ವಿಂಟೇಜ್ ನಲ್ಲಿ ಹೊಸಬರ ಕನಸು; ತೆರೆಯತ್ತ ‘ಮಾಂಕ್ ದಿ ಯಂಗ್’
Team Udayavani, Jun 30, 2023, 11:44 AM IST
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಮಾಂಕ್ ದಿ ಯಂಗ್’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿಸಿ, ಸದ್ಯ ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿರುವ “ಮಾಂಕ್ ದಿ ಯಂಗ್’ ಸಿನಿಮಾದ ಮೊದಲ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್, ನಟ ಪ್ರಥಮ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಸಮಾರಂಭದಲ್ಲಿ ಹಾಜರಿದ್ದು “ಮಾಂಕ್ ದಿ ಯಂಗ್’ ಚಿತ್ರತಂಡಕ್ಕೆ ಶುಭ ಹಾರೈಸಿದರು.
“ವಾಲ್ಕಾನೋ ಪಿಕ್ಚರ್’ ಬ್ಯಾನರಿನಲ್ಲಿ ನಿರ್ಮಾಣವಾಗಿರುವ “ಮಾಂಕ್ ದಿ ಯಂಗ್’ ಸಿನಿಮಾಕ್ಕೆ ಮಾಶ್ಚಿತ್ ಸೂರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ವಿಂಟೇಜ್ ಫ್ಯಾಂಟಸಿ ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬಂದಿರುವ “ಮಾಂಕ್ ದಿ ಯಂಗ್’ ಸಿನಿಮಾದಲ್ಲಿ ನಾಯಕನಾಗಿ ಸರೋವರ್, ನಾಯಕಿಯಾಗಿ ಸೌಂದರ್ಯಾ ಗೌಡ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಉಷಾ ಭಂಡಾರಿ, ರವಿಶಂಕರ್, ಪ್ರಣಯಮೂರ್ತಿ, ಶಿವಪ್ಪ, ಗೋಪಿಚಂದ್ ಮೊದಲಾದವರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಇದೇ ವೇಳೆ ಮಾತನಾಡಿದ ನಿರ್ದೇಶಕ ಮಾಶ್ಚಿತ್ ಸೂರ್ಯ, “ಇದೊಂದು ವಿಂಟೇಜ್ ಫ್ಯಾಂಟಸಿ ಥ್ರಿಲ್ಲರ್ ಶೈಲಿಯ ಸಿನಿಮಾ. ಕನ್ನಡದಲ್ಲಿ ಈ ಶೈಲಿಯ ಸಿನಿಮಾಗಳು ಬಂದಿದ್ದು ತುಂಬ ಕಡಿಮೆ. ಒಂದಷ್ಟು ಕಾಲ್ಪನಿಕ ವಿಷಯಗಳನ್ನು ಇಟ್ಟುಕೊಂಡು ಅದನ್ನು ಥ್ರಿಲ್ಲಿಂಗ್ ಆಗಿ ಹೇಳಿದ್ದೇವೆ. ಎಲ್ಲ ಥರದ ಎಂಟರ್ಟೈನ್ಮೆಂಟ್ ಎಲಿಮೆಂಟ್ಸ್ ಸಿನಿಮಾದಲ್ಲಿದ್ದು, ಎಲ್ಲ ವರ್ಗದ ಆಡಿಯನ್ಸ್ಗೂ ಸಿನಿಮಾ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಿನಿಮಾದ ಬಗ್ಗೆ ಮಾತನಾಡಿದ ನಾಯಕ ನಟ ಸರೋವರ್, “ಔಟ್ ಆಫ್ ದಿ ಬಾಕ್ಸ್ ಕಲ್ಪನೆಯಲ್ಲಿ ಮೂಡಿಬಂದಿರುವ ಸಿನಿಮಾ. ಕಟ್ಟುಪಾಡುಗಳನ್ನು ಮೀರಿ ಕಟ್ಟಿಕೊಟ್ಟಿರುವ ಸಿನಿಮಾ ಇದಾಗಿದೆ. ಎಲ್ಲ ಯೋಚನೆಗಳು ಹೊಸದಾಗಿದೆ. ಸಿನಿಮಾದ ಮುಂದಿನ ದೃಶ್ಯಗಳನ್ನು ಯಾರೂ ಕೂಡ ಕಲ್ಪಿಸಿಕೊಳ್ಳಲಾಗದು. ಎರಡು ಮೂರು ಕಾಲಘಟ್ಟದಲ್ಲಿ ಸಿನಿಮಾ ಸಾಗುತ್ತದೆ. ಟೈಮ್ ಟ್ರಾವೆಲ್ ವಿಷಯ ಸಿನಿಮಾದಲ್ಲಿದೆ. ಸಿನಿಮಾದಲ್ಲಿ ಕಾಲ್ಪನಿಕ ಜಗತ್ತಿನಲ್ಲಿ ಬದುಕುವ ವ್ಯಕ್ತಿಯ ಪಾತ್ರದಲ್ಲಿ ಅಭಿನಯಿಸಿದ್ದೇನೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು. ಕಾರ್ಯಕ್ರಮದಲ್ಲಿ ಕಲಾವಿದರು, ತಂತ್ರಜ್ಞರು ಹಾಜರಿದ್ದರು.
ಜಿ.ಎಸ್.ಕಾರ್ತಿಕ ಸುಧನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.