ಪ್ರೇಕ್ಷಕರಿಗೆ ಅಪಥ್ಯವಾಗಿದ್ದು ಸೆನ್ಸಾರ್‌ಗೆ ಪಥ್ಯ ಹೇಗೆ? ವಿವಾದಿತ ದೃಶ್ಯಗಳಿಗೆ ಯಾರು ಹೊಣೆ?


Team Udayavani, Feb 26, 2021, 9:22 AM IST

ಪ್ರೇಕ್ಷಕರಿಗೆ ಅಪಥ್ಯವಾಗಿದ್ದು ಸೆನ್ಸಾರ್‌ಗೆ ಪಥ್ಯ ಹೇಗೆ? ವಿವಾದಿತ ದೃಶ್ಯಗಳಿಗೆ ಯಾರು ಹೊಣೆ?

ಯಾವುದೇ ಒಂದು ಸಿನಿಮಾ ಬಿಡುಗಡೆಯಾಗಿ ತೆರೆಗೆ ಬರಬೇಕೆಂದರೆ, ಮೊದಲು ಅದು ಸೆನ್ಸಾರ್‌ ಸಮಿತಿ ಮುಂದೆ ಪ್ರದರ್ಶನವಾಗುತ್ತದೆ. ನೋಡಿ, ಪರಾಮರ್ಶಿಸಿ, ಕೊನೆಗೆ ಸಮಿತಿ ಸಮ್ಮತಿಸಿ ಸೆನ್ಸಾರ್‌ ಸರ್ಟಿಫಿಕೇಟ್‌ ಕೊಟ್ಟ ನಂತರವಷ್ಟೇ ಆ ಸಿನಿಮಾ ಥಿಯೇಟರ್‌ನಲ್ಲಿ ಪ್ರೇಕ್ಷಕರ ಮುಂದೆ ಬರುತ್ತದೆ. ಇದು ಒಂದು ಸಿನಿಮಾದ ಬಿಡುಗಡೆಯ ಬಗ್ಗೆ ಚಿತ್ರೋದ್ಯಮದವರಿಂದ ಹಿಡಿದು ಜನಸಾಮಾನ್ಯರವರೆಗೆ ಪ್ರತಿಯೊಬ್ಬರಿಗೂ ಗೊತ್ತಿರುವಂಥ ಸಾಮಾನ್ಯ ವಿಷಯ. ಆದರೆ ಇತ್ತೀಚೆಗೆ ಕೆಲವು ಸಿನಿಮಾಗಳು ಬಿಡುಗಡೆಯಾದ ನಂತರ ವಿವಾದ ಸ್ವರೂಪ ಪಡೆದು ಕೊಳ್ಳುತ್ತಿರುವುದನ್ನು ನೋಡಿದರೆ, ಸೆನ್ಸಾರ್‌ ಸಮಿತಿಯ ಈ ಪ್ರಕ್ರಿಯೆಯ ಮೇಲೆಯೇ ಒಮ್ಮೆ ಅನುಮಾನ ಮೂಡುತ್ತದೆ. ಇದಕ್ಕೆ ಸದ್ಯದ ಮಟ್ಟಿಗಿನ ತಾಜಾ ಉದಾಹರಣೆ ಅಂದ್ರೆ “ಪೊಗರು’ ಸಿನಿಮಾ.

ಸುಮಾರು ಮೂರುವರೆ ವರ್ಷಗಳ ಹಿಂದೆಯೇ ಶುರುವಾದ “ಪೊಗರು’ ಸಿನಿಮಾ ಇದೇ ಫೆ. 19ಕ್ಕೆ ತೆರೆಗೆ ಬಂದಿದೆ. ಬಿಡುಗಡೆಗೂ ಒಂದು ವಾರದ ಮುಂಚೆ “ಪೊಗರು’ ಸಿನಿಮಾವನ್ನು ವೀಕ್ಷಿಸಿದ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ “ಯು/ಎ’ ಪ್ರಮಾಣಪತ್ರ ನೀಡಿ ಬಿಡುಗಡೆಗೆ ಅಸ್ತು ಎಂದಿತ್ತು. ಅದರಂತೆ ಚಿತ್ರತಂಡ “ಪೊಗರು’ ಪ್ರೇಕ್ಷಕರ ಮುಂದೆ ತಂದಿತ್ತು. ಆದರೆ ಸೆನ್ಸಾರ್‌ ಪರೀಕ್ಷೆಯಲ್ಲಿ ಪಾಸಾಗಿದ್ದ “ಪೊಗರು’ ಥಿಯೇಟರ್‌ನಲ್ಲಿ ವಿವಾದಕ್ಕೆ ಕಾರಣವಾಯಿತು. ಬ್ರಾಹ್ಮಣ ಸಮುದಾಯಕ್ಕೆ ಅವಹೇಳನ ಮಾಡುವಂಥ ದೃಶ್ಯಗಳು, ಸಂಭಾಷಣೆಗಳು ಸಿನಿಮಾದಲ್ಲಿದೆ ಎಂಬ ವಿವಾದ ಇಡೀ ಚಿತ್ರತಂಡವನ್ನೇ ಹೈರಾಣಾಗಿಸಿತು. ಕೊನೆಗೂ ಪ್ರತಿಭಟನೆಗೆ ಮಣಿದ ಚಿತ್ರತಂಡ, “ಪೊಗರು’ ಚಿತ್ರದ ವಿವಾದಿತ ದೃಶ್ಯಗಳಿಗೆ ಕತ್ತರಿ ಹಾಕಲು ಸಮ್ಮತಿಸಿ, ಅಂತೂ ವಿವಾದಕ್ಕೆ ಅಂತ್ಯ ಹಾಡಿತು.

ಇದನ್ನೂ ಓದಿ:ನೋಡುಗರ ಅಭಿರುಚಿಗೆ ತಕ್ಕಂತೆ ಆರು ಚಿತ್ರಗಳು ಈ ವಾರ ತೆರೆಗೆ

ಆದರೆ “ಪೊಗರು’ ವಿವಾದದ ಬಗ್ಗೆ ನಡೆದ ಪ್ರತಿಭಟನೆಯಲ್ಲಿ, ಅನೇಕರು ಸೆನ್ಸಾರ್‌ ಮಂಡಳಿಯ ವಿರುದ್ದವೂ ಹರಿಹಾಯ್ದರು. ಸೆನ್ಸಾರ್‌ ಸರಿಯಾಗಿ ಕೆಲಸ ಮಾಡಿದ್ದರೆ, ಇಂಥ ಪ್ರತಿಭಟನೆಯ ಪ್ರಮೇಯವೇ ಬರುತ್ತಿರಲಿಲ್ಲ, ಚಿತ್ರತಂಡಕ್ಕೂ ತೊಂದರೆಯಾಗುತ್ತಿರಲಿಲ್ಲ ಎಂಬ ಮಾತುಗಳೂ ಕೇಳಿಬಂದವು. ಜನ ಸಾಮಾನ್ಯ ಪ್ರೇಕ್ಷಕನಿಗೆ ಅಪಥ್ಯ ಎನಿಸುವ ಸನ್ನಿವೇಶಗಳು, ಸಂಭಾಷಣೆಗಳು ಸೆನ್ಸಾರ್‌ಗೆ ಸಹ್ಯವಾಗಿದ್ದಾದರೂ ಹೇಗೆ ಎಂಬ ಪ್ರಶ್ನೆಯೂ ಈ ವೇಳೆ ಎದುರಾಯಿತು.

“ಪೊಗರು’ ಚಿತ್ರದ ಸೆನ್ಸಾರ್‌ ಬಗ್ಗೆ ಮಾತನಾಡುವ ನಿರ್ದೇಶಕ ನಂದಕಿಶೋರ್‌, “ನಾನು ಸೆನ್ಸಾರ್‌ ನಿಯಮಗಳ ಪ್ರಕಾರವೇ “ಪೊಗರು’ ಸಿನಿಮಾವನ್ನು ಸೆನ್ಸಾರ್‌ ಮಾಡಿಸಿದ್ದೇವೆ. ಐದು ಮಂದಿ ಸೆನ್ಸಾರ್‌ ಸದಸ್ಯರು ನಮ್ಮ ಸಿನಿಮಾದ ಸ್ಕ್ರಿಪ್ಟ್ ಕೂಡ ಕೈಯಲ್ಲಿ ಹಿಡಿದುಕೊಂಡು ಸಿನಿಮಾ ನೋಡಿದ್ದಾರೆ. ಸೆನ್ಸಾರ್‌ ವೇಳೆ ಈ ಕಮಿಟಿ ಸೂಚಿಸಿದಂತೆಯೇ ಕೆಲವು ಮ್ಯೂಟ್ಸ್‌, ಸಣ್ಣ ಪುಟ್ಟ ಕಟ್ಸ್‌ ಬದಲಾವಣೆಗಳನ್ನು ಮಾಡಿಯೇ ಸಿನಿಮಾ ರಿಲೀಸ್‌ ಮಾಡಿದ್ದೇವೆ. ಸೆನ್ಸಾರ್‌ ಏನು ಒಪ್ಪಿತ್ತೋ ಅದರಂತೆ ಸಿನಿಮಾ ಸ್ಕ್ರೀನಿಂಗ್‌ ಆಗಿದೆ. ಆದರೆ ಸೆನ್ಸಾರ್‌ ಗಮನಕ್ಕೆ ಬಾರದಿರುವ ವಿಷಯ ಜನರ ಗಮನಕ್ಕೆ ಬಂದು ವಿವಾದ ತೆಗೆದುಕೊಳ್ಳುತ್ತದೆ ಅನ್ನೋದು ನಮಗೆ ಕಾಕತಾಳೀಯ ಅನಿಸುತ್ತದೆ’ ಎನ್ನುತ್ತಾರೆ.

ದಶಕಗಳ ಅನುಭವವಿರುವ, ಸಮಾಜದ ಬೇರೆ ಬೇರೆ ಕ್ಷೇತ್ರಗಳಿಂದ ಆಯ್ಕೆಯಾಗಿರುವ, ಸೂಕ್ಷ್ಮ ಸಂಗತಿಗಳನ್ನು ಬೇರೆಯದೇ ಆಯಾಮದ ಮೂಲಕ ಗುರುತಿಸಿ, ಗ್ರಹಿಸಬಲ್ಲ ಹತ್ತಾರು ಸದಸ್ಯರು ಇರುವಂಥ ಸೆನ್ಸಾರ್‌ ಮಂಡಳಿ, ಇಷ್ಟೊಂದು ದೊಡ್ಡ ವಿವಾದಕ್ಕೆ ಕಾರಣವಾದಂತಹ ಸಂಗತಿಗಳನ್ನು ನಿರ್ಲಕ್ಷಿಸಿದ್ದಾದರೂ ಹೇಗೆ? ಅಥವಾ ಸೆನ್ಸಾರ್‌ ಮಂಡಳಿ ಕೇವಲ ತಾಂತ್ರಿಕವಾಗಿ ಸಿನಿಮಾಗಳಿಗೆ ಸರ್ಟಿಫಿಕೇಟ್‌ ಕೊಟ್ಟು ಕೈತೊಳೆದುಕೊಳ್ಳುತ್ತದೆಯಾ? ಎಂಬ ಪ್ರಶ್ನೆಯನ್ನೂ ಅನೇಕರು ಮುಂದಿಡುತ್ತಿದ್ದಾರೆ.

ಇದನ್ನೂ ಓದಿ:ಐಸ್ ಕ್ರೀಮ್ ಸೇವಿಸಿ ಮಗ,ಸಹೋದರಿ ಸಾವು:ನೈಜ ಕಾರಣ ಗೊತ್ತಿದ್ರೂ ತಾಯಿ ಸುಮ್ಮನಿದ್ದಿದ್ದೇಕೆ ?  

ಇನ್ನು ಈ ಬಗ್ಗೆ ಮಾತನಾಡುವ ಸದ್ಯಕೆ ಬಿಡುಗಡೆಗೆ ಸಿದ್ಧವಿರುವ “ಕೋಟಿಗೊಬ್ಬ-3′ ಚಿತ್ರದ ನಿರ್ಮಾಪಕ ಸೂರಪ್ಪ ಬಾಬು, “ಸಿನಿಮಾವನ್ನು ಸೆನ್ಸಾರ್‌ ಮತ್ತು ಕಾಮನ್‌ ಆಡಿಯನ್ಸ್‌ ಇಬ್ಬರೂ ಕೂಡ ತಮ್ಮದೇ ಆದ ದೃಷ್ಟಿಕೋನದಲ್ಲಿ ನೋಡುತ್ತಾರೆ. ಹಾಗಾಗಿ ಅವರಿಗೆ ಸರಿ ಅನಿಸಿದ್ದು, ಇವರಿಗೆ ಸರಿ ಅನಿಸದೇ ಇರಬಹುದು. ಆದರೂ ಸೆನ್ಸಾರ್‌ನವರು ಮೊದಲು ಸಿನಿಮಾ ನೋಡುವುದರಿಂದ, ಸಿನಿಮಾದ ಎಲ್ಲ ಅಂಶಗಳೂ ಮೊದಲು ಅವರ ಗಮನಕ್ಕೇ ಬರುತ್ತದೆ. ಈ ವೇಳೆ ಆದಷ್ಟು ಸಿನಿಮಾದ ಸೂಕ್ಷ್ಮ ಸಂಗತಿಗಳನ್ನು ಗಮನವಿಟ್ಟು ನೋಡಿದರೆ, ಅದರಿಂದ ಮುಂದಾ ಗ ಬಹು ದಾದ ವಾದ- ವಿವಾದ ಗಳನ್ನು ಅಲ್ಲೇ ತಡೆಯುವ ಸಾಧ್ಯೆ ಇರುತ್ತದೆ. ಇದರಿಂದ ಮುಂದೆ ಅನಗತ್ಯ ಗೊಂದಲಗಳಿಗೆ ಆಸ್ಪದವಿರುವುದಿಲ್ಲ’ ಎನ್ನುತ್ತಾರೆ.

ಒಟ್ಟಾರೆ ಇತ್ತೀಚಿನ ವರ್ಷಗಳಲ್ಲಿ ಬಿಡುಗಡೆಯಾದ ಬಳಿಕ ವಿವಾದ ಪಡೆದು ಕೊಂಡಿರುವ ಅನೇಕ ಸಿನಿಮಾಗಳನ್ನು ನೋಡಿದರೆ ಅಂತಿಮವಾಗಿ ಎಲ್ಲರೂ ಸೆನ್ಸಾರ್‌ ಕಡೆಗೆ ಬೊಟ್ಟು ಮಾಡುತ್ತಿರುವುದಂತೂ ನಿಜ. ಇದು ನಿಜಕ್ಕೂ ಸೆನ್ಸಾರ್‌ ವಿಶ್ವಾಸಾರ್ಹತೆಯ ಪ್ರಶ್ನೆಯಾಗಿದ್ದು, ಈ ನಿಟ್ಟಿನಲ್ಲಿ ಸೆನ್ಸಾರ್‌ ಮಂಡಳಿ ಆದಷ್ಟು ಎಚ್ಚರಿಕೆ ಮತ್ತು ಸೂಕ್ಷ್ಮತೆಯಿಂದ ಹೆಜ್ಜೆ ಇಡುವುದು ಭವಿಷ್ಯದ ದೃಷ್ಟಿಯಿಂದ ಒಳಿತು.

 ಜಿ.ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.