ಪ್ರಾಣಿ ಪ್ರಿಯರ ಸೆಳೆಯುತ್ತಿದೆ ಚಾರ್ಲಿ


Team Udayavani, Jun 8, 2022, 1:03 PM IST

Untitled-1

ಜಗತ್ತು ಸೃಷ್ಟಿಯಾದಾಗಿನಿಂದಲೂ ಮನುಷ್ಯರು ಮತ್ತು ಪ್ರಾಣಿಗಳ ನಡುವೆ ಒಂದು ಬೇರ್ಪಡಿಸಲಾಗದ ನಂಟು, ಸಂಬಂಧ, ಒಡನಾಟವಿದೆ. ಅನೇಕ ಸಂದರ್ಭಗಳಲ್ಲಿ ಇದು ಬೇರೆ ಬೇರೆ ರೂಪಗಳಲ್ಲಿ ಪ್ರಕಟವಾಗುತ್ತಲೇ ಇರುತ್ತದೆ. ಅದರಲ್ಲೂ ಮನುಷ್ಯ ಮತ್ತು ನಾಯಿಯ ನಡುವಿನ ಭಾವನಾತ್ಮಕ ಸಂಬಂಧ ಇನ್ನೂ ವಿಶೇಷವಾದದ್ದು.

ಪುರಾಣ-ಪುಣ್ಯಕಥೆಗಳು, ಇತಿಹಾಸದ ಪುಟಗಳಿಂದ ಹಿಡಿದು ಇಂದಿನ ಸ್ಮಾರ್ಟ್‌ಪೋನ್‌ ಜಮಾನದವರೆಗೂ ಮನುಷ್ಯ ಮತ್ತು ನಾಯಿಯ ನಡುವಿನ ಸಂಬಂಧ ಸಾರುವ ಲೆಕ್ಕವಿಲ್ಲದಷ್ಟು ನಿದರ್ಶನಗಳು, ದೃಶ್ಯಗಳು ನಮ್ಮ ಕಣ್ಣ ಮುಂದೆಯೇ ಪ್ರತಿನಿತ್ಯ ನಡೆಯುತ್ತಲೇ ಇರುತ್ತದೆ. ಹೀಗೆ ನಮ್ಮ ನಡುವೆಯೇ ನಡೆಯುವ ಮನುಷ್ಯ ಮತ್ತು ನಾಯಿಯ ನಡುವಿನ ಬಾಂಧವ್ಯವನ್ನು ತೆರೆದಿಡುವ ಸಿನಿಮಾವೇ “777 ಚಾರ್ಲಿ’.

ಸ್ವತಃ “777 ಚಾರ್ಲಿ’ ಸಿನಿಮಾದ ನಾಯಕ ನಟ ರಕ್ಷಿತ್‌ ಶೆಟ್ಟಿ ಮತ್ತು ಚಿತ್ರತಂಡವೇ ಹೇಳುವಂತೆ, “”777 ಚಾರ್ಲಿ’ ಸಿನಿಮಾದಲ್ಲಿ ಹೀರೋ ಅಂತ ಇಲ್ಲ. ಇಲ್ಲಿ ತೆರೆಮೇಲೆ ಬರುವುದೆಲ್ಲವೂ ಒಂದೊಂದು ಪಾತ್ರಗಳು ಮಾತ್ರ. ಪ್ರತಿ ಪಾತ್ರಕ್ಕೂ ಅದರದ್ದೇ ಆದ ಮಹತ್ವವಿದೆ. ಹಾಗೇನಾದ್ರೂ ಸಿನಿಮಾದಲ್ಲಿ ಇದ್ದರೆ ಅದು “ಚಾರ್ಲಿ’ ಅನ್ನೋ ನಾಯಿ ಮಾತ್ರ. ಯಾಕೆಂದರೆ, ಇಡೀ ಸಿನಿಮಾದ ಕಥೆ ಈ ನಾಯಿಯ ಸುತ್ತ ನಡೆಯುತ್ತದೆ’ ಎನ್ನುವುದು ಚಿತ್ರತಂಡ ಮಾತು.

“ಇದೊಂದು ಸಂಪೂರ್ಣ ಭಾವನಾತ್ಮಕ ಕಥಾಹಂದರದ ಸಿನಿಮಾ. ಹಾಗಾಗಿ ಯಾವುದೇ ಭಾಷೆಯ ಹಂಗಿಲ್ಲದೆ ಎಲ್ಲ ಪ್ರೇಕ್ಷಕರಿಗೂ ಸಿನಿಮಾ ಕನೆಕ್ಟ್ ಆಗುತ್ತದೆ. ಎಲ್ಲರ ಮನಮುಟ್ಟುವಂಥ ಸಿನಿಮಾ ಮಾಡಿದ್ದೇವೆ ಎಂಬ ನಂಬಿಕೆ ಇದೆ. ಈಗಾಗಲೇ ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾಮಾನ್ಯವಾಗಿ ಇಡೀ ಸಿನಿಮಾದಲ್ಲಿ ಕೇವಲ ಮನುಷ್ಯರೇ ಇದ್ದಾಗ ನಮಗೆ ಬೇಕಾದಂತೆ ಶೆಡ್ಯೂಲ್‌ ಮಾಡಿಕೊಂಡು ಶೂಟಿಂಗ್‌ ಮಾಡಬಹುದು. ಪ್ಲಾನ್‌ ಪ್ರಕಾರ ಶೂಟಿಂಗ್‌ ಮಾಡಿ ಮುಗಿಸಬಹುದು. ಆದ್ರೆ “777 ಚಾರ್ಲಿ’ ಸಿನಿಮಾ ಹಾಗಲ್ಲ. ಇಡೀ ಸಿನಿಮಾದ ಕಥೆ ಒಂದು ನಾಯಿಯ ಸುತ್ತ ನಡೆಯುತ್ತದೆ. ಸಿನಿಮಾದಲ್ಲಿ ನಾಯಕ ರಕ್ಷಿತ್‌ ಶೆಟ್ಟಿ ಎಷ್ಟು ಮುಖ್ಯವೋ, ಚಾರ್ಲಿ (ನಾಯಿ) ಕೂಡ ಅಷ್ಟೇ ಮುಖ್ಯವಾಗಿತ್ತು. ನಮ್ಮ ಸಿನಿಮಾದ ಸ್ಕ್ರಿಪ್ಟ್ ಫೈನಲ್‌ ಆದ ನಂತರ ಸಿನಿಮಾದಲ್ಲಿ ಟಾಸ್ಕ್ ಮಾಡುವಂಥ ನಾಯಿಯೊಂದು ನಮಗೆ ಬೇಕಾಗಿತ್ತು. ಆ ನಾಯಿಯ ಹುಡುಕಾಟಕ್ಕೇ ತಿಂಗಳುಗಳ ಕಾಲ ಸಮಯ ಹಿಡಿಯಿತು. ನಮಗೆ ಬೇಕಾದಂಥ ನಾಯಿ ಸಿಕ್ಕ ತಕ್ಷಣ ಅದಕ್ಕೆ ಟ್ರೈನಿಂಗ್‌ ಮಾಡಬೇಕಿತ್ತು. ಆ ಟ್ರೈನಿಂಗ್‌ಗಾಗಿ ಮತ್ತಷ್ಟು ಸಮಯ ಹಿಡಿಯಿತು. ಹೀಗೆ, ಕೇವಲ ನಾಯಿಯ ಹುಡುಕಾಟ ಮತ್ತು ಅದರ ಟ್ರೈನಿಂಗ್‌ ಗಾಗಿ ವರ್ಷಗಳೇ ಬೇಕಾಯ್ತು’ ಎಂದು ಸಿನಿಮಾ ಸಾಕಷ್ಟು ಸಮಯ ತೆಗೆದುಕೊಂಡಿರುವುದರ ಹಿಂದಿನ ಕಾರಣಕ್ಕೆ ವಿವರಣೆ ಕೊಡುತ್ತಾರೆ ನಿರ್ದೇಶಕ ಕಿರಣ್‌ ರಾಜ್‌.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.