“ನಿಮ್ಮೆಲ್ಲರ ಆಶೀರ್ವಾದ’ ಇಂದು ರಾಜ್ಯಾದ್ಯಂತ ತೆರೆಗೆ


Team Udayavani, Jul 21, 2023, 10:35 AM IST

nimmelllara-ashirvada

ಮಹಾನಗರ: ವರುಣ್‌ ಸಿನಿ ಕ್ರಿಯೇಷನ್ಸ್‌ ಲಾಂಛನದಲ್ಲಿ ಮೂಡಿ ಬಂದಿರುವ “ನಿಮ್ಮೆಲ್ಲರ ಆಶೀರ್ವಾದ’ ಕನ್ನಡ ಚಲನಚಿತ್ರ ಜು. 21ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಲನಚಿತ್ರದ ನಿರ್ಮಾಪಕ ವರುಣ್‌ ಹೆಗ್ಡೆ ಹೇಳಿದರು.

ನಿರ್ದೇಶಕ ರವಿಕಿರಣ್‌ ಮಾತನಾಡಿ, ನಾಯಕ ನಟನಾಗಿ ಪ್ರತೀಕ್‌ ಶೆಟ್ಟಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ. ನಾಯಕ ನಟಿಯಾಗಿ ಪಾಯಲ್‌ ರಾಧಾಕೃಷ್ಣ ನಟಿಸಿದ್ದಾರೆ.

ಸುಂದರ ಕರಾವಳಿಯ ಸೊಗಡಿನ ಒಳ್ಳೆಯ ಜನರಿರುವ ಒಂದು ಸಣ್ಣ ಊರು, ಆ ಊರಿನ ಓರ್ವ ಪೊಲೀಸ್‌ ಅಧಿಕಾರಿ ಸಿನೆಮಾದ ನಾಯಕ “ಆಶೀರ್ವಾದ್‌’. ಅವನು ಹಲವು ಏಳು ಬೀಳುಗಳನ್ನು ಕಂಡು ಹೇಗೆ ಪೋಲಿಸ್‌ ಆದ ಎನ್ನುವುದೇ ಸಿನೆಮಾದ ಕಥೆ. ಜತೆಗೆ ಪಾಯಲ್‌ ರಾಧಾಕೃಷ್ಣ ಹಾಗೂ ಆಶೀರ್ವಾದನ ನಡುವಿನ ಸುಂದರ ಪ್ರೇಮಕಥೆ ಈ ಚಿತ್ರದಲ್ಲಿ ಇರಲಿದೆ. ಕರಾವಳಿ ಭಾಗದಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ ಎಂದರು.

ಕನ್ನಡದ ಮೇರು ನಟಿ ಎಂ.ಎನ್‌. ಲಕ್ಷ್ಮೀ ದೇವಿ, ಮೈಮ್‌ ರಾಮದಾಸ್‌, ಅರವಿಂದ ಬೋಳಾರ್‌, ಸ್ವಾತಿ ಗುರುದತ್ತ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್‌ ಪೂಜಾರಿ, ಸದಾಶಿವ ಅಮೀನ್‌, ಖಳನಟನಾಗಿ ಕೆಜಿಎಫ್‌ ಖ್ಯಾತಿಯ ದಿನೇಶ್‌ ಮಂಗಳೂರು ಮಿಂಚಿದ್ದಾರೆ. ವರುಣ್‌ ಹೆಗ್ಡೆ ನಿರ್ಮಾಣದ ಹೊಣೆ ಹೊತ್ತಿದ್ದಾರೆ.

ರವಿಕಿರಣ್‌ ಕಥೆ-ನಿರ್ದೇಶನ, ಸರವಣನ್‌ ಜಿ.ಎನ್‌. ಛಾಯಾಗ್ರಹಣ, ರಾಷ್ಟ್ರ ಪ್ರಶಸ್ತಿ ವಿಜೇತ ಸುರೇಶ್‌ ಆರುಮುಗಮ್‌ ಸಂಕಲನ, ಸುನಾದ್‌ ಗೌತಮ್‌ ಸಂಗೀತ, ವಿವೇಕ್‌ ಚಕ್ರವರ್ತಿ ಹಿನ್ನೆಲೆ ಸಂಗೀತ ಚಿತ್ರದಲ್ಲಿದೆ ಎಂದರು.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಸುಮಧುರ ಹಾಡುಗಳು ಎಲ್ಲರ ಗಮನಸೆಳೆದಿದೆ. ರಘು ದೀಕ್ಷಿತ್‌ ಹಾಡಿರುವ “ರಕ್ಷಕ’ ಹಾಡಿನ ಮುಖಾಂತರ “ನಿಮ್ಮೆಲ್ಲರ ಆಶೀರ್ವಾದ’ ಚಿತ್ರತಂಡ ಪೊಲೀಸ್‌ ಇಲಾಖೆಗೆ ಕೃತಜ್ಞತೆ ಸಲ್ಲಿಸಿದೆ. ಹಾಡುಗಳಿಗೆ ರಜತ್‌ ಹೆಗ್ಡೆ, ನಿನಾದ ನಾಯಕ್‌, ನಿಹಾಲ್‌ ತಾವ್ರೋ ಧ್ವನಿ ನೀಡಿದ್ದಾರೆ.

ನಿರ್ಮಾಪಕ ಉದಯ್‌ ಕುಮಾರ್‌ ಹೆಗ್ಡೆ, ವಾಲ್ಟರ್‌ ನಂದಳಿಕೆ, ನಟ ಪ್ರತೀಕ್‌ ಶೆಟ್ಟಿ, ಅರವಿಂದ್‌ ಬೋಳಾರ್‌, ಮೈಮ್‌ ರಾಮದಾಸ್‌, ಪುರುಷೋತ್ತಮ್‌ ಭಂಡಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.