Bigg Boss ನಿರೂಪಣೆ ಹಿಂದಿನ ಕಷ್ಟ ನನಗೆ ಮಾತ್ರ ಗೊತ್ತು – ಕಿಚ್ಚ

ಈ ಬಾರಿ ಬಿಗ್ ಬಾಸ್ ನಡೆಸಿಕೊಡುವ ಬಗ್ಗೆ ಕಿಚ್ಚ ಹೇಳಿದ್ದೇನು?

Team Udayavani, Aug 31, 2024, 2:07 PM IST

11-kiccha-big-boss

ಬೆಂಗಳೂರು: ಕಿಚ್ಚ ಸುದೀಪ್ (Kiccha Sudeep) ಅವರ ‘ಮ್ಯಾಕ್ಸ್’ ಸಿನಿಮಾದ ರಿಲೀಸ್ ಬಗ್ಗೆ ಮಾತು ಜೋರಾಗಿ‌ ನಡೆಯುತ್ತಿರುವ ಬೆನ್ನಲ್ಲೇ ಅವರ ಬಿಗ್ ಬಾಸ್ ನಿರೂಪಣೆ ವಿಚಾರವೂ ಸುದ್ದಿಯಲ್ಲಿದೆ.

ಬಿಗ್ ಬಾಸ್ ಕನ್ನಡ -11(Big Boss Kannada -11) ಶೀಘ್ರದಲ್ಲಿ ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ. ಆದರೆ ಈ ಬಾರಿ ಶೋ ಶುರುವಿಗೂ ಮುನ್ನ ನಿರೂಪಕ ಯಾರು ಎನ್ನುವುದೇ ಕುತೂಹಲಕಾರಿ ಪ್ರಶ್ನೆಯಾಗಿ ಉಳಿದಿದೆ.

ಕಿಚ್ಚ ಸುದೀಪ್ ಅವರು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಬಿಗ್ ಬಾಸ್ ನಡೆಸಿಕೊಡುವ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಕಿಚ್ಚ ಅವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರಿಸಿರುವುದು ಅವರು ಬಿಗ್ ಬಾಸ್ ನಡೆಸಿಕೊಡುವ ಬಗ್ಗೆ ಅನುಮಾನ ಬರುವಂತೆ ಮಾಡದೆ.

“ಕಳೆದ 10 ಸೀಸನ್ ನಾನು ಬಿಗ್ ಬಾಸ್ ನಡೆಸಿಕೊಟ್ಟಿದ್ದೇನೆ ಅನ್ನೋದು ಮಾತ್ರ ಎಲ್ಲರಿಗೂ ಗೊತ್ತು. ಆದರೆ ಅದರ ಹಿಂದಿನ ಕಷ್ಟ ಎಲ್ಲರಿಗೂ ಗೊತ್ತಿಲ್ಲ” ಎಂದಿದ್ದಾರೆ.

“ಬಿಗ್ ಬಾಸ್ ಸೀಸನ್ -11 ಕ್ಕೆ ಬೇರೆಯವರೂ ಬರಲಿ ಅಂತಾ ಕಾಯ್ತಾ ಇದೀನಿ. ಬಿಗ್ ಬಾಸ್‌ನ 10 ಸೀಸನ್‌ಗಳನ್ನು ನಾನು ಡೆಡಿಕೇಟ್ ಮಾಡಿದ್ದೀನಿ. ಕಳೆದ 10 ಸೀಸನ್‌ಗಳನ್ನು ನಾನು ನಡೆಸಿಕೊಂಡು ಬಂದಿದ್ದೀನಿ. ನಾನು ಬಿಗ್ ಬಾಸ್ ನಡೆಸಿಕೊಡ್ತೀನಿ ಅಂತಾ ಎಲ್ಲರಿಗೂ ಗೊತ್ತಿದೆ. ಆದರೆ ನಾನು ಹೇಗೆ ನಡೆಸಿಕೊಡುತ್ತಿದ್ದೆ ಅಂತಾ ಯಾರಿಗಾದರೂ ಗೊತ್ತಿದ್ಯಾ? ಬಿಗ್ ಬಾಸ್‌ಗಾಗಿ ನಾನು ಎಲ್ಲಿದ್ದರೂ ಬರಬೇಕಾಗುತ್ತದೆ. ಬಿಗ್ ಬಾಸ್ ನಡೆಸಬೇಕಾದರೆ ಅದರ ಹಿಂದಿನ ಸ್ಥಿತಿ ಹೇಗಿರುತ್ತದೆ ಅಂತಾ ನನಗೆ ಗೊತ್ತಿದೆ ” ಎಂದಿದ್ದಾರೆ.

ಸಿನಿಮಾಗೆ ನ್ಯಾಯ ಕೊಡಬೇಕಾ? ಅಥವಾ ಬಿಗ್ ಬಾಸ್ ಶೋಗೆ ನ್ಯಾಯ ಕೊಡಬೇಕಾ? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಬಾರಿ ಕಿಚ್ಚ ಬಿಗ್ ಬಾಸ್ ನಡೆಸಿಕೊಡುತ್ತಾರಾ ಇಲ್ವಾ ಎನ್ನುವುದರ ಬಗ್ಗೆ ಸ್ಪಷ್ಟವಾಗಿ ಹೇಳಿಲ್ಲ.

ಈ ಹಿಂದೆ ಈ ಬಾರಿ ಕಿಚ್ಚ ಸುದೀಪ್ ಬಿಗ್ ಬಾಸ್ ನಡೆಸಿಕೊಡುವುದು ಅನುಮಾನ ಎನ್ನುವ ಮಾತುಗಳು ಕೇಳಿಬಂದಿತ್ತು. ರಮೇಶ್ ಅರವಿಂದ್, ರಿಷಬ್ ಶೆಟ್ಟಿ ಅವರ ಹೆಸರು ನಿರೂಪಕರ ಸಾಲಿನಲ್ಲಿ ಕೇಳಿ ಬಂದಿತ್ತು.

ಆದರೆ ಶೀಘ್ರದಲ್ಲೇ ಪ್ರೋಮೊ ಶೂಟ್ ಆಗಲಿದ್ದು ಕಿಚ್ಚ ಅವರೇ ಈ ಬಾರಿಯೂ ಶೋ‌ ನಡೆಸಿಕೊಡುತ್ತಾರೆ ಎನ್ನಲಾಗುತ್ತಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಶೋ ಶುರುವಾಗುವ ಸಾಧ್ಯತೆಯಿದೆ. ಈ ಬಗ್ಗೆ ವಾಹಿನಿ ಅಧಿಕೃತ ಮಾಹಿತಿ‌ ಇನ್ನಷ್ಟೇ‌ ನೀಡಬೇಕಿದೆ.

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.