![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 28, 2024, 5:58 PM IST
“ನಮೋ ಭಾರತ್’ ಸಿನಿಮಾದ ಟೀಸರ್ ಹಾಗೂ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿವೆ. ರಮೇಶ್ ಎಸ್. ಪರವಿನಾಯ್ಕರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿ, ನಿರ್ಮಿಸಿ, ನಾಯಕನಾಗಿಯೂ ನಟಿಸಿದ್ದಾರೆ.
ನಿರ್ದೇಶಕ ರಮೇಶ್ ಎಸ್. ಪರವಿನಾಯ್ಕರ್ ಮಾತನಾಡಿ, “ನಾನು ಕೆಳದಿ ಚೆನ್ನಮ್ಮನ ವಂಶಸ್ಥ. 2015ರಲ್ಲಿ “ಗಾಂಧಿ ಕನಸು’ ಎಂಬ ಚಿತ್ರ ಮಾಡಿದ್ದೆ. ಬಡ ರೈತನೊಬ್ಬನ ಮಗ ಸೈನ್ಯಕ್ಕೆ ಸೇರಿಕೊಂಡಾಗ ದೇಶದ ಗಡಿ ಭಾಗದಲ್ಲಿ ಆತ ಅನುಭವಿಸುವ ಒಂದಷ್ಟು ಸಮಸ್ಯೆಗಳು, ಅಲ್ಲಿ ನಡೆದ ಕಾಶ್ಮೀರಿ ಪಂಡಿತರ ಮಾರಣಹೋಮ, ಆತನಿಗಾದ ಭಯೋತ್ಪಾದನೆಯ ಅನುಭವಗಳನ್ನು ಚಿತ್ರದಲ್ಲಿ ಹೇಳಲಾಗಿದೆ. ಈ ಮಧ್ಯೆ, ಆ ಸೈನಿಕನಿಗೆ ಕಾಡುವ ತನ್ನ ತಂದೆ-ತಾಯಿಯ ನೆನಪುಗಳು, ಜೊತೆಗೆ ಊರಲ್ಲಿ ತಾನು ಪ್ರೀತಿಸಿದ ಹುಡುಗಿಯ ನೆನಪು ಇವೆಲ್ಲವೂ ಈ ಚಿತ್ರದಲ್ಲಿದೆ’ ಎಂದರು.
ಕಾಶ್ಮೀರದಲ್ಲಿ ಚಿತ್ರೀಕರಣ ಮಾಡಿದ ಅನುಭವ ಹಂಚಿಕೊಂಡ ಅವರು, “ಅಲ್ಲಿ 48 ದಿನ ಚಿತ್ರೀಕರಣ ನಡೆಸಿದ್ದೇವೆ. ಕೊರೆವ ಚಳಿಯ ನಡುವೆ ಶೂಟಿಂಗ್ ನಿಜಕ್ಕೂ ಕಷ್ಟವಾಗಿತ್ತು. ಅಲ್ಲದೆ ಕೊಪ್ಪಳ, ಅಂಜನಾದ್ರಿ ಬೆಟ್ಟದಲ್ಲೂ ಚಿತ್ರೀಕರಣ ಮಾಡಿದ್ದೇವೆ, ಮಾರ್ಚ್ 1ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ’ ಎಂದರು.
ಇಬ್ಬರು ನಾಯಕಿಯರೊಬ್ಬರಾದ ಸುಷ್ಮಾರಾಜ್ ಮಾತನಾಡಿ, ಹಳ್ಳಿಯಲ್ಲಿ ನಾಯಕನನ್ನು ಪ್ರೀತಿಸುವ ಹುಡುಗಿಯ ಪಾತ್ರ ನನ್ನದು ಎಂದರು.
ಹಿರಿಯ ನಟಿ ಭವ್ಯ ಕೂಡಾ ಚಿತ್ರದಲ್ಲಿ ನಟಿಸಿದ್ದಾರೆ. ಮಗನಲ್ಲಿ ಚಿಕ್ಕಂದಿನಿಂದಲೇ ದೇಶ ಪ್ರೇಮವನ್ನು ಬೆಳೆಸುವ ತಾಯಿಯಾಗಿ ಕಾಣಿಸಿಕೊಂಡಿದ್ದಾರೆ. ಶಂಕರ್ ಪಾಗೋಜಿ, ಸಹ ನಿರ್ದೇಶಕ ರಾಜರತ್ನ, ಛಾಯಾಗ್ರಾಹಕ ಎಸ್ ಟಿವಿ ವೀರೇಶ್, ವಿತರಕ ವೆಂಕಟ್ ಗೌಡ ಮತ್ತಿತರು ಚಿತ್ರದ ಕುರಿತು ಮಾಹಿತಿ ಹಂಚಿಕೊಂಡರು.
“ನಮೋ ಭಾರತ್’ ಚಿತ್ರಕ್ಕೆ ಎ.ಟಿ. ರವೀಶ್ ಸಂಗೀತ, ಡಾ. ದೊಡ್ಡರಂಗೇಗೌಡ, ಡಾ.ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ, ವೀರೇಶ್ ಎಸ್.ಟಿ.ವಿ. ಹಾಗೂ ಗೌರಿ ವೆಂಕಟೇಶ್ ಛಾಯಾಗ್ರಹಣ, ರುದ್ರೇಶ್ ನಾಗಸಂದ್ರ ಸಂಭಾಷಣೆ, ಹೈಟ್ ಮಂಜು, ನಾಗೇಶ್ ಅವರ ನೃತ್ಯ ನಿರ್ದೇಶನವಿದೆ. ತಾರಗಣದಲ್ಲಿ ರಮೇಶ್ ಪರವಿನಾಯ್ಕರ್, ಸೋನಾಲಿ ಪಂಡಿತ್, ಸುಷ್ಮಾ ರಾಜ್, ಭವ್ಯ, ಮೈಕೋ ನಾಗರಾಜ್, ಬಿರಾದಾರ್, ಶಂಕರ್ ಭಟ್ ನಟಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.