ಮುರುಗನ ಜೊತೆ ಕಿರಣ್ ಹಾಟ್ ಸ್ಟೆಪ್
Team Udayavani, Nov 6, 2022, 5:28 PM IST
ನಟಿ ಕಿರಣ್ ಯೋಗೀಶ್ವರ್ ಈಗ ಐಟಂ ಹಾಡೊಂದರಲ್ಲಿ ಸಖತ್ ಕಲರ್ಫುಲ್ ಆಗಿ ಸ್ಟೆಪ್ ಹಾಕಿದ್ದಾರೆ. ಅದು ಮುರುಗನ ಜೊತೆ.. ಹೌದು, “ಕೊಡೆಮುರುಗ’ ಎಂಬ ಹಾಸ್ಯ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ ನಟ ಮುನಿಕೃಷ್ಣ ಈಗ ಸದ್ದಿಲ್ಲದೇ ಹೊಸ ಸಿನಿಮಾವೊಂದರಲ್ಲಿ ನಟಿಸಿದ್ದಾರೆ.
ವಿಜಯ ಪ್ರವೀಣ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಆ ಚಿತ್ರದ ಹೆಸರು “ಮುರುಗ ಸನ್ ಆಫ್ ಕಾನೂನು’. ಇತ್ತೀಚೆಗೆ ಈ ಚಿತ್ರದ ಐಟಂ ಹಾಡೊಂದನ್ನು ಆನೇಕಲ್ ಬಳಿ ಸೆಟ್ ಹಾಕಿ ಚಿತ್ರೀಕರಿಸಲಾ ಯಿತು. ಈ ಹಾಡಲ್ಲಿ ಬಿಗ್ಬಾಸ್ ಸ್ಪರ್ಧಿ ಕಿರಣ್ ಯೋಗೀಶ್ವರ್ ನೃತ್ಯ ಮಾಡಿದ್ದಾರೆ.
ಇದೊಂದು ಪಕ್ಕಾ ಗ್ರಾಮೀಣ ಸೊಗಡಿನ ಚಿತ್ರವಾಗಿದು ಮಂಗಳೂರು, ಮಲ್ಪೆ, ಕಾಪು ಬೀಚ್, ಸಕಲೇಶಪುರ, ಆನೇಕಲ್ ಮತ್ತು ಬೆಂಗಳೂರು ಸುತ್ತಮುತ್ತ ಚಿತ್ರಕ್ಕೆ 35 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಇಡೀ ಸಿನಿಮಾ ಹಳ್ಳಿ ಹಿನ್ನೆಲೆಯಲ್ಲಿ ಸಾಗಲಿದ್ದು, ಜನರ ಪರ ಹೋರಾಡುವ ಪಾತ್ರದಲ್ಲಿ ಮುರುಗ ಕಾಣಿಸಿ ಕೊಂಡಿದ್ದಾರಂತೆ.
ಈ ಚಿತ್ರದಲ್ಲಿ ನಾಯಕಿಯಾಗಿ ಚಿರಶ್ರೀ ಹಾಗೂ ಮಮತಾ ರಾಹುತ್ ಬಣ್ಣ ಹಚ್ಚಿದ್ದಾರೆ. ನಾಯಕಿಯ ತಂದೆಯಾಗಿ ರಮೇಶ್ ಭಟ್ ಅಲ್ಲದೆ ನಾಯಕನ ತಾಯಿಯ ಪಾತ್ರದಲ್ಲಿ ಹಿರಿಯ ನಟಿ ವಿನಯಾಪ್ರಸಾದ್ ಅವರು ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅಂಬುಜಾ, ಪ್ರಭು, ಕಾರ್ತಿಕ್, ಶಿವು, ಡಿಂಗ್ರಿ ನಾಗರಾಜ್, ಉಮೇಶ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಎಎಸ್ಎ ಪ್ರೊಡಕ್ಷನ್ ಮೂಲಕ ಮುನಿಕೃಷ್ಣ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಚಿತ್ರದ ಹಾಡುಗಳಿಗೆ ದ್ವೈಪಾಯನ ಸಿಂಗ್ ಅವರ ಸಂಗೀತ ಸಂಯೋಜನೆಯಿದ್ದು, ರವಿಚಂದ್ರನ್ ಅವರ ಸಂಕಲನ, ಶಂಕರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.