ಇಂದು ಪಾರ್ವತಮ್ಮ ಟ್ರೇಲರ್‌ ಬಿಡುಗಡೆ

ಮೇ.24 ರಿಂದ ಹರಿಪ್ರಿಯಾ ತನಿಖೆ ಶುರು

Team Udayavani, May 14, 2019, 3:00 AM IST

parvatamma-(1)

ಇತ್ತೀಚೆಗಷ್ಟೇ ನಟ ಶ್ರೀಮುರಳಿ ಅವರು ಬಿಡುಗಡೆ ಮಾಡಿದ್ದ ಹರಿಪ್ರಿಯಾ ಅಭಿನಯದ “ಡಾಟರ್‌ ಅಫ್ ಪಾರ್ವತಮ್ಮ’ ಚಿತ್ರದ ಲಿರಿಕಲ್‌ ವಿಡಿಯೋಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ. ಅದರ ಬೆನ್ನಲ್ಲೇ ಚಿತ್ರತಂಡ ಮೇ.14 (ಇಂದು) ಚಿತ್ರದ ಟ್ರೇಲರ್‌ ಬಿಡುಗಡೆ ಮಾಡುತ್ತಿದೆ. ಈ ಚಿತ್ರಕ್ಕೆ ಗೀತೆಯೊಂದನ್ನು ರಚಿಸಿದ್ದ ನಟ ಧನಂಜಯ್‌ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡುತ್ತಿದ್ದಾರೆ.

ಪಿಆರ್‌ಕೆ ಯುಟ್ಯೂಬ್‌ ಚಾನೆಲ್‌ನಲ್ಲಿ ಮಧ್ಯಾಹ್ನ ಟ್ರೇಲರ್‌ ಅಪ್‌ಲೋಡ್‌ ಆಗಲಿದೆ. ಎನರ್ಜಿಟಿಕ್‌ ಟೈಟಲ್‌ನ ಚಿತ್ರ ಇದಾಗಿರುವುದರಿಂದ ಪಾರ್ವತಮ್ಮ ಪಾತ್ರದಲ್ಲಿ ಸುಮಲತಾ ಅಂಬರೀಶ್‌ ಕಾಣಿಸಿಕೊಂಡಿರುವುದು ಚಿತ್ರಕ್ಕೆ ಇನ್ನಷ್ಟು ತೂಕ ಹೆಚ್ಚಿದೆ ಎಂಬುದು ಚಿತ್ರತಂಡದ ಹೇಳಿಕೆ.

“ಚಿತ್ರದಲ್ಲಿ ಪಾರ್ವತಮ್ಮನ ಮಗಳಾಗಿ ಹರಿಪ್ರಿಯಾ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಅವರ 25 ನೇ ಚಿತ್ರ ಎಂಬುದು ವಿಶೇಷ. ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಕಥಾಹಂದರ ಹೊಂದಿದ್ದು, ಹರಿಪ್ರಿಯಾ ಅವರು ಇದೇ ಮೊದಲ ಬಾರಿಗೆ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಅಷ್ಟೇ ಅಲ್ಲ, ಅವರಿಲ್ಲಿ ಭರ್ಜರಿ ಸ್ಟಂಟ್ಸ್‌ ಕೂಡ ಮಾಡಿದ್ದಾರೆ.

ಆರ್‌ಎಕ್ಸ್‌ 100 ಬೈಕ್‌ ಓಡಿಸುವುದರ ಜೊತೆಗೆ ರೌಡಿಗಳನ್ನು ಕ್ರಿಕೆಟ್‌ ಮೈದಾನದಲ್ಲಿ ಕ್ರಿಕೆಟ್‌ ಬ್ಯಾಟ್‌ ಹಿಡಿದು ಹಿಗ್ಗಾಮುಗ್ಗಾ ಚಚ್ಚಿರುವುದು ಸಿನಿಮಾದ ಹೈಲಟ್‌’ ಎನ್ನುವ ನಿರ್ದೇಶ ಶಂಕರ್‌, ಈಗಾಗಲೇ ಚಿತ್ರದ ಲಿರಿಕಲ್‌ ವಿಡಿಯೋ ನೋಡಿ ಶ್ರೀಮುರಳಿ, ಪ್ರೇಮ್‌, ಅಭಿಷೇಕ್‌ ಅಂಬರೀಶ್‌, ಪವನ್‌ ಒಡೆಯರ್‌, ಗುರುನಂದನ್‌ ಹಾಗೂ ತೆಲುಗು ನಟ ಸುಮನ್‌ ಸೇರಿದಂತೆ ಹಲವರು ನಟ,ನಿರ್ದೇಶಕರು ಮೆಚ್ಚಿಕೊಂಡಿದ್ದಾರೆ ಎನ್ನುತ್ತಾರೆ.

ಇದು ಪಕ್ಕಾ ಫ್ಯಾಮಿಲಿ ಎಂಟರ್‌ಟೈನರ್‌ ಚಿತ್ರ. ಸೆಂಟಿಮೆಂಟ್‌, ಎಮೋಷನ್ಸ್‌, ಲವ್‌, ಆ್ಯಕ್ಷನ್ಸ್‌, ಕಾಮಿಡಿ, ಥ್ರಿಲ್ಲರ್‌ ಎಲ್ಲವೂ ಇಲ್ಲಿದೆ. ಎರಡು ಫೈಟ್ಸ್‌, ಭರ್ಜರಿ ಚೇಸ್‌ ದೃಶ್ಯಗಳಿವೆ. ಅಮ್ಮ-ಮಗಳು ಕಾಂಬಿನೇಷನ್‌ ಚಿತ್ರದ ಹೈಲೈಟ್‌. ಇಲ್ಲಿ ಭಾವನೆಗಳ ಜೊತೆಗೆ ಭಾವುಕ ಅಂಶಗಳೂ ತುಂಬಿಕೊಂಡಿವೆ. ಇದು ಒಂದು ವರ್ಗಕ್ಕೆ ಸೀಮಿತವಾದ ಸಿನಿಮಾವಲ್ಲ, ಕುಟುಂಬ ಸಮೇತ ಬಂದು ನೋಡಬಹುದು.

ಚಿತ್ರ ನೋಡಿದವರಿಗೆ ಒಬ್ಬ ಅಮ್ಮನಿಗೆ ಇಂತಹ ಮಗಳಿರಬೇಕು. ಒಬ್ಬ ಮಗಳಿಗೆ ಇಂತಹ ಅಮ್ಮ ಇರಬೇಕು ಅಂತೆನಿಸದೇ ಇರದು. ಅಷ್ಟೊಂದು ಮೌಲ್ಯಗಳು ತುಂಬಿರುವ ಚಿತ್ರ ಎಂಬುದು ಚಿತ್ರತಂಡದ ಮಾತು. ಮಿಥುನ್‌ ಮುಕುಂದನ್‌ ಸಂಗೀತದಲ್ಲಿ ಎರಡು ಹಾಡುಗಳು ಚಿತ್ರದಲ್ಲಿವೆ. ಅರುಳ್‌ ಕೆ. ಸೋಮುಸುಂದರಂ ಅವರ ಛಾಯಾಗ್ರಹಣವಿದೆ.

ವಿನೋದ್‌ ಸಾಹಸವಿದೆ. ಚಿತ್ರದಲಿ ಸೂರಜ್‌ ಗೌಡ, ಪ್ರಭು, ತರಂಗ ವಿಶ್ವ, ರಾಘವೇಂದ್ರ, ಶ್ರೀಧರ್‌, ಸುಧಿ ಇತರರು ನಟಿಸಿದ್ದಾರೆ. ಚಿತ್ರವನ್ನು ಶಶಿಧರ್‌ ಕೆ.ಎಂ ನಿರ್ಮಿಸಿದ್ದಾರೆ. ಇವರೊಂದಿಗೆ ನಿರ್ಮಾಣದಲ್ಲಿ ಕೃಷ್ಣ, ಮಧು, ಸಂದೀಪ್‌ ಸಾಥ್‌ ನೀಡಿದ್ದಾರೆ. ಮೇ. 24 ರಂದು 150 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪಾರ್ವತಮ್ಮನ ದರ್ಶನವಾಗಲಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.