ಶಿವಾಜಿ ಸುರತ್ಕಲ್‌-2: ಮೇಘನಾ ಗಾಂವ್ಕರ್‌ ಎಂಟ್ರಿ


Team Udayavani, Oct 25, 2021, 11:55 AM IST

meghana gaonkar

ಕಳೆದ ವರ್ಷ ಬಿಡುಗಡೆಯಾಗಿ ಸಿನಿಮಂದಿಯ ಗಮನ ಸೆಳೆದಿದ್ದ “ಶಿವಾಜಿ ಸುರತ್ಕಲ್’ ಚಿತ್ರದ ಮುಂದುವರಿದ ಭಾಗ “ಶಿವಾಜಿ ಸುರತ್ಕಲ್-2′ ಹೆಸರಿನಲ್ಲಿ ತೆರೆಗೆ ಬರುತ್ತಿರುವ ವಿಷಯ ನಿಮಗೆ ಗೊತ್ತಿರಬಹುದು.

“ಶಿವಾಜಿ ಸುರತ್ಕಲ್‌’ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ರಮೇಶ್‌ ಅರವಿಂದ್‌ “ಶಿವಾಜಿ ಸುರತ್ಕಲ್‌-2′ ಚಿತ್ರದಲ್ಲೂ ನಾಯಕನಾಗಿ ಕಾಣಿಸಿ ಕೊಳ್ಳುತ್ತಿದ್ದು, ರಮೇಶ್‌ ಅರವಿಂದ್‌ ಅವರೊಂದಿಗೆ ರಾಧಿಕಾ ನಾರಾಯಣ್‌, ರಾಘು ರಾಮನಕೊಪ್ಪ, ವಿದ್ಯಾಮೂರ್ತಿ ಮೊದಲಾದ ಕಲಾವಿದರು ಅವರವರ ಪಾತ್ರಗಳಲ್ಲೇ ಮುಂದುವರೆಯಲಿದ್ದಾರೆ.

ಇನ್ನು “ಶಿವಾಜಿ ಸುರತ್ಕಲ್‌-2′ ಚಿತ್ರದಲ್ಲಿ ಇನ್ನಷ್ಟು ಹೊಸ ಪಾತ್ರಗಳು ಸೇರ್ಪಡೆಯಾಗಿದ್ದು, ಅದರಲ್ಲಿ ನಟಿ ಮೇಘನಾ ಗಾಂವ್ಕರ್‌ ಪಾತ್ರ ಕೂಡ ಒಂದು. ಹೌದು, “ಶಿವಾಜಿ ಸುರತ್ಕಲ್‌-2′ ಚಿತ್ರದಲ್ಲಿ ನಟಿ ಮೇಘನಾ ಗಾಂವ್ಕರ್‌ ಡಿಸಿಪಿ ದೀಪಾ ಕಾಮತ್‌ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ದಾದಾ ಸಾಹೇಬ್‌ ಫಾಲ್ಕೆ ಜೊತೆ ಸೂಪರ್‌ ಸ್ಟಾರ್‌ ರಜನಿಕಾಂತ್‌ಗೆ ಡಬಲ್ ಸಂಭ್ರಮ

ಇಲ್ಲಿಯವರೆಗೆ ಬಹುತೇಕ ಗ್ಲಾಮರಸ್‌ ಪಾತ್ರಗಳಲ್ಲಿ ಕಾಣಿಸಿಕೊಂಡು ಸಿನಿಪ್ರಿಯರ ಗಮನ ಸೆಳೆದಿದ್ದ ಮೇಘನಾ ಗಾಂವ್ಕರ್‌, ಚಿತ್ರದಲ್ಲಿ ಮೊದಲ ಬಾರಿಗೆ ಟಫ್ ಕಾಪ್‌ ಆಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ. ಬೆಂಗಳೂರು ಸೆಂಟ್ರಲ್‌ ಕ್ರೈಂ ಬ್ರಾಂಚ್‌ (ಸಿಸಿಬಿ)ಯ ಡಿಸಿಪಿ ಪಾತ್ರಧಾರಿಯಾಗಿ ಚಿತ್ರದಲ್ಲಿ ಮೇಘನಾ ಗಾಂವ್ಕರ್‌ ಖಡಕ್‌ ಖಾಕಿ ತೊಡುತ್ತಿದ್ದಾರೆ.

“ಶಿವಾಜಿ ಸುರತ್ಕಲ್‌-2′ ಚಿತ್ರದಲ್ಲಿ ಮೇಘನಾ ಗಾಂವ್ಕರ್‌ ಪಾತ್ರದ ಬಗ್ಗೆ ಮಾಹಿತಿ ನೀಡಿರುವ ನಿರ್ದೇಶಕ ಆಕಾಶ್‌ ಶ್ರೀವತ್ಸ, “ಸಿನಿಮಾದಲ್ಲಿ ಮೇಘನಾ ಗಾಂವ್ಕರ್‌ ಡಿಸಿಪಿ ದೀಪಾ ಕಾಮತ್‌ ಎನ್ನುವ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದು ಶಿವಾಜಿ ಸುರತ್ಕಲ್‌ ಅವರಿಗೆ ಬೆನ್ನೆಲುಬಾಗಿ ನಿಲ್ಲುವ ಮೇಲಧಿಕಾರಿಯ ಪಾತ್ರವಾಗಿರುತ್ತದೆ. ಈಗಾಗಲೇ ಸಿನಿಮಾದ ಕಥೆ ಮತ್ತು ಕ್ಯಾರೆಕ್ಟರ್‌ ಕೇಳಿರುವ ಮೇಘನಾ ತುಂಬ ಇಷ್ಟಪಟ್ಟಿದ್ದು, ಆದಷ್ಟು ಬೇಗ ತಂಡ ಸೇರಿಕೊಳ್ಳಲಿದ್ದಾರೆ. ಇವರೊಂದಿಗೆ ಇನ್ನಷ್ಟು ಹೊಸ ತಾರಾಗಣ ಚಿತ್ರತಂಡ ಸೇರಿಕೊಳ್ಳಲಿದೆ.

ಈಗಾಗಲೇ ಸಿನಿಮಾದ ಪ್ರೀ-ಪ್ರೊಡಕ್ಷನ್ಸ್‌ ಕೆಲಸ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಮುಹೂರ್ತ ನೆರವೇರಿಸಿ ಚಿತ್ರೀಕರಣಕ್ಕೆ ಹೊರಡಲಿದ್ದೇವೆ’ ಎನ್ನುತ್ತಾರೆ.

“ಶಿವಾಜಿ ಸುರತ್ಕಲ್‌-2′ ರಮೇಶ್‌ ಅರವಿಂದ್‌ ಅಭಿನಯದ 103ನೇ ಚಿತ್ರವಾಗಲಿದ್ದು, ಚಿತ್ರಕ್ಕೆ ಆಕಾಶ್‌ ಶ್ರೀವತ್ಸ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ರೇಖಾ ಕೆ.ಎನ್‌ ಮತ್ತು ಅನುಪ್‌ ಗೌಡ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.