![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 19, 2023, 4:25 PM IST
ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ಮೆಲೋಡಿ ಡ್ರಾಮ’ ಸಿನಿಮಾದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿದೆ.
ಕಿರಣ್ ರವೀಂದ್ರನಾಥ್ ಸಂಗೀತ ಸಂಯೋಜನೆಯ “ಮೆಲೋಡಿ ಡ್ರಾಮ’ ಸಿನಿಮಾದಲ್ಲಿ ಎಂಟು ಹಾಡುಗಳಿದ್ದು, ಸೋನು ನಿಗಮ್, ಕೈಲಾಶ್ ಖೇರ್, ಪಲಾಕ್ ಮುಚ್ಚಲ್ ಮೊದಲಾದವರು ಗೀತೆಗಳಿಗೆ ಧ್ವನಿಯಾಗಿದ್ದಾರೆ. ಜಯಂತ್ ಕಾಯ್ಕಿಣಿ, ಡಾ. ವಿ. ನಾಗೇಂದ್ರ ಪ್ರಸಾದ್, ಹೃದಯ ಶಿವ, ಧನಂಜಯ್ ರಂಜನ್ ಗೀತಗಳಿಗೆ ಸಾಹಿತ್ಯ ರಚಿಸಿದ್ದಾರೆ.
ಸತ್ಯ, ಸುಪ್ರಿತಾ ಸತ್ಯನಾರಾಯಣ್ ಜೋಡಿಯಾಗಿ ಅಭಿನಯಿಸಿರುವ “ಮೆಲೋಡಿ ಡ್ರಾಮಾ’ ಸಿನಿಮಾದಲ್ಲಿ ರಂಗಾಯಣ ರಘು, ಅನು ಪ್ರಭಾಕರ್, ರಾಜೇಶ್ ನಂಟರಂಗ, ಬಲರಾಜವಾಡಿ, ಲಕ್ಷ್ಮೀ ಸಿದ್ದಯ್ಯ, ಅಶ್ವಿನ್ ರಾವ್ ಪಲ್ಲಕ್ಕಿ, ಅಶ್ವಿನ್ ಹಾಸನ್, ರಂಜನ್ ಸನತ್, ವಿನೋದ್ ಗೊಬ್ಬರ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಸಿನಿಮಾದಲ್ಲಿ ನಟ ಚೇತನ್ ಚಂದ್ರ ಕೂಡ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಹೆಸರೇ ಹೇಳುವಂತೆ, “ಮೆಲೋಡಿ ಡ್ರಾಮಾ’ ಪ್ರೀತಿ ಒಂದು ಸುಂದರ ಅನುಭವ. ನಂಬಿಕೆ ಅದರ ಆಧಾರ. ಇವೆರಡರ ನಡುವಿನ ಪಯಣದಲ್ಲಿ ಭಾವ-ಭಾವನೆಗಳ ತೊಡಲಾಟವನ್ನು ವ್ಯಕ್ತಪಡಿಸುವ ಕಥಾಹಂದರ ಸಿನಿಮಾದಲ್ಲಿದೆ ಎಂಬುದು ಚಿತ್ರದ ಬಗ್ಗೆ ಚಿತ್ರತಂಡದ ಮಾತು.
“ಪ್ರೈಮ್ ಸ್ಟಾರ್ ಸ್ಟುಡಿಯೊ’ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ “ಮೆಲೋಡಿ ಡ್ರಾಮಾ’ ಚಿತ್ರಕ್ಕೆ ಮಂಜು ಕಾರ್ತಿಕ್ ನಿರ್ದೇಶನವಿದೆ. ಬೆಂಗಳೂರು, ಮಂಡ್ಯ, ಮೈಸೂರು, ಕುಶಾಲನಗರ, ಮಡಿಕೇರಿ, ಶಿವಮೊಗ್ಗ, ಮಂಗಳೂರು, ಕುಂದಾಪುರ, ವಿಜಯಪುರ ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ಮನು ಡಿ. ಬಿ ಹಳ್ಳಿ ಛಾಯಾಗ್ರಹಣ, ಮುನಿರಾಜ್ ಸಂಕಲನವಿದೆ.
ಸದ್ಯ ಸೆನ್ಸಾರ್ ಮುಂದಿರುವ “ಮೆಲೋಡಿ ಡ್ರಾಮ’ ಸಿನಿಮಾವನ್ನು ಏಪ್ರಿಲ್ ತಿಂಗಳಿನಲ್ಲಿ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.