![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 25, 2018, 11:16 AM IST
ಸೋಮವಾರ ಸದ್ದಿಲ್ಲದೆ ರವಿಚಂದ್ರನ್ ಅವರ ಚಿತ್ರವೊಂದು ಶುರುವಾಗಿದೆ. ಕೆ. ಮಂಜು ಸಿನಿಮಾಸ್ ಲಾಂಛನದಲ್ಲಿ ಕೆ. ಮಂಜು ಹಾಗೂ ಗುಜ್ಜಲ್ ಪುರುಷೋತ್ತಮ್ ನಿರ್ಮಿಸುತ್ತಿರುವ ಹೊಸ ಚಿತ್ರದಲ್ಲಿ ರವಿಚಂದ್ರನ್ ನಟಿಸುತ್ತಿರುವುದಷ್ಟೇ ಅಲ್ಲ, ವಿಭಿನ್ನ ಗೆಟಪ್ನಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.
ತಮಿಳಿನ “ಧ್ರುವಂಗಳ್ ಪದಿನಾರು’ ಚಿತ್ರದಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳಲಾಗುತ್ತಿರುವ ಈ ಚಿತ್ರವನ್ನು ಶಿವಗಣೇಶ್ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಜಿಗರ್ ಥಾಂಡಾ’ ಹಾಗೂ “ತ್ರಾಟಕ” ಚಿತ್ರಗಳನ್ನು ನಿರ್ದೇಶನ ಮಾಡಿರುವ ಶಿವಗಣೇಶ್, ಈ ಚಿತ್ರಕ್ಕೆ ಚಿತ್ರಕಥೆ ರಚಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ಶ್ರೀಕಾಂತ್ ಸಂಭಾಷಣೆ ಬರೆದಿದ್ದಾರೆ.
ಕುತೂಹಲಕಾರಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರವಿಚಂದ್ರನ್ ಅವರು ಭಿನ್ನ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಉಡುಗೆ, ತೊಡುಗೆ ಹೊಸರೀತಿಯಲ್ಲಿರುತ್ತದಂತೆ. ರವಿಚಂದ್ರನ್ ಜೊತೆಗೆ ಅಚ್ಯುತಕುಮಾರ್, ಯಶ್ ಶೆಟ್ಟಿ, ಚೈತ್ರಾ ರಾವ್, ನಿಸರ್ಗ, ಚೇತನ್, ಅರ್ಜುನ್ ಗೌಡ, ಗಿರೀಶ್ ಮುಂತಾದವರು ನಟಿಸುತ್ತಿರುವ ಈ ಚಿತ್ರಕ್ಕೆ ಗೌತಮ್ ಶ್ರೀವತ್ಸ ಸಂಗೀತ ಸಂಯೋಜಿಸುತ್ತಿದ್ದಾರೆ.
ಇನ್ನು ವಿನೋದ್ ಭಾರತಿ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ ಮತ್ತು ವಿ. ನಾಗೇಂದ್ರ ಪ್ರಸಾದ್ ಅವರ ಗೀತಸಾಹಿತ್ಯ ಈ ಚಿತ್ರಕ್ಕಿದೆ. ಬೆಂಗಳೂರಲ್ಲದೆ ಕೊಡಗು, ಊಟಿ, ಉತ್ತರ ಭಾರತ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.