ಮಲಯಾಳಂ ಸೂಪರ್ ಸ್ಟಾರ್ ಗೆ ಡೈರೆಕ್ಟ್ ಮಾಡಲಿದ್ದಾರೆ ಕನ್ನಡದ ನಂದ ಕಿಶೋರ್
Team Udayavani, Aug 31, 2022, 6:37 PM IST
ಬೆಂಗಳೂರು: ದಕ್ಷಿಣ ಭಾರತದಲ್ಲಿ ಕನ್ನಡ ಸಿನಿಮಾಗಳನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಚಿತ್ರಗಳಿಗೆ ಮಾತ್ರವಲ್ಲದೆ, ನಿರ್ದೇಶಕರು, ತಂತ್ರಜ್ಞರು, ಕಲಾವಿದರಿಗೆ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಾಗಿದೆ.
ಕೆಜಿಎಫ್ ಸರಣಿ ಹಿಟ್ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ಟಾಲಿವುಡ್ ನ ʼಸಲಾರ್ʼ ನಲ್ಲಿ ಬ್ಯುಸಿಯಾಗಿದ್ದಾರೆ. ಈಗ ಈ ಸಾಲಿಗೆ ಕನ್ನಡದ ನಂದ ಕಿಶೋರ್ ಅವರು ಎಂಟ್ರಿ ಆಗುತ್ತಿದ್ದಾರೆ.
ಹೌದು ಮಲಯಾಳಂ ಚಿತ್ರವೊಂದಕ್ಕೆ ನಂದ ಕಿಶೋರ್ ಅವರು ಡೈರೆಕ್ಟ್ ಮಾಡುತ್ತಿರುವುದು ಪಕ್ಕಾ ಆಗಿದೆ. ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರ ಚಿತ್ರಕ್ಕೆ ನಂದ ಕಿಶೋರ್ ನಿರ್ದೇಶನ ಮಾಡುತ್ತಿದ್ದಾರೆ ಎನ್ನುವ ಸುದ್ದಿಯೊಂದು ಅಧಿಕೃತವಾಗಿ ಹೊರ ಬಿದ್ದಿದೆ.
‘ಅಧ್ಯಕ್ಷʼ, ʼರನ್ನʼ, ʼಮುಕುಂದ ಮುರಾರಿʼ ʼಪೊಗರುʼ ಹೀಗೆ ಸಾಲು – ಸಾಲು ಹಿಟ್ ಚಿತ್ರಗಳನ್ನು ನೀಡಿರುವ ನಂದ ಕಿಶೋರ್ ಮಲಯಾಳಂ ದಿಗ್ಗಜ ನಟನಿಗೆ ಡೈರೆಕ್ಟ್ ಮಾಡಲು ರೆಡಿಯಾಗಿದ್ದಾರೆ.
ಈ ಬಗ್ಗೆ ಸ್ವತಃ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರೇ ವಿಷಯವನ್ನು ಹಂಚಿಕೊಂಡಿದ್ದಾರೆ. “ನಾನು ‘ವೃಷಭ’ ಚಿತ್ರಕ್ಕೆ ಸಹಿ ಹಾಕಲು ಕಾತರನಾಗಿದ್ದೇನೆ. ಇದು ಎವಿಎಸ್ ಸ್ಟುಡಿಯೋಸ್ ಅವರ ಮೊದಲ ಸಿನಿಮಾ. ಈ ಚಿತ್ರವನ್ನು ನಂದ ಕಿಶೋರ್ ನಿರ್ದೇಶನ ಮಾಡುತ್ತಿದ್ದಾರೆ. ಅಭಿಷೇಕ್ ವ್ಯಾಸ್, ಪ್ರವೀಣ್ ಸಿಂಗ್ ಮತ್ತು ಶ್ಯಾಮ್ ಸುಂದರ್ ಬಂಡವಾಳ ಹೂಡುತ್ತಿದ್ದಾರೆ. ಈ ಬಹುಭಾಷಾ ಸಿನಿಮಾ ಆಕ್ಷನ್ ಮತ್ತು ಭಾವನೆಗಳಿಂದ ತುಂಬಿದೆ. ನಿಮ್ಮೆಲ್ಲರ ಬೆಂಬಲ, ಆಶೀರ್ವಾದವನ್ನು ನಾನು ಕೋರುತ್ತೇನೆ” ಎಂದು ಮೋಹನ್ ಲಾಲ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಜುಲೈ 2023 ರಂದು ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಇದೊಂದು ಔಟ್ ಅಂಡ್ ಔಟ್ ಕಮರ್ಷಿಯಲ್ ಎಂಟರ್ಟೈನರ್ ಸಿನಿಮಾ ಆಗಲಿದೆ.
ಈ ಮೂಲಕ ಕನ್ನಡದ ಮತ್ತೊಂದು ನಿರ್ದೇಶಕ ಪ್ಯಾನ್ ಇಂಡಿಯಾ ಡೈರೆಕ್ಟರ್ ಆಗಲು ಹೊರಟಿದ್ದಾರೆ.
I’m excited to have signed in for “Vrushabha,” the first movie from AVS Studios, directed by Nanda Kishore and produced by Abhishek Vyas, Praveer Singh, and Shyam Sunder. This multilingual movie is filled with action and emotion, and I seek all your support and blessings. pic.twitter.com/omOaAB2Fub
— Mohanlal (@Mohanlal) August 27, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
Vaibhavi Shandilya: ಮಾರ್ಟಿನ್ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.