National Awards;70 ವರ್ಷದಲ್ಲಿ ಕನ್ನಡಕ್ಕೆ ಸಿಕ್ಕಿದ್ದು ನಾಲ್ಕೇ ಅತ್ಯುತ್ತಮ ನಟ ಪ್ರಶಸ್ತಿ!

ದಶಕದ ಬಳಿಕ ಕನ್ನಡ ಚಿತ್ರರಂಗದ ಮುಡಿಗೇರಿದ ಅತ್ಯುತ್ತಮ ನಟ ಪ್ರಶಸ್ತಿ

Team Udayavani, Aug 16, 2024, 6:48 PM IST

9

ಹೊಸದಿಲ್ಲಿ: ಚಲನಚಿತ್ರ ರಂಗದಲ್ಲೇ ಉನ್ನತ ಸ್ಥಾನದ ಪ್ರಶಸ್ತಿಯಾದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಶುಕ್ರವಾರ (ಆ.16) ಘೋಷಿಸಲಾಗಿದೆ. ಭಾರತೀಯ ಚಲನಚಿತ್ರ ರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದ ಕನ್ನಡ ಚಿತ್ರ ʼಕಾಂತಾರʼಕ್ಕಾಗಿ ನಟ ರಿಷಬ್ ಶೆಟ್ಟಿ (Rishab Shetty) ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

70 ವರ್ಷಗಳ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಇತಿಹಾಸದಲ್ಲಿ ಕನ್ನಡ ರಂಗಕ್ಕೆ ಸಿಕ್ಕಿದ 4ನೇ ಅತ್ಯುತ್ತಮ ನಟ ಪ್ರಶಸ್ತಿಯಾಗಿದ್ದು, ಹತ್ತು ವರ್ಷಗಳ ಬಳಿಕ ಕನ್ನಡ ಚಲನಚಿತ್ರ ರಂಗವು ಈ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ರಿಷಬ್‌ ಶೆಟ್ಟಿ ಅವರಿಗಿಂತ ಮೊದಲು ಮೂವರು ಕನ್ನಡ ಚಿತ್ರದ ನಟರು ಈ ಪ್ರಶಸ್ತಿಯನ್ನು ಪಡೆದಿದ್ದು, ಅದರ ವಿವರ ಇಲ್ಲಿದೆ.

ಎಂ.ವಿ ವಾಸುದೇವ ರಾವ್ (1975)

ಮೂಡಬಿದಿರೆ ವೆಂಕಟ ರಾವ್ ವಾಸುದೇವ ರಾವ್‌ (ಎಂ.ವಿ ವಾಸುದೇವ ರಾವ್)‌ 1928ರಲ್ಲಿ ಬಾಲನಟನಾಗಿ ಚಲನಚಿತ್ರ ರಂಗಕ್ಕೆ ಪದಾರ್ಪಣೆ ಮಾಡಿದ್ದ ನಟ. ಕನ್ನಡದ ಹಿಂದಿನ ಮೇರು ಚಿತ್ರಗಳಲ್ಲಿ ಒಂದಾದ ʼಚೊಮನ ದುಡಿʼ ಎಂಬ ಚಿತ್ರದಲ್ಲಿ ಮೂಲಕ ಚೋಮ ಎಂಬ ಪಾತ್ರದಲ್ಲಿ ಅಭಿನಯಿಸಿ, ತನ್ನ ನಟನೆಯಿಂದಾಗಿ ಕನ್ನಡ ಚಲನ ಚಿತ್ರ ರಂಗದಲ್ಲೇ ಮೊಟ್ಟ ಮೊದಲ ಬಾರಿಗೆ ಅಂದರೆ 1975 ರಲ್ಲಿ 23ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿದರು.

ಚಾರುಹಾಸನ್‌ ಶ್ರೀನಿವಾಸನ್‌ (1986)

ಚಾರುಹಾಸನ್‌ ಶ್ರೀನಿವಾಸನ್‌ ಭಾರತದ ಚಿತ್ರರಂಗದಲ್ಲಿ ಓರ್ವ ನಟನಾಗಿ, ನಿರ್ದೇಶಕನಾಗಿ, ಜೊತೆಗೆ ವಕೀಲ ವೃತ್ತಿಯಲ್ಲಿಯೂ ಕೂಡ ಹೆಸರಾದವರು. ಇವರು ಕನ್ನಡದಲ್ಲಿ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಚಲನಚಿತ್ರಗಳಲ್ಲೂ ನಟಿಸಿದ್ದಾರೆ. ಗಿರೀಶ್‌ ಕಾಸರವಳ್ಳಿ ನಿರ್ದೇಶನದ ʼತಬರನ ಕಥೆʼ ಎಂಬ ಕನ್ನಡ ಚಿತ್ರದಲ್ಲಿ ನಟಿಸಿ 1986ರಲ್ಲಿ ಎರಡನೇ ಬಾರಿಗೆ ಕನ್ನಡಕ್ಕೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಂದುಕೊಟ್ಟಿದ್ದಾರೆ. ಜೊತೆಗೆ ತನ್ನ ಅತ್ಯುತ್ತಮ ನಟನೆಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಗೆದ್ದಿದ್ದರು.

ಸಂಚಾರಿ ವಿಜಯ್‌ (2014)

ಸಂಚಾರಿ ವಿಜಯ್‌ ಎಂದೇ ಖ್ಯಾತಿ ಹೊಂದಿದ ವಿಜಯ್‌ ಕುಮಾರ್‌ ಬಸವರಾಜಯ್ಯ ರಂಗನಟನಾಗಿ ತನ್ನವೃತ್ತಿ ಜೀವನವನ್ನು ಪ್ರಾರಂಭಿಸಿದ ವ್ಯಕ್ತಿ. ಅವರ 10 ವರ್ಷಗಳ ವೃತ್ತಿ ಜೀವನದಲ್ಲಿ 25 ಚಲನ ಚಿತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಬಿ. ಎಸ್‌ ಲಿಂಗದೇವರು ನಿರ್ದೇಶಿಸಿದ ʼನಾನು ಅವನಲ್ಲ ಅವಳುʼ ಎಂಬ ಚಿತ್ರದಲ್ಲಿ ಮಂಗಳಮುಖಿ ಪಾತ್ರದಲ್ಲಿ ತೆರೆ ಮೇಲೆ ನಟಿಸಿ 2014 ರಲ್ಲಿ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿ ಪಡೆದರು. ಇದು ಕನ್ನಡಕ್ಕೆ ಲಭಿಸಿದ ಮೂರನೇ ಪ್ರಶಸ್ತಿ. ಜೊತೆಗೆ  ತನ್ನ ಅತ್ಯುತ್ತಮ ನಟನೆಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ, ಫಿಲ್ಮ್‌ಫೇರ್‌ ವಿಮರ್ಶಕರ ಪ್ರಶಸ್ತಿಗೆ ಭಾಜನರಾಗಿದ್ದರು.

ರಿಷಬ್ ಶೆಟ್ಟಿ (2024)

ಕಾಂತಾರ ಎಂಬ ಹೆಸರು ಕೇಳುತ್ತಲೇ ನೆನಪಾಗುವ ಹೆಸರು ರಿಷಬ್ ಶೆಟ್ಟಿ.  ಕನ್ನಡ ಚಲನಚಿತ್ರರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿದ ನಟ – ನಿರ್ದೇಶಕ. ಕನ್ನಡ ಚಿತ್ರರಂಗದಲ್ಲಿ ತೆರೆಯ ಮೇಲಿನ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಕೆಲಸ ಮಾಡಿ ಇದೀಗ ಕಾಂತಾರ ಚಿತ್ರದಲ್ಲಿನ ನಟನೆಗೆ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಟಾಪ್ ನ್ಯೂಸ್

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.