ಸಾರ್ವಜನಿಕರಿಗೆ ಪವರ್ ಸಾಂಗ್

ಏನು ಸ್ವಾಮಿ ಮಾಡೋಣ... ವಿಡಿಯೋ ಬಂತು

Team Udayavani, Nov 7, 2019, 5:03 AM IST

Sarvajanikaralli-Vinanthi

ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ’ ಚಿತ್ರದ “ದೇವರೆ ದೇವರೆ…’ ವಿಡಿಯೋ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಎಲ್ಲೆಡೆ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರದ ಮತ್ತೂಂದು ಮೇಕಿಂಗ್‌ ಸಾಂಗ್‌ವೊಂದು ಬಿಡುಗಡೆಯಾಗಿದೆ.

ಹೌದು, ಪುನೀತ್‌ ರಾಜಕುಮಾರ್‌ ಅವರು ಹಾಡಿರುವ “ಏನು ಸ್ವಾಮಿ ಮಾಡೋಣ, ಆಗಿಹೋಯ್ತು ಅನುಮಾನ, ಹಾಕಿ ಬಿಟ್ಲು ಕಿಟಕಿ ಬಾಗ್ಲನ್ನಾ, ಏನು ಸ್ವಾಮಿ ಮಾಡೋಣ, ಯಾರಿಗೇಳಿ ಕಷ್ಟನಾ ಒಂಟಿ ಮಾಡ್ತು ಲೋಕ ನನ್ನನ್ನಾ, ಆಸೆ ಇನ್ನು ಕನಸು, ಆಸೆ ಬೀಳ್ಳೋ ವಯಸು, ಯಾಕೆ ದೇವ್ರೆ ಮುನಿಸು, ಮಾಡಿಬಿಡು ಪಾಸು, ಪ್ರೀತಿ ಉಳಿಸು…’ ಎಂಬ ಹಾಡಿಗೆ ಧ್ವನಿಯಾಗಿದ್ದಾರೆ.

ಆನಂದ್‌ ಆಡಿಯೋ ಯುಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿರುವ ಈ ಮೇಕಿಂಗ್‌ ವಿಡಿಯೋ ಹಾಡಿಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಬಂದಿದೆ.  ಹಾಡಿಗೆ ಧ್ವನಿಯಾದ ಪುನೀತ್‌ರಾಜಕುಮಾರ್‌, ಚಿತ್ರತಂಡಕ್ಕೆ ಶುಭಹಾರೈಸಿ, ಸಿನಿಮಾ ಗೆಲ್ಲಲಿ ಎಂದು ಹರಸಿದ್ದಾರೆ. ಮಿಥುನ್‌ ಮುಕುಂದನ್‌ ಸಂಗೀತ ನೀಡಿರುವ ಈ ಹಾಡಿಗೆ ನಾಗೇಂದ್ರ ಪ್ರಸಾದ್‌ ಅವರು ಸಾಹಿತ್ಯ ಬರೆದಿದ್ದಾರೆ. ಹೀರೋ ರಿಷಿ ಅವರಿಗೆ ಇದು ನಾಲ್ಕನೇ ಸಿನಿಮಾ.

ಇನ್ನು, ಈ ಚಿತ್ರಕ್ಕೆ “ಗುಳ್ಟು’ ಖ್ಯಾತಿಯ ಜನಾರ್ದನ್‌ ಚಿಕ್ಕಣ್ಣ ಹಾಗು ಎನ್‌.ಹರಿಕೃಷ್ಣ ಕಥೆ ಮತ್ತು ಚಿತ್ರಕಥೆ ಒದಗಿಸಿದ್ದಾರೆ. ಅನೂಪ್‌ ರಾಮಸ್ವಾಮಿ ನಿರ್ದೇಶನ ಮಾಡಿದ್ದಾರೆ. ಪ್ರಶಾಂತ್‌ರೆಡ್ಡಿ ಎಸ್‌., ದೇವರಾಜ್‌ ಆರ್‌., ಜನಾರ್ದನ್‌ ಚಿಕ್ಕಣ್ಣ ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ “ದೇವರೆ ದೇವರೆ..’ ಹಾಡನ್ನು ರ್ಯಾಪರ್‌ ಅಲೋಕ್‌ ಹಾಗು ನಿರ್ದೇಶಕ ಅನೂಪ್‌ ಬರೆದಿದ್ದರು. ಆ ಹಾಡಿಗೆ ಅಲೋಕ್‌ ಹಾಗು ಅರ್ಪಿತ್‌ ಧ್ವನಿಯಾಗಿದ್ದರು.

ಚೆನ್ನೈ ಮೂಲದ ಶ್ರೀಧರ್‌ ಈ ಹಾಡಿಗೆ ನೃತ್ಯ ಸಂಯೋಜಿಸಿದ್ದಾರೆ. “ಇದೊಂದು ಕಾಮಿಡಿ ಥ್ರಿಲ್ಲರ್‌ ಶೈಲಿಯ ಚಿತ್ರವಾಗಿದ್ದು, ನಾಯಕ ತನ್ನ ಜೀವನದಲ್ಲಿ ಗೊತ್ತಿಲ್ಲದಂತೆ ಸಮಸ್ಯೆಯೊಂದರಲ್ಲಿ ಸಿಲುಕಿಕೊಳ್ಳುತ್ತಾನೆ. ಅದರಿಂದ ಹೊರಬರಲು ಹೇಗೆಲ್ಲ ಹೆಣಗಾಡುತ್ತಾನೆ. ಅಂತಿಮವಾಗಿ ಏನಾಗುತ್ತದೆ? ಎಂಬುದುದೇ ಚಿತ್ರದ ಸಾರಾಂಶ. ನಾಯಕ ರಿಷಿ ಅವರಿಲ್ಲಿ ಅಂತಿಮ ವರ್ಷದ ಎಂಬಿಎ ಓದುತ್ತಿರುವ ಹುಡುಗನ ಪಾತ್ರ ನಿರ್ವಹಿಸಿದ್ದಾರೆ.

ನಾಯಕಿ ಧನ್ಯಾ ಅವರದು ಎಂಬಿಎ ಓದುತ್ತಿರುವ ಸಂಪ್ರದಾಯಸ್ಥ ಬ್ರಾಹ್ಮಣ ಮನೆತನದ ಹುಡುಗಿಯ ಪಾತ್ರವಂತೆ. ಚಿತ್ರದಲ್ಲಿ ರಂಗಾಯಣ ರಘು, ದತ್ತಣ್ಣ, ಮಿತ್ರ, ಶಾಲಿನಿ, ಜಯ, ಸಿದ್ದು ಮೂಲೆಮನೆ ಇತರರು ನಟಿಸಿದ್ದಾರೆ. ಚಿತ್ರಕ್ಕೆ ವಿಘ್ನೇಶ್‌ ರಾಜ್‌ ಛಾಯಾಗ್ರಹಣವಿದೆ. ಶಾಂತ ಕುಮಾರ್‌ ಸಂಕಲನವಿದೆ. ವರದರಾಜ್‌ ಕಲಾ ನಿರ್ದೇಶನ ಮತ್ತು ವಿಕ್ರಂ ಮೋರ್‌ ಸಾಹಸ ನಿರ್ದೇಶನವಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.