ಸ್ಟಾರ್ ಮುಂಚೆ ಹೊಸಬರ ಅದೃಷ್ಟ  ಪರೀಕ್ಷೆ


Team Udayavani, Sep 27, 2021, 10:55 AM IST

ninna sanihake

ಸರ್ಕಾರ ಚಿತ್ರಮಂದಿರಗಳಿಗೆ ಪೂರ್ಣ ಪ್ರವೇಶ ಘೋಷಿಸುತ್ತಿದ್ದಂತೆ ಸ್ಟಾರ್‌ಗಳ ಸಿನಿಮಾಗಳ ಜೊತೆಗೆ ಹೊಸಬರ ಸಿನಿಮಾಗಳು ಕೂಡಾ ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ. ಅದರಲ್ಲೂ ಆರಂಭದ ಎರಡು ವಾರ ಹೊಸಬರು ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ಳಲಿದ್ದಾರೆ. ಅದಕ್ಕೆ ಕಾರಣ ಅ.14ರಿಂದ ಸ್ಟಾರ್‌ಗಳ ಸಿನಿ ಜಾತ್ರೆ ಶುರುವಾಗಲಿದೆ.

ಅಕ್ಟೋಬರ್‌ ಆರಂಭದ ಎರಡು ವಾರ ಯಾವುದೇ ಸ್ಟಾರ್‌ ಸಿನಿಮಾಗಳು ರಿಲೀಸ್‌ ಆಗದೇ ಇರುವುದರಿಂದ ಈ ಸಮಯವನ್ನು ಹೊಸಬರು ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಈಗಾಗಲೇ ಅಕ್ಟೋಬರ್‌ 1ಕ್ಕೆ “ಕಾಗೆಮೊಟ್ಟೆ’, ಅಕ್ಟೋಬರ್‌ 8ಕ್ಕೆ “ನಿನ್ನ ಸನಿಹಕೆ’ ಹಾಗೂ “ಇದು ಆಕಾಶವಾಣಿ ಬೆಂಗಳೂರು’ ಚಿತ್ರಗಳು ಬಿಡುಗಡೆಯನ್ನು ಘೋಷಿಸಿಕೊಂಡಿದೆ. ಇದರ ಜೊತೆಗೆ ಇನ್ನೊಂದೆರಡು ಹೊಸಬರ ಸಿನಿಮಾಗಳು ಬಿಡುಗಡೆಯಾಗಲಿದೆ.

ಅ.8ಕ್ಕೆ ನಿನ್ನ ಸನಿಹಕೆ ರಿಲೀಸ್‌ ಸೂರಜ್‌ ಗೌಡ ಹಾಗೂ ಧನ್ಯಾ ರಾಮ್‌ ಕುಮಾರ್‌ ನಾಯಕ-ನಾಯಕಿಯಾಗಿರುವ “ನಿನ್ನ ಸನಿಹಕೆ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಏಪ್ರಿಲ್‌ ತಿಂಗಳಲ್ಲೇ ತೆರೆ ಕಾಣಬೇಕಿತ್ತು. ಅಷ್ಟರಲ್ಲಿ ಎರಡನೇ ಲಾಕ್‌ಡೌನ್‌ ಘೋಷಿಸಿದ್ದರಿಂದ ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಿತ್ತು ಚಿತ್ರತಂಡ. ಇದೀಗ ಚಿತ್ರಮಂದಿರಗಳಲ್ಲಿ ಹೌಸ್‌ಫ‌ುಲ್‌ ಪ್ರದರ್ಶನಕ್ಕೆ ಅನುಮತಿ ಸಿಗುತ್ತಿದ್ದಂತೆ ಈಗ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಅಕ್ಟೋಬರ್‌ 8ರಂದು ಚಿತ್ರ ಬಿಡುಗಡೆಯಾಗುತ್ತಿದೆ.

ರಘು ದೀಕ್ಷಿತ್‌ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದು, ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಿಟ್‌ ಲಿಸ್ಟ್‌ ಸೇರಿಕೊಂಡಿವೆ. ವಿಶೇಷವೆಂದರೆ ಲಾಕ್‌ಡೌನ್‌ ಸಮಯದಲ್ಲಿ ಕವರ್‌ ಸಾಂಗ್ಸ್‌ ಮೂಲಕ ಈ ಚಿತ್ರದ “ನೀ ಪರಿಚಯ’ ಎಂಬ ಹಾಡು ಕಮಾಲ್‌ ಮಾಡಿದೆ.

ಸೋಷಿಯಲ್‌ ಮೀಡಿಯಾದಲ್ಲಿ ಸುಮಾರು 250ಕ್ಕೂ ಹೆಚ್ಚು ಬಗೆಯಲ್ಲಿ ಈ ಹಾಡಿನ ಕವರ್‌ ವರ್ಷನ್‌ ಮಾಡಿದ್ದಾರೆ. ಲಾಕ್‌ ಡೌನ್‌ ಸಮಯದಲ್ಲಿ ಹಿಟ್‌ ಆಗಿರೋ ಈ ಹಾಡು ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಯೂಟ್ಯೂಬ್‌ ನಲ್ಲಿ ಮಿಲಿಯನ್ಸ್‌ ಹಿಟ್ಸ್‌ ದಾಖಲಿಸಿದೆ. ಈ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್‌ ಸಿಕ್ಕಿದೆ. ವೈಟ್‌ ಅಂಡ್‌ ಗ್ರೇ ಪಿಕ್ಚರ್ಸ್‌ ಬ್ಯಾನರ್‌ನಡಿಯಲ್ಲಿ ಅಕ್ಷಯ್‌ ರಾಜಶೇಖರ್‌, ರಂಗನಾಥ್‌ ಕುಡ್ಲಿ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.