![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 3, 2021, 8:35 AM IST
ಬೆಂಗಳೂರು: ಕೋವಿಡ್ ಎರಡನೇ ಅಲೆಯಿಂದಾಗಿ ಇದೇ ಏಪ್ರಿಲ್ ತಿಂಗಳಲ್ಲಿ ಲಾಕ್ ಡೌನ್ ಘೋಷಣೆಯಾಗಿದ್ದರಿಂದ, ರಾಜ್ಯದ ಎಲ್ಲ ಥಿಯೇಟರ್ಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಅದಾದ ಬಳಿಕ ಸುಮಾರು ಮೂರು ತಿಂಗಳ ನಂತರ ಜುಲೈ19ರಿಂದ ಮತ್ತೆ ಥಿಯೇಟರ್ಗಳಲ್ಲಿ 50% ರಷ್ಟು ಪ್ರೇಕ್ಷಕರ ಪ್ರವೇಶದೊಂದಿಗೆ ಥಿಯೇಟರ್ಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಸರ್ಕಾರ ಅವಕಾಶ ಕಲ್ಪಿಸಿತ್ತು.
ಆದರೆ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ಸಿಕ್ಕಿದ್ದರೂ, ಕಳೆದ ಎರಡು ವಾರಗಳಿಂದ ಯಾವುದೇ ಸಿನಿಮಾಗಳು ಬಿಡುಗಡೆ ಆಗದಿದ್ದರಿಂದ, ರಾಜ್ಯದ ಬಹುತೇಕ ಥಿಯೇಟರ್ಗಳಲ್ಲಿ ಒಂದು ರೀತಿಯ ಅಘೋಷಿತ ಲಾಕ್ಡೌನ್ ಇನ್ನೂ ಮುಂದುವರೆದಂತಿದೆ.
ಇನ್ನು ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಒಂದಷ್ಟು ಬಿಗ್ ಬಜೆಟ್ ಮತ್ತು ಬಿಗ್ ಸ್ಟಾರ್ ಸಿನಿಮಾಗಳು ತಮ್ಮ ರಿಲೀಸ್ ಡೇಟ್ ಅನೌನ್ಸ್ ಮಾಡುತ್ತಿರುವುದರಿಂದ, ಚಿತ್ರರಂಗದಲ್ಲಿ ಮತ್ತೆ ಒಂದಷ್ಟು ನಿರೀಕ್ಷೆ ಸಣ್ಣಗೆ ಗರಿಗೆದರುತ್ತಿದೆ.
ಹೀಗಾಗಿ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆದರೆ ಮತ್ತೆ ತಮ್ಮ ಸಿನಿಮಾಗಳ ರಿಲೀಸ್ಗೆ ಥಿಯೇಟರ್ ಕೊರತೆ ಎದುರಾಗಬಹುದು ಎಂಬ ಲೆಕ್ಕಚಾರದಿಂದ ಒಂದಷ್ಟು ಹೊಸಬರ ಸಿನಿಮಾಗಳು ಈ ನಡುವೆಯೇ ತೆರೆಗೆ ಬರಲು ಸಿದ್ಧತೆ ಮಾಡಿಕೊಳ್ಳುತ್ತಿವೆ.
ಎರಡನೇ ಲಾಕ್ಡೌನ್ ಬಳಿಕ ಈ ವಾರ (ಆಗಸ್ಟ್ 6) “ಕಲಿವೀರ’ ಚಿತ್ರ ಬಿಡುಗಡೆಯಾಗುತ್ತಿದೆ. ಸುಮಾರು ನಾಲ್ಕು ತಿಂಗಳ ನಂತರ ಥಿಯೇಟರ್ನಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಸುಮಾರು 50ಕ್ಕೂ ಹೆಚ್ಚುಕೇಂದ್ರಗಳಲ್ಲಿ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿ ಕೊಂಡಿದೆ.
ಉತ್ತರಕರ್ನಾಟಕ ಮೂಲದ ಏಕಲವ್ಯ ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದು ಔಟ್ ಆ್ಯಂಡ್ ಔಟ್ ಆ್ಯಕ್ಷನ್ ಕಥಾಹಂದರ ಹೊಂದಿರುವಈ ಚಿತ್ರದಲ್ಲಿ ಪಾವನಗೌಡ, ಚಿರಶ್ರೀ ಅಂಚನ್ ನಾಯಕಿಯಾಗಿ ಅಭಿನಯಿಸಿದ್ದಾರೆ. .ಒಟ್ಟಾರೆ ಹೊಸಬರ “ಕಲಿವೀರ’ ಥಿಯೇಟರ್ನಲ್ಲಿ ಎಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗುತ್ತಾನೆ ಅನ್ನೋದು ಇದೇ ವಾರಾಂತ್ಯದಲ್ಲಿ ಗೊತ್ತಾಗಲಿದೆ.
ಉಲಾ ಪಲ್ಟಾ ಆಗುತ್ತಾ ಲೆಕ್ಕಾಚಾರ?
ಆಗಸ್ಟ್ ಮೊದಲ ವಾರದಿಂದ ರಾಜ್ಯದಲ್ಲಿ ಥಿಯೇಟರ್ಗಳಲ್ಲಿ 100%ರಷ್ಟು ಪ್ರೇಕ್ಷಕರ ಪ್ರವೇಶಾವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಚಿತ್ರರಂಗದ ಬಹುತೇಕ ನಿರ್ಮಾಪಕರು ಮತ್ತು ಪ್ರದರ್ಶಕರಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಮಾಣ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿರುವುದರಿಂದ, ಕೋವಿಡ್ ಮೂರನೇ ಅಲೆಯ ಆತಂಕದಿಂದ ಸರ್ಕಾರ ಥಿಯೇಟರ್ಗಳಲ್ಲಿ 100%ರಷ್ಟು ಪ್ರೇಕ್ಷಕರ ಪ್ರವೇಶಾವಕಾಶ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ಹೀಗಾಗಿ ಇನ್ನೂ ಎರಡು – ಮೂರು ವಾರ ಈಗಿರುವಂತೆಯೇ 50% ರಷ್ಟು ಪ್ರೇಕ್ಷಕರ ಪ್ರವೇಶದೊಂದಿಗೆ ನಿರ್ಬಂಧಿತ ಪ್ರವೇಶ ಮುಂದುವರೆಯಲಿದೆ ಎನ್ನಲಾಗುತ್ತಿದೆ. ಹೀಗಾಗಿ ಆಗಸ್ಟ್ ಮೊದಲ ವಾರ, ಎರಡನೇ ವಾರ ತಮ್ಮ ಬಿಡುಗಡೆ ಅನೌನ್ಸ್ ಮಾಡುವ ಯೋಚನೆಯಲ್ಲಿದ್ದ ಅನೇಕ ನಿರ್ಮಾಪಕರು ಇನ್ನೂಕೆಲವು ದಿನಕಾದು ನೋಡುವ ನಿರ್ಧಾರಕ್ಕೆ ಬಂದಿದ್ದಾರೆ. ಇದರ ಜೊತೆಗೆ ಮತ್ತೂಂದು ಬಿಗ್ ಸ್ಟಾರ್ ಚಿತ್ರ “ಕೋಟಿಗೊಬ್ಬ-3′ ಸುದೀಪ್ ಬರ್ತ್ಡೇ ಪ್ರಯುಕ್ತ ಸೆ.2ಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.