![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 5, 2021, 9:24 PM IST
ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟಿಸಿರುವ ‘ಪೊಗರು’ ಸಿನಿಮಾ ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ.
ಕಳೆದ ಫೆಬ್ರವರಿ 19 ರಂದು ಬೆಳ್ಳಿತೆರೆ ಮೇಲೆ ಬಿಡುಗಡೆಯಾದ ಈ ಸಿನಿಮಾ ಇದೀಗ ಇದೇ 13 ರಂದು ಕನ್ನಡದ ಉದಯ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಅಂದು ಸಂಜೆ 6 ಗಂಟೆಗೆ ಕಿರುತೆರೆಯಲ್ಲಿ ಖರಾಬು ದುನಿಯಾ ಅನಾವರಣಗೊಳ್ಳಲಿದೆ. ಅದ್ದೂರಿ, ಬಹದ್ದೂರು ಹಾಗೂ ಭರ್ಜರಿ ಸಿನಿಮಾ ನಂತರ ಧ್ರುವ ಸರ್ಜಾ ಅವರು ಪೊಗರು ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಇವರಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಬಣ್ಣ ಹಚ್ಚಿದ್ದಾರೆ. ನಂದ್ ಕಿಶೋರ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಮೂರು ವರ್ಷಗಳ ಕಾಲ ಶೂಟಿಂಗ್ ಮುಗಿಸಿಕೊಂಡು ಬಹುನಿರೀಕ್ಷೆಯೊಂದಿಗೆ ಚಿತ್ರಮಂದಿರಗಳಿಗೆ ಲಗ್ಗೆ ಇಟ್ಟಿದ್ದ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಗಳಿಕೆ ಮಾಡಿತು. ಆದರೆ, ಚಿತ್ರದಲ್ಲಿ ಕೆಲವು ಆಕ್ಷೇಪಾರ್ಹ ದೃಶ್ಯಗಳಿವೆ ಎನ್ನುವ ಕಾರಣಕ್ಕೆ ವಿವಾದಕ್ಕೆ ಸಿಲುಕಿತು. ಚಿತ್ರದ ವಿರುದ್ಧ ಪ್ರತಿಭಟನೆಗಳು ಕೂಡ ನಡೆದವು. ನಂತರ ಸಿನಿಮಾ ನಿರ್ದೇಶಕರು ಕ್ಷಮೆಯಾಚಿಸಬೇಕಾಯಿತು.
ಪ್ರತಿಭಟನೆಗಳ ಬಿಸಿಗೆ ಮಣಿದು ಪೊಗರು ಚಿತ್ರದ ಕೆಲವೊಂದು ದೃಶ್ಯಗಳಿಗೆ ಕತ್ತರಿ ಪ್ರಯೋಗಿಸಿ, ಮರು ಸೆನ್ಸಾರ್ ಗೊಂಡು ಮತ್ತೆ ಬಿಡುಗಡೆಯಾಯಿತು. ಹಿರಿತೆರೆಗೆ ಬಿಡುಗಡೆಯಾಗಿ ಕೆಲವೇ ದಿನಗಳಲ್ಲಿ ಇದೀಗ ಕಿರುತೆರೆಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ.
#Pogaru | April 13th | 6:00 PM
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪಿ.ರಾಮಕೃಷ್ಣ ಶಿವ ಆಗಿ ನಿಮ್ಮ ಮುಂದೆ ಬರ್ತಾ ಇದ್ದಾರೆ ಇದೆ ಏಪ್ರಿಲ್ 13 ರಂದು ಸಂಜೆ 6:30 ಕ್ಕೆ.#UdayaTV #SerialsOnUdayaTV pic.twitter.com/D9jZPBeuxD— udayaTV (@UdayaTV) April 5, 2021
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.