ಅಕ್ಟೋಬರ್ 10ಕ್ಕೆ ನಿಖಿಲ್ ಹೊಸ ಚಿತ್ರ 4 ಭಾಷೆಗಳಲ್ಲಿ ನಿರ್ಮಾಣ!
Team Udayavani, Aug 30, 2017, 10:32 AM IST
ಅಂತೂ ನಿಖಿಲ್ ಅಭಿನಯದ ಹೊಸ ಚಿತ್ರಕ್ಕೆ ವೇದಿಕೆ ಸಿದ್ಧವಾಗಿದೆ. ನಿಖಿಲ್ ಅಭಿನಯದ ಚಿತ್ರಕ್ಕೆ ಕಥೆ ಬರೆಯುವುದಕ್ಕೆ ಮಹೇಶ್ ರಾವ್, ಗೋಪಿಮೋಹನ್ ಮತ್ತು ಮೆಹರ್ ರಮೇಶ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಈ ಪೈಕಿ ಮಹೇಶ್ ರಾವ್ ಅವರ ಕಥೆಯೇ ಓಕೆಯಾಗಿದ್ದು, ಈಗಾಗಲೇ ಕಥೆ-ಚಿತ್ರಕಥೆ ಬರೆಯುವ ಕೆಲಸ ಸದ್ದಿಲ್ಲದೆ ಮುಗಿದಿದೆ.
ಇನ್ನು ಚಿತ್ರವು ಅಕ್ಟೋಬರ್ 10ರಂದು ಪ್ರಾರಂಭವಾಗಲಿದೆ ಎಂಬ ಮಾಹಿತಿ ಬಂದಿದೆ. ಹೌದು, ನಿಖಿಲ್ ಅಭಿನಯದ ಮೂರನೆ ಹಾಗೂ ಚೆನ್ನಾಂಬಿಕ ಫಿಲಂಸ್ ಲಾಂಛನದ ಏಳನೆಯ ಚಿತ್ರವು ಅಕ್ಟೋಬರ್ 10ರಂದು ಪ್ರಾರಂಭವಾಗಲಿದೆ. ಈ ಚಿತ್ರಕ್ಕೆ ಮಹೇಶ್ ರಾವ್ ಕಥೆ ಮತ್ತು ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ವಹಿಸಿಕಕೊಂಡಿದ್ದಾರೆ.
ಇನ್ನು ಗುರುರಾಜ್ ದೇಸಾಯಿ ಅವರು ಚಿತ್ರಕ್ಕೆ ಸಂಭಾಷಣೆ ಬರೆಯುವುದರ ಜೊತೆಗೆ ಸಹನಿರ್ದೇಶನವನ್ನೂ ಮಾಡಲಿದ್ದಾರಂತೆ. ಚಿತ್ರಕ್ಕೆ ಗಾಜುಲ ಶಿವ ಅವರು ಛಾಯಾಗ್ರಹಣ ಮಾಡಿದರೆ, ವಿ. ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು ಚಿತ್ರಕ್ಕೆ ಉಳಿದ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ನಡೆಯುತ್ತಿದೆ. ಈ ಚಿತ್ರವು ಕನ್ನಡ, ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Puttur: ಸಂಪ್ಯ ಮದ್ರಸಾದಲ್ಲಿ ಹಳೆ ಕಾಲದ ವಸ್ತು ಪ್ರದರ್ಶನ
Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ
Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ
ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?
BBK11: ಈ ಬಾರಿ ಬಿಗ್ ಬಾಸ್ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.