ನಿರ್ಭಯಾ ಕೇಸ್‌: ಹ್ಯಾಂಗ್‌ಮ್ಯಾನ್‌ಗೆ ಜಗ್ಗೇಶ್‌ 1 ಲಕ್ಷ ದೇಣಿಗೆ


Team Udayavani, Mar 21, 2020, 7:02 AM IST

Jaggesh

ಇತ್ತೀಚೆಗಷ್ಟೇ ಜಗ್ಗೇಶ್‌ ಅಂಧ ಸಹೋದರಿಯರಿಗೆ ಮನೆ ನಿರ್ಮಿಸಿ ಕೊಡುವ ಮೂಲಕ ತಮ್ಮ ಮಾತು ಉಳಿಸಿಕೊಂಡಿದ್ದರು. ಈಗ ಮತ್ತೂಂದು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಹೌದು, ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ವರ್ಷಗಳ ನಂತರ ನಿರ್ಭಯಾ ಹಂತಕರನ್ನು ಶುಕ್ರವಾರ ಗಲ್ಲಿಗೇರಿಸಿದ ಹ್ಯಾಂಗ್‌ಮ್ಯಾನ್‌ಗೆ 1 ಲಕ್ಷ ದೇಣಿಗೆ ನೀಡಿದ್ದಾರೆ.

ಅಷ್ಟಕ್ಕೂ ಜಗ್ಗೇಶ್‌ ನಿರ್ಭಯಾ ಹಂತಕರನ್ನು ನೇಣಿಗೇರಿಸಿದ ಹ್ಯಾಂಗ್‌ಮ್ಯಾನ್‌ಗೆ 1 ಲಕ್ಷ ಕೊಟ್ಟಿದ್ದು ಯಾಕೆ? ಈ ಪ್ರಶ್ನೆಗೆ ಉತ್ತರ, ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಿದ ನಂತರ ಸಿಗುವ ಒಂದು ಲಕ್ಷ ರುಪಾಯಿ ಸಂಭಾವನೆಯಿಂದ ತನ್ನ ಮಗಳ ಮದುವೆ ಮಾಡುವುದಾಗಿ ಹ್ಯಾಂಗ್‌ಮ್ಯಾನ್‌ ಪವನ್‌ ಜಲ್ಲಾದ್‌ ಹೇಳಿದ್ದರು. ಆ ವಿಷಯ ತಿಳಿಯುತ್ತಿದ್ದಂತೆಯೇ, ಜಗ್ಗೇಶ್‌ ಕೂಡ ಟ್ವೀಟ್‌ ಮಾಡಿ, “ಮಾನ್ಯರೆ ರಾಕ್ಷಸರ ಸಂಹಾರ ದೇವರ ನಿಯಮ! ಆ ಕಾರ್ಯದಿಂದ ಬರುವ ಹಣದಲ್ಲಿ ಮಗಳ ಮದುವೆ ಮಾಡುವೆ ಎಂದ ನಿಮ್ಮ ಅನಿಸಿಕೆ ಕೇಳಿ ಭಾವುಕನಾದೆ,

ನೀವೇ ಆ ಪಾಪಿಗಳ ನೇಣಿಗೇರಿಸಿದರೆ, ನಾನು ಕಲೆಯಿಂದ ದುಡಿದ ಒಂದು ಲಕ್ಷ ರೂಪಾಯಿಯನ್ನು ನಿಮಗೆ ದೇಣಿಗೆಯಾಗಿ ನಿಮ್ಮ ಮಗಳ ಮದುವೆಗೆ ನೀಡುವೆ. ಇಂದೇ ಆ ಹಣವನ್ನು ನಿಮಗಾಗಿ ಮೀಸಲಿಟ್ಟೆ. ಇದು ದುರುಳ ನಿಗ್ರಹ ದೇವರ ಸೇವೆ. ಹರಿ ಓಂ’ ಎಂದು ಜಗ್ಗೇಶ್‌ ಟ್ವೀಟ್‌ ಮಾಡಿದ್ದರು. ಶುಕ್ರವಾರ ಅತ್ಯಾಚಾರಿಗಳ ನೇಣಿಗೇರಿಸಲಾಗುತ್ತೆ ಎಂಬ ವಿಷಯ ತಿಳಿಯುತ್ತಿದ್ದಂತೆ ಜಗ್ಗೇಶ್‌, ಈ ಸುದ್ದಿ ಕೇಳಲು ರಾತ್ರಿಯೆಲ್ಲ ನಿದ್ದೆ ಮಾಡದೆ ಎದ್ದು ಕೂತಿದ್ದ ಅವರು,

ಆ ನಾಲ್ವರು ಅತ್ಯಾಚಾರಿಗಳನ್ನು ಗಲ್ಲಿಗೇರಿಸುತ್ತಿದ್ದಂತೆಯೇ ಅವರು ಹಿಂದೆ ಮಾತು ಕೊಟ್ಟಂತೆ 1 ಲಕ್ಷ ರು.ದೇಣಿಗೆ ನೀಡಿ, “ಕೊಟ್ಟ ಮಾತಿನಂತೆ 1 ಲಕ್ಷ ರು. ನಿರ್ಭಯ ಹಂತಕರ ಹ್ಯಾಂಗ್‌ಮ್ಯಾನ್‌ಗೆ ನನ್ನ ದೇಣಿಗೆ. ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ. ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲ. ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪಲ್ಲಾ. ಈ ದಿನಕ್ಕೆ ಕಾಯುತ್ತಿದ್ದೆ. ಸುದ್ದಿ ಕೇಳಲು ನಿದ್ರೆ ಮಾಡದೆ ಕಾದೆ. ಹರಿ ಓಂ. ಶುಭದಿನ’ ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.