National Film Awards 2023: ಕನ್ನಡ ಪ್ರಾದೇಶಿಕ ವಿಭಾಗಕ್ಕೆ ಒಟ್ಟು ನಾಲ್ಕು ಪ್ರಶಸ್ತಿಗಳು

ಚಲನಚಿತ್ರ ಪತ್ರಕರ್ತ ಬಿ.ಎನ್‌ ಸುಬ್ರಹ್ಮಣ್ಯಗೆ ಪ್ರಶಸ್ತಿ

Team Udayavani, Aug 25, 2023, 11:54 PM IST

1-sada

ಬೆಂಗಳೂರು: ಅರುವತ್ತಾರನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟವಾಗಿದ್ದು, ಕನ್ನಡ ಪ್ರಾದೇಶಿಕ ವಿಭಾಗಕ್ಕೆ ಒಟ್ಟು ನಾಲ್ಕು ಪ್ರಶಸ್ತಿಗಳು ಸಂದಿವೆ. ಪ್ರಾದೇಶಿಕ ಸಿನೆಮಾ ವಿಭಾಗದಲ್ಲಿ ರಕ್ಷಿತ್‌ ಶೆಟ್ಟಿ ಅಭಿನಯದ “777 ಚಾರ್ಲಿ’ ಕನ್ನಡದ ಅತ್ಯುತ್ತಮ ಸಿನೆಮಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ನಾನ್‌ ಫೀಚರ್‌ ವಿಭಾಗದಲ್ಲಿ ನಟ ಅನಿರುದ್ಧ್ ಜತ್ಕಾರ್‌ ನಿರ್ದೇಶನ ಮಾಡಿರುವ “ಬಾಳೆ ಬಂಗಾರ’ ಡಾಕ್ಯುಮೆಂಟರಿಗೆ ತೀರ್ಪುಗಾರರ ವಿಶೇಷ ಮೆಚ್ಚುಗೆ ಲಭಿಸಿದೆ. ನಾನ್‌ ಫೀಚರ್‌ ವಿಭಾಗದಲ್ಲಿ ಅತ್ಯುತ್ತಮ ಅನ್ವೇಷಣೆ ಸಿನೆಮಾ ವಿಭಾಗದಲ್ಲಿ ಕನ್ನಡದ “ಆಯುಷ್ಮಾನ್‌’ ಸಿನೆಮಾಕ್ಕೆ ಪ್ರಶಸ್ತಿ ಲಭಿಸಿದೆ. ಹಿರಿಯ ಚಲನಚಿತ್ರ ಪತ್ರಕರ್ತ ಬಿ.ಎನ್‌ ಸುಬ್ರಹ್ಮಣ್ಯ ಅವರಿಗೆ ಸಿನೆಮಾ ವಿಮರ್ಶೆ ಜ್ಯೂರಿ ಪ್ರಶಸ್ತಿ ಲಭಿಸಿದೆ.

ಕನ್ನಡದ “ಆಯುಷ್ಮಾನ್‌’ಗೆ ಪ್ರಶಸ್ತಿ
ನಾನ್‌ ಫೀಚರ್‌ನ ಅತ್ಯುತ್ತಮ ಅನ್ವೇಷಣೆ ಸಿನೆಮಾ ವಿಭಾಗದಲ್ಲಿ ಕನ್ನಡದ “ಆಯುಷ್ಮಾನ್‌’ಗೆ ಪ್ರಶಸ್ತಿ ಲಭಿಸಿದೆ. ಈ ಹಿಂದೆ ಪುನೀತ್‌ ರಾಜಕುಮಾರ್‌ ಅಭಿನಯದ “ಪೃಥ್ವಿ’, “ಸವಾರಿ’, “ಚಂಬಲ…’ ಸಹಿತ ಕನ್ನಡದಲ್ಲಿ ಹಲವು ಸಿನೆಮಾಗಳನ್ನು ನಿರ್ದೇಶಿಸಿದ್ದ ಜೇಕಬ್‌ ವರ್ಗೀಸ್‌ ನಿರ್ದೇಶನ ಈ ಸಿನೆಮಾವನ್ನು ನಿರ್ದೇಶಿಸಿದ್ದಾರೆ. ಮ್ಯಾಥ್ಯೂ ವರ್ಗೀಸ್‌, ದಿನೇಶ್‌ ರಾಜಕುಮಾರ್‌ ಮತ್ತು ನವೀನ್‌ ಫ್ರಾನ್ಸಿಸ್‌ ಈ ಸಿನೆಮಾವನ್ನು ನಿರ್ಮಾಣ ಮಾಡಿದ್ದಾರೆ.

“ಬಾಳೆ ಬಂಗಾರ’ ಭಾರತಿ ಜೀವನಗಾಥೆ
ಹಿರಿಯ ಬಹುಭಾಷಾ ನಟಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ|ಭಾರತಿ ವಿಷ್ಣುವರ್ಧನ್‌ ಅವರ ಜೀವನ ಮತ್ತು ಸಾಧನೆಗಳ ಕುರಿತು ತಯಾರಾಗಿರುವ ಸಾಕ್ಷ್ಯಚಿತ್ರ “ಬಾಳೆ ಬಂಗಾರ’. ಭಾರತಿ ಅವರ ಶಾಲೆ, ಕಾಲೇಜು, ಚಲನಚಿತ್ರಗಳು, ಮದುವೆ, ಜೀವನ ಹೋರಾಟಗಳು ಮತ್ತು ಇತರ ವಿಷಯಗಳನ್ನು ಈ ಸಾಕ್ಷ್ಯಚಿತ್ರದಲ್ಲಿ ದಾಖಲಿಸಲಾಗಿದೆ. ಇದು ಹೆಚ್ಚು ಸಂದರ್ಶನ ಆಧಾರಿತ ಸಾಕ್ಷ್ಯಚಿತ್ರವಾಗಿದ್ದು, ನಿರ್ಮಾಣಕ್ಕೆ ಮೂರು ವರ್ಷ ಸಮಯ ತೆಗೆದುಕೊಂಡಿತ್ತು. ಭಾರತಿ ವಿಷ್ಣುವರ್ಧನ್‌ ಅಳಿಯ ನಟ ಅನಿರುದ್ಧ ಜತ್ಕರ್‌ ನಿರ್ದೇಶನದಲ್ಲಿ ಈ ಸಾಕ್ಷ್ಯಚಿತ್ರ ಮೂಡಿಬಂದಿದೆ.

“777 ಚಾರ್ಲಿ’ ಕನ್ನಡದ ಅತ್ಯುತ್ತಮ ಸಿನೆಮಾ
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಾದೇಶಿಕ ಸಿನೆಮಾ ವಿಭಾಗದಲ್ಲಿ ರಕ್ಷಿತ್‌ ಶೆಟ್ಟಿ ಅಭಿನಯದ “777 ಚಾರ್ಲಿ’ ಪ್ರಶಸ್ತಿ ಗೆದ್ದಿದೆ. ಕಿರಣ್‌ ರಾಜ್‌ ನಿರ್ದೇಶನದಲ್ಲಿ ಮೂಡಿಬಂದ ಈ ಸಿನೆಮಾವು ಚಿತ್ರ ಮಂದಿರಗಳಲ್ಲೂ ಹೌಸ್‌ಫ‌ುಲ್‌ ಪ್ರದರ್ಶನ ಕಂಡಿದ್ದು, 100 ಕೋಟಿ ರೂ. ಗೂ ಅಧಿಕ ಕಲೆಕ್ಷನ್‌ ಮಾಡಿತ್ತು. ಕನ್ನಡದ ಜತೆಗೆ ಐದು ಭಾಷೆಗಳಲ್ಲಿ ಈ ಸಿನೆಮಾ ಮೂಡಿಬಂದಿದ್ದು, ರಾಜ್‌ ಬಿ. ಶೆಟ್ಟಿ, ದಾನಿಶ್‌ ಸೇs…, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ಮೊದಲಾಣದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ತಮ್ಮ ಹೋಮ್‌ ಬ್ಯಾನರ್‌ “ಪರಂವಃ ಸ್ಟುಡಿಯೋಸ್‌’ ಅಡಿಯಲ್ಲಿ ಚಿತ್ರ ನಿರ್ಮಿಸಿದ್ದಾರೆ. ಸಿನೆಮಾಕ್ಕೆ ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ ನೀಡಿದ್ದು, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ, ಪ್ರತೀಕ್‌ ಶೆಟ್ಟಿ ಸಂಕಲನವಿದೆ.

ಪತ್ರಕರ್ತ ಬಿ.ಎನ್‌ ಸುಬ್ರಹ್ಮಣ್ಯಗೆ ಪ್ರಶಸ್ತಿ
ಕನ್ನಡ ಪತ್ರಿಕೋದ್ಯಮದಲ್ಲಿ ಸುಮಾರು 43 ವರ್ಷ ಗಳಿಂದ ಪತ್ರಕರ್ತರಾಗಿ ಗುರುತಿಸಿಕೊಂಡಿರುವ, ಹಿರಿಯ ಚಲನಚಿತ್ರ ಪತ್ರಕರ್ತ ಬಿ. ಎನ್‌. ಸುಬ್ರಹ್ಮಣ್ಯ (ಬಾನಾಸು) ಅವರಿಗೆ ಸಿನೆಮಾ ವಿಮರ್ಶೆ ಜ್ಯೂರಿ ಪ್ರಶಸ್ತಿ ಲಭಿಸಿದೆ. ಕನ್ನಡದ ಹಲವು ಪತ್ರಿಕೆ ಗಳಿಗೆ ವರದಿ, ಅಂಕಣ ಮತ್ತು ವಿಮರ್ಶೆಗಳನ್ನು ಬರೆಯುತ್ತಿರುವ ಬಿ. ಎನ್‌. ಸುಬ್ರಮಣ್ಯ ಪ್ರಸ್ತುತ ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಅಧ್ಯಕ್ಷರೂ ಆಗಿದ್ದು, ಮೊದಲ ಬಾರಿಗೆ ಪತ್ರಕರ್ತರೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.