ವೀಕೆಂಡ್‌ನ‌ಲ್ಲಿ ಸಿನಿಮೋತ್ಸವಕ್ಕೆ ನುಗ್ಗಿ ಬಂದ ಸಿನಿಪ್ರೇಮಿಗಳು


Team Udayavani, Feb 25, 2018, 10:41 AM IST

film-fest.jpg

ಸಾಮಾನ್ಯವಾಗಿ ಒರಾಯನ್‌ ಮಾಲ್‌ ಎಂದರೆ ಶಾಪಿಂಗ್‌ ಎಂದರ್ಥ. ಅದರಲ್ಲೂ ವೀಕೆಂಡ್‌ ಎಂದರೆ ಒರಾಯನ್‌ ಮಾಲ್‌ನಲ್ಲಿ ಶಾಪಿಂಗ್‌ ಬ್ಯಾಗ್‌ನೊಂದಿಗೆ ಓಡಾಡುವವರೇ ಕಾಣಸಿಗುತ್ತಾರೆ. ಆದರೆ, ಈ ವೀಕೆಂಡ್‌ನ‌ಲ್ಲಿ ಒರಾಯನ್‌ ಮಾಲ್‌ನ ದೃಶ್ಯ ಬದಲಾಗಿತ್ತು. ಶಾಪಿಂಗ್‌ ಬ್ಯಾಗ್‌ಗಿಂತ ಸಿನಿಮಾ ಬ್ರೌಶರ್‌ ಕೈಯಲ್ಲಿ ಹಿಡಿದು, ಕುತೂಹಲದಿಂದ ಸಿನಿಮಾ ಪಟ್ಟಿ ವೀಕ್ಷಿಸುತ್ತಾ, ಸಮಯ ನೋಡುತ್ತಾ ಒರಾಯನ್‌ ಮಾಲ್‌ನ ಟಾಪ್‌ ಫ್ಲೋರ್‌ನತ್ತ ಹೆಜ್ಜೆ ಹಾಕುತ್ತಿದ್ದವರೇ ಜಾಸ್ತಿ. ಅದಕ್ಕೆ ಕಾರಣ ಚಿತ್ರೋತ್ಸವ. 10ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ.

 ಹೌದು, ನಿಮಗೆ ಗೊತ್ತಿರುವಂತೆ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ನಗರದ ಒರಾಯನ್‌ ಮಾಲ್‌ನ 11 ಪರದೆಗಳಲ್ಲಿ ಪ್ರದರ್ಶನವಾಗುತ್ತಿದೆ. ದಿನವೊಂದಕ್ಕೆ 45ಕ್ಕೂ ಹೆಚ್ಚು ಚಿತ್ರಗಳ ಪ್ರದರ್ಶನ ನಡೆಯುತ್ತಿದೆ. ವಿವಿಧ ದೇಶಗಳ ಅಪರೂಪದ ಚಿತ್ರಗಳು ಈ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿರುವುದು ಸಿನಿಮಾಸಕ್ತರ ಖುಷಿಗೆ ಕಾರಣವಾಗಿದೆ. ಆ ಖುಷಿ ಶನಿವಾರ ಒರಾಯನ್‌ ಮಾಲ್‌ನಲ್ಲಿ ಕಾಣುತ್ತಿತ್ತು. ಚಿತ್ರೋತ್ಸವ ಆರಂಭದ ಎರಡು ದಿನಗಳಿಗೆ ಹೋಲಿಸಿದರೆ ಶನಿವಾರ ಚಿತ್ರೋತ್ಸವಕ್ಕೆ ಜನ ನುಗ್ಗಿ ಬಂದಿದ್ದರು. 

ವೀಕೆಂಡ್‌ ಅನ್ನು ಸಿನಿಮಾದಲ್ಲಿ ಕಳೆಯಲು ನಿರ್ಧರಿಸಿದ ಪರಿಣಾಮ ಬೇರೆ ಬೇರೆ ಕ್ಷೇತ್ರದ ಮಂದಿ ಸಿನಿಮೋತ್ಸಕ್ಕೆ ಬಂದಿದ್ದರು. ಹಾಗಾಗಿಯೇ ಸಿನಿಮಾ ಹಾಲ್‌ಗ‌ಳು ತುಂಬಿ ತುಳುಕುತ್ತಿದ್ದವು. ಸರತಿ ಸಾಲಿನಲ್ಲಿ ನಿಂತು ತಮ್ಮ ನೆಚ್ಚಿನ ಚಿತ್ರಗಳನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ದೃಶ್ಯ ಶನಿವಾರ ಕಂಡು ಬಂತು. ಕೆಲವರಂತೂ ಸತತವಾಗಿ ಐದು ಸಿನಿಮಾಗಳನ್ನು ನೋಡಲು ಸಿದ್ಧರಾಗಿಯೇ ಬಂದಿದ್ದರು.

ಶನಿವಾರದ ಬೆಳಗ್ಗಿನ ಪ್ರದರ್ಶಗಳಲ್ಲಿ ಮುಖ್ಯವಾಗಿ ಇರಾನಿ ಚಿತ್ರ “ಲೀಫ್ ಆಫ್ ಲೈಫ್’, ಜರ್ಮನ್‌ ಚಿತ್ರಗಳಾದ “ದಿ ಫೈನಲ್‌ ಜರ್ನಿ’, ವೆಸ್ಟರ್ನ್’, ಇಸ್ರೇಲ್‌ ಚಿತ್ರ “ದಿ ಕೇಕ್‌ ಮೇಕರ್‌’,  ಟರ್ಕಿ ಚಿತ್ರ “ಯಲ್ಲೋ ಹೀಟ್‌’ಗಳನ್ನು ಕಣ್ತುಂಬಿಕೊಳ್ಳಲು ಸಿನಿಮಾಸಕ್ತರ ಕಾತುರ ಎದ್ದು ಕಾಣುತ್ತಿತ್ತು. “ಜಗತ್ತಿನ ಎಲ್ಲಾ ಭಾಷೆಯ ಚಿತ್ರಗಳನ್ನು ಒಂದೇ ಕಡೆ ಕಣ್ತುಂಬಿಕೊಳ್ಳುವ ಅವಕಾಶ ವರ್ಷಕ್ಕೊಮ್ಮೆ ಬೆಂಗಳೂರು ಚಿತ್ರೋತ್ಸವದ ಮೂಲಕ ಸಿಗುತ್ತಿದೆ.

ಇವತ್ತು ವೀಕೆಂಡ್‌. ವಾರವಿಡೀ ದುಡಿದ ಆಯಾಸವನ್ನು ಒಂದಷ್ಟು ಸಿನಿಮಾಗಳನ್ನು ನೋಡಿ ಕಳೆಯಬೇಕೆಂಬ ಆಸೆಯಿಂದ ಬಂದಿದ್ದೇನೆ’ ಎಂಬುದು ಚಿತ್ರೋತ್ಸವಕ್ಕೆ ಬಂದ ಸಿನಿಮಾ ಪ್ರೇಮಿಯೊಬ್ಬರ ಮಾತು. ಚಿತ್ರೋತ್ಸವದ ಬಗ್ಗೆ ಮಾತನಾಡುವ ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ, “ತುಂಬಾ ವರ್ಷಗಳಿಂದ ಬೇರೆ ಬೇರೆ ಚಿತ್ರೋತ್ಸವಗಳನ್ನು ನೋಡುತ್ತಾ ಬಂದಿದ್ದೇನೆ.

ಕಳೆದ 10 ವರ್ಷಗಳಿಂದ ಬೆಂಗಳೂರು ಚಿತ್ರೋತ್ಸವವನ್ನು ನೋಡುತ್ತಿದ್ದೇನೆ. ತುಂಬಾ ಅಚ್ಚುಕಟ್ಟಾಗಿ ನಡೆಸುತ್ತಾ ಬರುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಚಿತ್ರೋತ್ಸವ ತುಂಬಾ ಚೆನ್ನಾಗಿ ನಡೆಯುತ್ತಿದೆ. ಒಳ್ಳೆಯ ಸಿನಿಮಾಗಳನ್ನು ಆಯ್ಕೆ ಮಾಡಿ ತರುತ್ತಿದ್ದಾರೆ. ನನ್ನ ನಿರ್ದೇಶನದ “ಮಾರ್ಚ್‌ 22′ ಚಿತ್ರದ ಪ್ರದರ್ಶನ ಕೂಡಾ ಚಿತ್ರೋತ್ಸವದಲ್ಲಿ ಆಗಲಿದೆ’ ಎನ್ನುತ್ತಾರೆ. ಇಂದು ಕೂಡಾ ಚಿತ್ರೋತ್ಸವ ಸಿನಿ ಪ್ರೇಮಿಗಳಿಂದ ಗಿಜಿಗುಡುವ ನಿರೀಕ್ಷೆ ಇದೆ. 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.