್ಲಿ ಮಾಸ್ಟರ್ ಆನಂದ್ ಅವರಿಗೆ ರಾಜೇಶ್ವರಿ ನಾಯಕಿಯಾಗಿ ಜೋಡಿಯಾಗಿದ್ದಾರೆ.
ಉಳಿದಂತೆ ಹಿರಿಯ ನಟಿ ಭವ್ಯಾ, ಶೋಭರಾಜ್, ಹೊನ್ನವಳ್ಳಿ ಕೃಷ್ಣ, ಪುಂಗ, ಶಕೀಲಾ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ನಾಯಕಿ ರಾಜೇಶ್ವರಿ ಅವರ ತಂದೆ ಚಿತ್ರದುರ್ಗ ಮೂಲದ ಎಸ್. ಟಿ. ಸೋಮಶೇಖರ್ ತಮ್ಮ ಪುತ್ರಿಯ ಸಿನಿಮಾ ಮೇಲಿನ ಆಸಕ್ತಿಯನ್ನು ಕಂಡು “ಶ್ರೀದುರ್ಗಾಂಜನೇಯ ಮೂವೀಸ್’ ಬ್ಯಾನರಿನಲ್ಲಿ “ನಾ ಕೋಳಿಕ್ಕೆ ರಂಗ’ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಗೊರವಾಲೆ ಮಹೇಶ್ ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಇದೊಂದು ರೀತಿ ಟ್ರಯಂಗಲ್ ಸ್ಟೋರಿ. ಹಾಗಂತ ಲವ್ ಸ್ಟೋರಿ ಅಲ್ಲ. ಕೋಳಿ, ರಂಗ ಮತ್ತು ಅಮ್ಮನ ವಾತ್ಸಲ್ಯದ ಕಥೆ ಈ ಸಿನಿಮಾದಲ್ಲಿದೆ. ಕೋಳಿ ಮತ್ತು ಅಮ್ಮನ ಮೇಲೆ ರಂಗನಿಗೆ ಇನ್ನಿಲ್ಲದ ಪ್ರೀತಿ. ಮುಂದೆ ಎದುರಾಗುವ ಘಟನೆ ಒಂದರಲ್ಲಿ ರಂಗನಿಗೆ ಈ ಎರಡರಲ್ಲಿ ಯಾವುದು ಮುಖ್ಯ ಆಗುತ್ತೆ ಎಂಬುದೇ ಸಿನಿಮಾದ ಕಥೆಯ ಒಂದು ಎಳೆ. ಮಂಡ್ಯ ಭಾಗದಲ್ಲೇ ಶೇ. 90 ರಷ್ಟು ಚಿತ್ರೀಕರಣ ಮಾಡಲಾಗಿದೆ. ಹಳೇ ಮೈಸೂರು ಸೊಗಡಿನ ಭಾಷೆ ಸಿನಿಮಾದಲ್ಲಿದೆ ಎನ್ನುತ್ತದೆ ಚಿತ್ರತಂಡ.
“ನಾ ಕೋಳಿಕ್ಕೆ ರಂಗ’ ಚಿತ್ರಕ್ಕೆ ಧನಪಾಲ್, ಬೆಟ್ಟೇಗೌಡ ಛಾಯಾಗ್ರಹಣ, ವಿಶ್ವ ಸಂಕಲನವಿದೆ. ರಾಜು ಎಮ್ಮಿಗನೂರು ಸಿನಿಮಾದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಸದ್ಯ ತನ್ನ ಟೈಟಲ್ ಪೋಸ್ಟರ್, ಟ್ರೇಲರ್ ಮತ್ತು ಹಾಡುಗಳ ಮೂಲಕ ಪ್ರಚಾರ ಕಾರ್ಯದಲ್ಲಿ ನಿರತವಾಗಿರುವ “ನಾ ಕೋಳಿಕ್ಕೆ ರಂಗ’ ಸಿನಿಮಾವನ್ನು ಇದೇ ನ. 10 ರಂದು ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ ಚಿತ್ರತಂಡ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.