Paru Parvathy Movie: ಇನ್ಫಿನಿಟಿ ರೋಡ್‌ನ‌ಲ್ಲಿ ಪಾರ್ವತಿ!


Team Udayavani, Oct 3, 2024, 6:40 PM IST

14

ʼಪಾರು ಪಾರ್ವತಿ’ ಎಂಬ ಸಿನಿಮಾ ಮೂಲಕ ನಟಿ ದೀಪಿಕಾ ದಾಸ್‌ ಮತ್ತೂಮ್ಮೆ ಹಿರಿತೆರೆಗೆ ಬರುತ್ತಿದ್ದಾರೆ. ಈ ಸಿನಿಮಾವನ್ನು ಪಿ.ಬಿ.ಪ್ರೇಮನಾಥ್‌ ನಿರ್ಮಿಸುತ್ತಿದ್ದು, ರೋಹಿತ್‌ ಕೀರ್ತಿ ನಿರ್ದೇಶನವಿದೆ.

ಚಿತ್ರದಲ್ಲಿ ದೀಪಿಕಾ ದಾಸ್‌, ಪೂನಂ ಸರ್‌ ನಾಯಕ್‌ ಹಾಗೂ ಫ‌ವಾಜ್‌ ಅಶ್ರಫ್ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದೆ. ಇತ್ತೀಚೆಗೆ ಈ ಚಿತ್ರದ ಫ‌ಸ್ಟ್‌ ಲುಕ್‌ ಬಿಡುಗಡೆಯಾಗಿದೆ. ಈ ಪೋಸ್ಟರ್‌ಗೆ ಇನ್ಫಿನಿಟಿ ರೋಡ್‌ ಎಂಬ ಹೆಸರಿಡಲಾಗಿದೆ. ಟ್ರಾವೆಲ್, ಅಡ್ವೆಂಚರ್‌ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರದ ಫ‌ಸ್ಟ್‌ ಲುಕ್‌ ಪೋಸ್ಟರ್‌ ಅನ್ನು ಪ್ರಕೃತಿಯ ಮಡಿಲಲ್ಲೇ ಬಿಡುಗಡೆ ಮಾಡಿರುವುದು ವಿಶೇಷ.

ನಿರ್ದೇಶಕ ರೋಹಿತ್‌ ಕೀರ್ತಿ ಅವರಿಗೆ ಇದು ಚೊಚ್ಚಲ ಚಿತ್ರ. ಚಿತ್ರದ ಬಗ್ಗೆ ಮಾತನಾಡುವ ರೋಹಿತ್‌, “ಇದೊಂದು ಅಡ್ವೆಂಚರ್ಸ್‌ ಮತ್ತು ಪ್ರವಾಸ ಕಥನ. ಬೆಂಗಳೂರು, ಗೋವಾ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಉತ್ತರಾಖಂಡ್‌ ನಲ್ಲಿ ಚಿತ್ರೀಕರಣ ನಡೆದಿದೆ. ಮೂರು ಮುಖ್ಯ ಪಾತ್ರಗಳ ಸುತ್ತ ಸಿನಿಮಾ ಕಥೆ ಸಾಗುತ್ತದೆ. ಪಾಯಲ್‌ ಎಂಬ ಪಾತ್ರದಲ್ಲಿ ದೀಪಿಕಾ ದಾಸ್‌ ಕಾಣಿಸಿಕೊಂಡಿದ್ದಾರೆ. ನಿಜ ಜೀವನದಲ್ಲೂ ಅಡ್ವೆಂಚರ್ಸ್‌ ಹಾಗೂ ಜರ್ನಿಯಲ್ಲಿ ಆಸಕ್ತಿಯಿರುವ ದೀಪಿಕಾ ದಾಸ್‌ ಅವರಿಗೆ ಇದು ಹೇಳಿ ಮಾಡಿಸಿದ ಪಾತ್ರ. ಈವರೆಗೂ ನೀವು ನೋಡಿರದ ದೀಪಿಕಾ ದಾಸ್‌ ಅವರನ್ನು ಈ ಚಿತ್ರದಲ್ಲಿ ನೋಡಬಹುದು’ ಎನ್ನುತ್ತಾರೆ.

“ನನಗೆ ಮೊದಲಿನಿಂದಲೂ ಪ್ರವಾಸ ಹಾಗೂ ಅಡ್ವೆಂಚರ್ಸ್‌ನಲ್ಲಿ ಆಸಕ್ತಿ. ಈ ಚಿತ್ರದಲ್ಲಿ ನಾನು ಏಕಾಂಗಿ ಸಂಚಾರಿ. ಪಾಯಲ್‌ ನನ್ನ ಪಾತ್ರದ ಹೆಸರು. ಪ್ರಯಾಣದಲ್ಲೇ ಚಿತ್ರದ ಹೆಚ್ಚು ಕಥೆ ನಡೆಯುತ್ತದೆ. ಈ ಚಿತ್ರಕ್ಕಾಗಿ ನಾನು ಹತ್ತು ಕೆಜಿ ತೂಕ ಇಳಿಸಿಕೊಂಡಿ ದ್ದೇನೆ ಹಾಗೂ ಕೂದಲು ಗಿಡ್ಡ ಮಾಡಿಕೊಂಡಿದ್ದೇನೆ. ಈ ಚಿತ್ರದಲ್ಲಿ ನಮ್ಮಷ್ಟೇ ಮುಖ್ಯ ಪಾತ್ರ ವಹಿಸಿರುವುದು ಚಿತ್ರದಲ್ಲಿ ನಾವು ಸಂಚರಿ ಸಿರುವ ಕಾರು’ ಎನ್ನುವುದು ನಟಿ ದೀಪಿಕಾ ದಾಸ್‌ ಮಾತು. ಚಿತ್ರದಲ್ಲಿ ನಟಿಸಿರುವ ಪೂನಂ ನಾಯಕ್‌, ಫ‌ವಾಜ್‌ ನಟಿಸಿದ್ದಾರೆ.

ಟಾಪ್ ನ್ಯೂಸ್

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

WhatsApp Image 2024-10-03 at 20.30.52

Mangaluru ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ

1-asasas

Bengaluru; ಯುವತಿಗೆ ತೀರಾ ಅವಾಚ್ಯ ನಿಂದನೆ: ಆಟೋ ಚಾಲಕ ಪೊಲೀಸ್ ವಶಕ್ಕೆ

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Zebra Movie:  ಡಾಲಿ ‘ಜೀಬ್ರಾ’ಗೆ ಶಿವಣ್ಣ ಸಾಥ್‌

Zebra Movie: ಡಾಲಿ ‘ಜೀಬ್ರಾ’ಗೆ ಶಿವಣ್ಣ ಸಾಥ್‌

Bhairadevi Movie: ಇಂದು ಭೈರಾದೇವಿ ತೆರೆಗೆ

Bhairadevi Movie: ಇಂದು ಭೈರಾದೇವಿ ತೆರೆಗೆ

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

jaaa

BBK11: ಆಚೆ ಕಡೆ ಹೋಗಿ ಬಿಗ್ ಬಾಸ್ ಮುಖವಾಡವನ್ನು ಬಯಲು ಮಾಡ್ತೇನೆ ಎಂದ ಜಗದೀಶ್

023

Sandalwood: ಶೀಘ್ರಮೇವ ಗೆಲುವು ಪ್ರಾಪ್ತಿರಸ್ತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

sand

Kappettu: ಮರಳು ಅಕ್ರಮ ಸಾಗಾಟ; ವಶಕ್ಕೆ

accident

Mangaluru: ಟಿಪ್ಪರ್‌ ಢಿಕ್ಕಿ; ಕೋಸ್ಟ್‌ಗಾರ್ಡ್‌ ಸಿಬಂದಿಗೆ ಗಂಭೀರ ಗಾಯ

4

Padubidri: ಅಕ್ರಮ ಸಾಗಿಸುತ್ತಿದ್ದ ದನ, ಕರು ರಕ್ಷಣೆ; ಇಬ್ಬರ ಬಂಧನ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

WhatsApp Image 2024-10-03 at 20.30.52

Mangaluru ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.