ಭಿನ್ನಗೆ ಪಾಯಲ್‌ ರಾಧಾಕೃಷ್ಣನ್‌ ನಾಯಕಿ


Team Udayavani, Apr 29, 2018, 11:00 AM IST

Binna.jpg

“ಶುದ್ಧಿ’ ಎಂಬ ಜನಮನ್ನಣೆ ಪಡೆದ ಚಿತ್ರವನ್ನು ನಿರ್ದೇಶಿಸಿದ್ದ ಆದರ್ಶ್‌ ಈಶ್ವರಪ್ಪ, “ಭಿನ್ನ’ ಎಂಬ ಹೊಸ ಚಿತ್ರ ಮಾಡುತ್ತಿರುವುದು ಗೊತ್ತಿರಬಹುದು. ಈಗ ಈ ಚಿತ್ರಕ್ಕೆ ಕಲಾವಿದರ ಆಯ್ಕೆ ಆಗಿದೆ. ಅಷ್ಟೇ ಅಲ್ಲ, ಕಲಾವಿದರ ಫೋಟೋ ಶೂಟ್‌ ಸಹ ಆಗಿದೆ. “ಭಿನ್ನ’ದಲ್ಲಿ ಪ್ರಮುಖವಾಗಿ ನಾಲ್ವರು ಕಲಾವಿದರು ನಟಿಸುತ್ತಿದ್ದು, ಆ ನಾಲ್ವರ ಸುತ್ತ ಈ ಚಿತ್ರ ಸುತ್ತಲಿದೆ.

ಇದು ಸಹ “ಶುದ್ಧಿ’ ತರಹ ಒಂದು ಮಹಿಳಾ ಪ್ರಧಾನ ಚಿತ್ರ. “ಉದಯೋನ್ಮುಖ ನಟಿಯೊಬ್ಬಳಿಗೆ ಒಂದು ಚಿತ್ರದಲ್ಲಿ ಅವಕಾಶ ಸಿಗುತ್ತದೆ. ಆ ಚಿತ್ರದ ಕಥೆಗೂ ಅವಳ ನಿಜಜೀವನಕ್ಕೂ ಒಂದು ಸಂಬಂಧವಿರುತ್ತದೆ. ಆ ಸಂಬಂಧ ಏನು ಎಂಬುದನ್ನು ಚಿತ್ರ ಹೇಳಲಿದೆ. ಇದು ಚಿತ್ರದೊಳಗೊಂದು ಚಿತ್ರದ ಕಥೆ. ಇಲ್ಲಿ ನಾಯಕಿ ಪಾತ್ರ ಬಹಳ ಮುಖ್ಯ.

ಕಾವೇರಿ ಮತ್ತು ದೇವಕಿ ಎಂಬ ಎರಡು ಶೇಡ್‌ಗಳಿರುವ ಈ ಪಾತ್ರವನ್ನ ಪಾಯಲ್‌ ರಾಧಾಕೃಷ್ಣನ್‌ ಮಾಡುತ್ತಿದ್ದಾರೆ. ಮಿಕ್ಕಂತೆ “ಲೂಸಿಯಾ’ ಪವನ್‌ ಅವರ ಪತ್ನಿ ಸೌಮ್ಯ ಜಗನ್ಮೂರ್ತಿ, ಸಿದ್ಧಾರ್ಥ್ ಮಾಧ್ಯಮಿಕ, ಶಶಾಂಕ್‌ ಪುರುಷೋತ್ತಮ್‌ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಮಾಡೆಲಿಂಗ್‌ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಯಲ್‌ ರಾಧಾಕೃಷ್ಣ, ಇದಕ್ಕೂ ಮುನ್ನ ಆದಿತ್ಯ ಅಭಿನಯದ “ಬೆಂಗಳೂರು ಅಂಡರ್‌ವರ್ಲ್ಡ್’ ಚಿತ್ರದಲ್ಲಿ ನಟಿಸಿದ್ದರು. ಮುಂಬೈನಲ್ಲಿ ಮಾಡಲಿಂಗ್‌ ಮಾಡುತ್ತಿರುವ ಪಾಯಲ್‌, “ಭಿನ್ನ’ ಚಿತ್ರದ ಆಡಿಷನ್‌ನಲ್ಲಿ ಭಾಗವಹಿಸಿ, ಆಯ್ಕೆಯಾಗಿದ್ದಾರೆ.

ಕಾವೇರಿ ಹಾಗೂ ದೇವಕಿ ಎಂಬ ಎರಡು ಪಾತ್ರಗಳನ್ನು ಪಾಯಲ್‌ ನಿರ್ವಹಿಸಿದರೆ, ವಿಮಲ ಎಂಬ ಪಾತ್ರವನ್ನು ಸೌಮ್ಯ ಮಾಡುತ್ತಿದ್ದಾರೆ. ಇನ್ನು ಸಿದ್ಧಾರ್ಥ್ ಮತ್ತು ಶಶಾಂಕ್‌, ಸತೀಶ್‌ ಹಾಗೂ ಮೋಹನ್‌ ಎಂಬ ಪಾತ್ರಗಳನ್ನು ಮಾಡುತ್ತಿದ್ದಾರೆ.

ಈ ನಾಲ್ಕೂ ಪಾತ್ರಗಳ ಹೆಸರುಗಳು, ಪುಟ್ಟಣ್ಣ ಅವರ ಚಿತ್ರದ ಪಾತ್ರಗಳ ಹೆಸರಾಗಿದ್ದು, ಆ ಹೆಸರುಗಳನ್ನು ಬಳಸಿಕೊಳ್ಳುವ ಮೂಲಕ ಪುಟ್ಟಣ್ಣ ಕಣಗಾಲ್‌ ಅವರಿಗೆ ಚಿತ್ರವನ್ನು ಅರ್ಪಿಸುತ್ತಿರುವುದಾಗಿ ಹೇಳುತ್ತಾರೆ ಆದರ್ಶ್‌. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುವುದರ ಜೊತೆಗೆ ಸಂಕಲನವನ್ನೂ ಮಾಡಲಿದ್ದಾರೆ ಆದರ್ಶ್‌.

ಯತೀಶ್‌ ವೆಂಕಟೇಶ್‌ ಮತ್ತು ಪರ್ಪಲ್‌ ಆರೋ ಫಿಲ್ಮ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅಂಡ್ರೋ ಆಯಿಲೋ ಅವರ ಛಾಯಾಗ್ರಹಣ ಮತ್ತು ಜೆಸ್ಸಿ ಕ್ಲಿಂಟನ್‌ ಅವರ ಸಂಗೀತವಿದೆ. ಇದೊಂದು ಸೈಕಾಲಜಿಕಲ್‌ ಥ್ರಿಲ್ಲರ್‌ ಚಿತ್ರವಾಗಲಿದ್ದು, ಸಿಂಕ್‌ಸೌಂಡ್‌ನ‌ಲ್ಲೇ ಚಿತ್ರೀಕರಣ ನಡೆಯಲಿದೆ. ಜುಲೈನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಡಿಸೆಂಬರ್‌ ಹೊತ್ತಿಗೆ ಚಿತ್ರದ ಕೆಲಸಗಳು ಮುಗಿಯಲಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.